AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಕುಟುಂಬ ಸಮೇತ’ ಮದುವೆ ಕಹಾನಿಯ ಡೀಲ್​ ಖುದುರಿದ ಬಳಿಕ ಬದಲಾಯ್ತು ರಕ್ಷಿತ್​ ಶೆಟ್ಟಿ ತೀರ್ಮಾನ

Rakshit Shetty: ಇನ್ನೇನು ಮದುವೆಗೆ ಒಂದು ವಾರ ಇರುವಾಗ ಈ ಮದುವೆ ಬೇಡ ಅಂತ ಹುಡುಗಿ ಹೇಳ್ತಾಳೆ. ಇಂಥ ಕಥಾಹಂದರ ಇರುವ ‘ಸಕುಟುಂಬ ಸಮೇತ’ ಚಿತ್ರಕ್ಕೆ ರಕ್ಷಿತ್​ ಶೆಟ್ಟಿ ಬಂಡವಾಳ ಹೂಡಿದ್ದಾರೆ.

‘ಸಕುಟುಂಬ ಸಮೇತ’ ಮದುವೆ ಕಹಾನಿಯ ಡೀಲ್​ ಖುದುರಿದ ಬಳಿಕ ಬದಲಾಯ್ತು ರಕ್ಷಿತ್​ ಶೆಟ್ಟಿ ತೀರ್ಮಾನ
ಸಿರಿ, ರಕ್ಷಿತ್​ ಶೆಟ್ಟಿ
TV9 Web
| Edited By: |

Updated on: May 14, 2022 | 7:30 AM

Share

‘ಸಿಂಪಲ್​ ಸ್ಟಾರ್​’ ರಕ್ಷಿತ್​ ಶೆಟ್ಟಿ (Rakshit Shetty) ಅವರು ಕೇವಲ ನಟ ಮಾತ್ರವಲ್ಲ. ನಿರ್ದೇಶಕನಾಗಿಯೂ ಅವರು ಫೇಮಸ್​. ಅದೇ ರೀತಿ ನಿರ್ಮಾಪಕನಾಗಿ ಕೂಡ ಅವರು ಕನ್ನಡ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮದೇ ‘ಪರಂವಾ ಸ್ಟುಡಿಯೋಸ್​’ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿ ಅನೇಕ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಮುಖ್ಯ ವಿಚಾರ ಏನೆಂದರೆ ಅವರು ಅನೇಕ ಹೊಸ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ತಮ್ಮ ಈ ಪ್ರೊಡಕ್ಷನ್​ ಹೌಸ್​ ಮೂಲಕ ಅವಕಾಶ ನೀಡುತ್ತಿದ್ದಾರೆ. ಹಲವು ಸಿನಿಮಾ, ವೆಬ್​ ಸಿರೀಸ್​ಗಳು ‘ಪರಂವಾ ಸ್ಟುಡಿಯೋಸ್​’ (Paramvah Studios) ಬ್ಯಾನರ್​ ಮೂಲಕ ನಿರ್ಮಾಣ ಆಗುತ್ತಿವೆ. ರಕ್ಷಿತ್​ ಶೆಟ್ಟಿ ಬಂಡವಾಳ ಹೂಡಿರುವ ‘ಸಕುಟುಂಬ ಸಮೇತ’ ಚಿತ್ರ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ಬಹುತೇಕ ಹೊಸ ಕಲಾವಿದರು ನಟಿಸಿದ್ದಾರೆ. ಸದ್ದಿಲ್ಲದೇ ಚಿತ್ರೀಕರಣ ಮಾಡಲಾಗಿದೆ. ಈ ಮೊದಲು ನೇರವಾಗಿ ಒಟಿಟಿ ಪ್ಲಾಟ್​ಫಾರ್ಮ್​ ಮೂಲಕ ಬಿಡುಗಡೆ ಮಾಡಬೇಕು ಎಂದು ರಕ್ಷಿತ್​ ಶೆಟ್ಟಿ ತೀರ್ಮಾನಿಸಿದ್ದರು. ಆದರೆ ಒಟಿಟಿ ಡೀಲ್​ ಖುದುರಿದ ಬಳಿಕ ಅವರ ಮನಸ್ಸು ಬದಲಾಗಿದೆ. ಮೊದಲು ಥಿಯೇಟರ್​ನಲ್ಲಿ ಬಿಡುಗಡೆ ಮಾಡಿ ನಂತರ ಒಟಿಟಿಯಲ್ಲಿ ಪ್ರಸಾರ ಮಾಡಲು ಅವರು ತೀರ್ಮಾನಿಸಿದ್ದಾರೆ. ಈ ಕುರಿತು ‘ಸಕುಟುಂಬ ಸಮೇತ’ (Sakutumba Sametha Movie) ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ಹಂಚಿಕೊಂಡರು.

ಹೊಸ ತಲೆಮಾರಿನ ಹುಡುಗ-ಹುಡುಗಿಯರು ಮದುವೆ ವಿಚಾರದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳ ಕುರಿತಾಗಿ ಈ ಸಿನಿಮಾ ಮೂಡಿಬಂದಿದೆ ಎಂಬುದು ಟ್ರೇಲರ್​ ಮೂಲಕ ತಿಳಿದುಬಂದಿದೆ. ಟ್ರೇಲರ್​ ನೋಡಿದರೆ ಈ ಸಿನಿಮಾ ತುಂಬ ಸರಳವಾಗಿ ಮತ್ತು ಸಹಜವಾಗಿ ಮೂಡಿಬಂದಿದೆ ಎಂಬುದು ಗೊತ್ತಾಗುತ್ತದೆ. ಹುಡುಗ-ಹುಡುಗಿಯ ಮದುವೆ ಫಿಕ್ಸ್​ ಆಗಿರುತ್ತದೆ. ಇನ್ನೇನು ಮದುವೆಗೆ ಒಂದು ವಾರ ಇರುವಾಗ ಈ ಮದುವೆ ಬೇಡ ಅಂತ ಹುಡುಗಿ ಹೇಳ್ತಾಳೆ. ಮುಂದೇನಾಗುತ್ತದೆ ಎಂಬುದು ‘ಸಕುಟುಂಬ ಸಮೇತ’ ಚಿತ್ರದ ಕಥೆ. ಈ ಸಿನಿಮಾದಲ್ಲಿ ಸಿರಿ ರವಿಕುಮಾರ್​ ಮತ್ತು ಭರತ್​ ಜಿ.ಬಿ. ಅವರು ಜೋಡಿಯಾಗಿ ನಟಿಸಿದ್ದಾರೆ. ಖ್ಯಾತ ನಟ ಅಚ್ಯುತ್​ ಕುಮಾರ್​ ಅವರು ಕೂಡ ಅಭಿನಯಿಸಿದ್ದಾರೆ. ರಂಗಭೂಮಿ ಹಿನ್ನೆಲೆಯ ಕಲಾವಿದರಿಗೂ ಈ ಸಿನಿಮಾದಲ್ಲಿ ಅವಕಾಶ ನೀಡಲಾಗಿದೆ. ರಕ್ಷಿತ್​ ಶೆಟ್ಟಿ ಬ್ಯಾನರ್​ನಲ್ಲಿ ಕೆಲಸ ಮಾಡಿದಕ್ಕೆ ಅವರೆಲ್ಲರೂ ಸಂತಸ ಹಂಚಿಕೊಂಡಿದ್ದಾರೆ. ರಕ್ಷಿತ್​ ಶೆಟ್ಟಿ ನಟನೆ/ನಿರ್ದೇಶನದ ‘ಉಳಿದವರು ಕಂಡಂತೆ’ ಸಿನಿಮಾದ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದ ರಾಹುಲ್​ ಪಿಕೆ ಅವರು ‘ಸಕುಟುಂಬ ಸಮೇತ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

‘ನಾನು ಈ ಸಿನಿಮಾ ನೋಡಿದ್ದೇನೆ. ತುಂಬ ಚೆನ್ನಾಗಿ ಮೂಡಿಬಂದಿದೆ. ಬಹಳ ಖುಷಿ ಆಯಿತು. ನಾವು ಯಾರೆಗೆಲ್ಲ ಸಿನಿಮಾ ತೋರಿಸಿದ್ದೇವೋ ಅವರೆಲ್ಲರೂ ಇಷ್ಟಪಟ್ಟಿದ್ದಾರೆ. ಈ ಚಿತ್ರದ ಟಿವಿ ಮತ್ತು ಒಟಿಟಿ ಪ್ರಸಾರ ಹಕ್ಕುಗಳನ್ನು ನಾವು ಕಲರ್ಸ್​ ಕನ್ನಡ ಮತ್ತು ವೂಟ್​ಗೆ ಸೇಲ್​ ಮಾಡಿದ್ದೇವೆ. ಹಾಕಿದ ಬಂಡವಾಳಕ್ಕಿಂತ ಡಬಲ್​ ಆದಾಯ ಬಂದಿದೆ. ಚಿತ್ರಮಂದಿರದಲ್ಲಿ ರಿಲೀಸ್​ ಮಾಡುವ ಐಡಿಯಾ ನಮಗೆ ಇರಲಿಲ್ಲ. ಸಿನಿಮಾ ನೋಡಿದ ಬಳಿಕ ಕಲರ್ಸ್​ ವಾಹಿನಿಯರು ಒಂದು ಸಲಹೆ ನೀಡಿದರು. ಥಿಯೇಟರ್​ನಲ್ಲಿ ಈ ಸಿನಿಮಾ ರಿಲೀಸ್​ ಆಗಬೇಕು ಎಂದು ಅವರು ಹೇಳಿದರು. ಚಿತ್ರಮಂದಿರದಲ್ಲಿ ಇಂಥ ಚಿತ್ರಕ್ಕೆ ಖಂಡಿತಾ ಜನರು ಬರುತ್ತಾರೆ ಅಂತ ಹೇಳಿದರು. ನಮಗೂ ಹೌದು ಎನಿಸಿತು. ಮಲ್ಟಿಪ್ಲೆಕ್ಸ್​ಗಳಲ್ಲಿ ರಿಲೀಸ್​ ಮಾಡಿದರೆ ಜನರು ಬಂದು ನೋಡಿ ಎಂಜಾಯ್​ ಮಾಡುತ್ತಾರೆ ಎನಿಸಿತು. ಹಾಗಾಗಿ ರಿಲೀಸ್​ ಮಾಡುತ್ತಿದ್ದೇವೆ’ ಎಂದು ರಕ್ಷಿತ್​ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ
Image
‘ಕೆಜಿಎಫ್ 2’ ಸಿನಿಮಾವನ್ನು ಕೊಂಡಾಡಿದ ರಕ್ಷಿತ್ ಶೆಟ್ಟಿ; ಇಲ್ಲಿದೆ ವಿಡಿಯೋ
Image
Rakshit Shetty: ‘ರಮ್ಯಾ ನನ್ನ ಕ್ರಶ್​, ಆದರೆ ಮದುವೆ ಬಗ್ಗೆ ಹಬ್ಬಿರೋದು ಗಾಸಿಪ್​’: ನೇರ ಪ್ರಶ್ನೆಗೆ ಉತ್ತರ ನೀಡಿದ ರಕ್ಷಿತ್​ ಶೆಟ್ಟಿ
Image
‘777 ಚಾರ್ಲಿ’ ಚಿತ್ರ ನೋಡಿ ಮೊದಲ ವಿಮರ್ಶೆ ತಿಳಿಸಿದ ರಾಣಾ ದಗ್ಗುಬಾಟಿ; ಹೇಗಿದೆ ರಕ್ಷಿತ್​ ಶೆಟ್ಟಿ ಸಿನಿಮಾ?
Image
Ramya Divya Spandana: ರಕ್ಷಿತ್​ ಶೆಟ್ಟಿ ಜೊತೆ ರಮ್ಯಾ ಮದುವೆ ಆಗ್ಬೇಕು; ಫ್ಯಾನ್ಸ್​ ಬಯಕೆಗೆ ಉತ್ತರ ಕೊಟ್ಟ ಸ್ಯಾಂಡಲ್​ವುಡ್​ ಕ್ವೀನ್​

‘ಸಕುಟುಂಬ ಸಮೇತ’ ಚಿತ್ರಕ್ಕೆ ಮಿಧುನ್​ ಮುಕುಂದನ್​ ಸಂಗೀತ ನೀಡಿದ್ದಾರೆ. ಕರಮ್​ ಚಾವ್ಲಾ ಹಾಗೂ ಸಂದೀಪ್​ ಛಾಯಾಗ್ರಹಣ ಮಾಡಿದ್ದಾರೆ. ಭರತ್​ ಎಂ.ಸಿ. ಸಂಕಲನ ಮಾಡಿದ್ದಾರೆ. ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ಜಯಲಕ್ಷ್ಮಿ ಪಾಟೀಲ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ