AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakshit Shetty: ‘ರಮ್ಯಾ ನನ್ನ ಕ್ರಶ್​, ಆದರೆ ಮದುವೆ ಬಗ್ಗೆ ಹಬ್ಬಿರೋದು ಗಾಸಿಪ್​’: ನೇರ ಪ್ರಶ್ನೆಗೆ ಉತ್ತರ ನೀಡಿದ ರಕ್ಷಿತ್​ ಶೆಟ್ಟಿ

Rakshit Shetty | Ramya: ರಮ್ಯಾ ಕುರಿತ ಪ್ರಶ್ನೆಗಳಿಗೆ ರಕ್ಷಿತ್​ ಶೆಟ್ಟಿ ಅವರು ಉತ್ತರ ನೀಡಿದ್ದಾರೆ. ಹರಿದಾಡುತ್ತಿರುವ ಹಲವು ಅಂತೆ-ಕಂತೆಗಳಿಗೆ ‘ಸಿಂಪಲ್​​ ಸ್ಟಾರ್​’ ಪ್ರತಿಕ್ರಿಯಿಸಿದ್ದಾರೆ.

Rakshit Shetty: ‘ರಮ್ಯಾ ನನ್ನ ಕ್ರಶ್​, ಆದರೆ ಮದುವೆ ಬಗ್ಗೆ ಹಬ್ಬಿರೋದು ಗಾಸಿಪ್​’: ನೇರ ಪ್ರಶ್ನೆಗೆ ಉತ್ತರ ನೀಡಿದ ರಕ್ಷಿತ್​ ಶೆಟ್ಟಿ
ರಮ್ಯಾ, ರಕ್ಷಿತ್ ಶೆಟ್ಟಿ
TV9 Web
| Edited By: |

Updated on: May 13, 2022 | 1:11 PM

Share

ನಟ ರಕ್ಷಿತ್​ ಶೆಟ್ಟಿ (Rakshit Shetty) ಅವರು ನಿರ್ದೇಶಕನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಸಕ್ರಿಯರಾಗಿದ್ದಾರೆ. ಚಿತ್ರರಂಗದ ಹಲವು ವಿಭಾಗಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಅವರು ನಿರ್ಮಾಣ ಮಾಡಿರುವ ‘ಸಕುಟುಂಬ ಸಮೇತ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದೆ. ಮೇ 20ರಂದು ಈ ಚಿತ್ರ ರಿಲೀಸ್​ ಆಗಲಿದೆ. ‘ಸಕುಟುಂಬ ಸಮೇತ’ ಚಿತ್ರದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ‘ಟಿವಿ9 ಕನ್ನಡ’ ಜೊತೆ ಮಾತನಾಡಿದ ರಕ್ಷಿತ್​ ಶೆಟ್ಟಿ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ವಿಶೇಷ ಎಂದರೆ ಅವರು ನಟಿ ರಮ್ಯಾ (Ramya Divya Spandana) ಕುರಿತಾದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ರಮ್ಯಾ ಮತ್ತು ರಕ್ಷಿತ್ ಶೆಟ್ಟಿ ಅವರು ಒಟ್ಟಿಗೆ ಸಿನಿಮಾ ಮಾಡಬೇಕು ಎಂಬುದು ಅಭಿಮಾನಿಗಳ ಬಯಕೆ. ಅಷ್ಟೇ ಅಲ್ಲ, ಈ ಜೋಡಿ ಮದುವೆ (Ramya Marriage) ಕೂಡ ಆಗಲಿ ಎಂದು ಕೆಲವರು ಆಸೆ ಪಡುತ್ತಿದ್ದಾರೆ. ಈ ಕುರಿತಾಗಿ ಸೋಶಿಯಲ್​ ಮೀಡಿಯಾದಲ್ಲಿ ಅನೇಕ ಕಮೆಂಟ್​ಗಳು ಕಾಣಿಸಿದ್ದುಂಟು. ಆ ಬಗ್ಗೆ ಈಗ ರಕ್ಷಿತ್​ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

ರಮ್ಯಾ ಅವರ ಬಗ್ಗೆ ಎಲ್ಲರಂತೆ ರಕ್ಷಿತ್​ ಶೆಟ್ಟಿ ಅವರಿಗೂ ಅಭಿಮಾನ ಇದೆ. ‘ನಾನು ರಮ್ಯಾ ಅವರನ್ನು ಎಂದಿಗೂ ಭೇಟಿ ಮಾಡಿಲ್ಲ. ಮದುವೆ, ಲವ್​ ಇತ್ಯಾದಿ ಎಲ್ಲ ಬರೀ ಗಾಸಿಪ್​. ಚಿತ್ರರಂಗಕ್ಕೆ ಬಂದಾಗಿನಿಂದಲೂ ನಿನ್ನ ಕ್ರಶ್ ಯಾರು ಅಂತ ಕೇಳಿದರೆ ನಾನು ರಮ್ಯಾ ಅಂತಾನೇ ಹೇಳ್ತಾ ಇರೋದು. ಪ್ರತಿ ಬಾರಿ ಅವರು ನನ್ನ ಕೆಲಸವನ್ನು ಪ್ರಶಂಸಿಸುತ್ತಾರೆ. ಅದು ಅವರ ಒಳ್ಳೆಯ ಗುಣ’ ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ.

ರಕ್ಷಿತ್​ ಶೆಟ್ಟಿ ಮತ್ತು ರಮ್ಯಾ ಅವರು ಜೊತೆಯಾಗಿ ಸಿನಿಮಾ ಮಾಡಲಿ ಎಂಬ ಫ್ಯಾನ್ಸ್​ ಬಯಕೆಗೆ ರಕ್ಷಿತ್​ ಈಗ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ‘ಉಳಿದವರು ಕಂಡಂತೆ’ ಸಿನಿಮಾಗೆ ರಮ್ಯಾ ಅವರನ್ನು ಅಪ್ರೋಚ್​ ಮಾಡಿದ್ದೆ. ಕಥೆ ಕೇಳಿದ ಬಳಿಕ ಅರ್ಥ ಆಗಿಲ್ಲ ಅಂತ ಅವರು ಹೇಳಿದ್ದರು. ಅದು ಬಿಡಿ, ಸಿನಿಮಾ ರಿಲೀಸ್​ ಆದಮೇಲೆ ಸುಮಾರು ಜನರಿಗೆ ಅರ್ಥ ಆಗಲಿಲ್ಲ. ಸದ್ಯಕ್ಕೆ ರಮ್ಯಾ ಜೊತೆ ಕೆಲಸ ಮಾಡುವ ಸಾಧ್ಯತೆ ಕಡಿಮೆ. ನಾನು ಬರೆಯುತ್ತಿರುವ ಸ್ಕ್ರಿಪ್ಟ್​ನಲ್ಲಿ ಆ ಥರ ಇಲ್ಲ. ಆದರೆ ಖಂಡಿತವಾಗಿ ಅವರ ಜೊತೆ ಕೆಲಸ ಮಾಡಲು ನಾನು ಇಷ್ಟಪಡುತ್ತೇನೆ’ ಎಂದು ರಕ್ಷಿತ್​ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ
Image
Old Monk: ‘ಓಲ್ಡ್ ಮಾಂಕ್’ಗೆ ರಮ್ಯಾ ಶಹಬ್ಬಾಸ್​ಗಿರಿ; ಶ್ರೀನಿ ವೃತ್ತಿಜೀವನ ಸ್ಮರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ನಟಿ
Image
‘ಬ್ಲಾಂಕ್​’ ಕನ್ನಡ ಚಿತ್ರಕ್ಕೆ ರಮ್ಯಾ ಶುಭ ಹಾರೈಕೆ; ಟ್ರೇಲರ್​ ಕಂಡು ವಾವ್​ ಎಂದ ಸೆಲೆಬ್ರಿಟಿಗಳು
Image
ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ ಗೋಡೆ ನಿರ್ಮಾಣ ಆಗಿದೆ: ಹಿಜಾಬ್​ ವಿವಾದಕ್ಕೆ ಕಮಲ್​ ಹಾಸನ್​, ರಮ್ಯಾ ಪ್ರತಿಕ್ರಿಯೆ​
Image
ನಟಿ ರಮ್ಯಾ ಜೊತೆಗಿರುವ ರಾಣಿ ಯಾರು? ವಾವ್​.. ಆಕಸ್ಮಿಕವಾಗಿ ಸಿಕ್ಕ ಜೀವದ ಬಗ್ಗೆ ಈ ಪರಿ ಪ್ರೀತಿ

ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇರುವಾಗಲೇ ರಮ್ಯಾ ಅವರು ರಾಜಕೀಯದ ಕಡೆಗೆ ಕಾಲಿಟ್ಟರು. ಸಂಸದೆ ಆಗಿಯೂ ಕೆಲಸ ಮಾಡಿದರು. ನಂತರ ಅವರು ರಾಜಕೀಯಕ್ಕೆ ಗುಡ್​ ಬೈ ಹೇಳಿದರು. ಇಷ್ಟೆಲ್ಲ ಆದರೂ ಅವರು ಚಿತ್ರರಂಗದ ನಂಟು ಕಡಿದುಕೊಂಡಿಲ್ಲ. ನಟನೆಯಿಂದ ದೂರ ಉಳಿದಿದ್ದರೂ ಕೂಡ ಅನೇಕ ಸಿನಿಮಾಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಾ ಅವರು ಗಮನ ಸೆಳೆಯುತ್ತಿದ್ದಾರೆ.

ರಮ್ಯಾ ಅವರು ಆದಷ್ಟು ಬೇಗ ನಟನೆಗೆ ಮರಳಬೇಕು ಎಂದು ಫ್ಯಾನ್ಸ್​ ಆಸೆ ಪಡುತ್ತಿದ್ದಾರೆ. ಶೀಘ್ರದಲ್ಲೇ ರಮ್ಯಾ ಈ ಬಗ್ಗೆ ಒಂದು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ನಿರೀಕ್ಷೆ ಇದೆ. ಅವರು ಕಮ್​ಬ್ಯಾಕ್​ ಮಾಡಲಿರುವ ಪ್ರಾಜೆಕ್ಟ್​ ಯಾವ ರೀತಿ ಇರಲಿದೆ ಎಂದು ತಿಳಿದುಕೊಳ್ಳಲು ಅವರ ಅಭಿಮಾನಿ ಬಳಗ ತುದಿಗಾಲಿನಲ್ಲಿ ನಿಂತು ಕಾಯುತ್ತಿದೆ. ಖಾಸಗಿ ಮಾಧ್ಯಮವೊಂದು ರಕ್ಷಿತ್​ ಶೆಟ್ಟಿ ಜೊತೆ ನಡೆಸಿದ ಸಂದರ್ಶನದ ತುಣುಕನ್ನು ರಮ್ಯಾ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದರು. ರಕ್ಷಿತ್​ ಶೆಟ್ಟಿ ಜೊತೆ ಸಿನಿಮಾ ಮಾಡಲು ತಮಗೂ ಆಸಕ್ತಿ ಇದೆ ಎಂಬುದನ್ನು ಅವರು ಈ ಮೂಲಕ ಸೂಚಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ