AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್ ಶೆಟ್ಟಿ ವಿರುದ್ಧದ ಕೇಸ್; ಮಾತಿನ ಮೂಲಕವೇ ಬಗೆಹರಿಯಲಿದೆ ಕೇಸ್?

ನವೀನ್ ಕುಮಾರ್ ಎಂಬುವವರು ರಕ್ಷಿತ್ ಶೆಟ್ಟಿ ದೂರು ದಾಖಲು ಮಾಡಿದ್ದಾರೆ. ನವೀನ್ ಕುಮಾರ್ ಅವರು ಎಂಆರ್​​ಟಿ ಮ್ಯೂಸಿಕ್​ನ ಪಾಲುದಾರಿಕೆ ಹೊಂದಿದ್ದಾರೆ. ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಬಳಕೆ ಆದ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು..’ ಚಿತ್ರದ ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ರಕ್ಷಿತ್ ಶೆಟ್ಟಿ ವಿರುದ್ಧದ ಕೇಸ್; ಮಾತಿನ ಮೂಲಕವೇ ಬಗೆಹರಿಯಲಿದೆ ಕೇಸ್?
ರಕ್ಷಿತ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Jul 15, 2024 | 3:10 PM

Share

ರಕ್ಷಿತ್ ಶೆಟ್ಟಿ ಅವರ ವಿರುದ್ಧ ಕೇಸ್ ಹಾಕಲಾಗಿದೆ. ಎಂಆರ್​​ಟಿ​ ಮ್ಯೂಸಿಕ್ ಅವರು ಕಾನೂನಾತ್ಮಕವಾಗಿ ಹೋರಾಡಲು ಮುಂದಾಗಿದ್ದಾರೆ. ಇದಕ್ಕೆ ಕಾರಣ ಆಗಿರೋದು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ. ಈ ಚಿತ್ರದಲ್ಲಿ ಬಳಕೆ ಆದ ಎರಡು ಹಾಡುಗಳನ್ನು ಒಪ್ಪಿಗೆ ಇಲ್ಲದೆ ಬಳಕೆ ಮಾಡಲಾಗಿದೆ ಎಂದು ನವೀನ್​ ಕುಮಾರ್ ಅವರು ಕೇಸ್ ದಾಖಲು ಮಾಡಿದ್ದಾರೆ. ಇದನ್ನು ಆಧರಿಸಿ ಎಫ್​ಐಆರ್ ದಾಖಲು ಮಾಡಿಕೊಂಡು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ರಕ್ಷಿತ್ ಶೆಟ್ಟಿಗೆ ನೋಟಿಸ್ ನೀಡಲಾಗಿದೆ.

ಎಂಆರ್​ಟಿ ಲಾಯರ್ ಹೇಳೋದೇನು?

ಎಂಆರ್​ಟಿ ಮ್ಯೂಸಿಕ್‌ ಕಂಪನಿಯ ವಕೀಲ ಪ್ರಣಂ ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ‘ಪರಂವ ಸ್ಟುಡಿಯೋಸ್ ತೆಗೆದಿರೋ ಬ್ಯಾಚುಲರ್ ಪಾರ್ಟಿ ಪಿಕ್ಚರ್​ನಲ್ಲಿ ಎಂಆರ್​ಟಿ ಮ್ಯೂಸಿಕ್ ಸಂಸ್ಥೆಯ ‘ಗಾಳಿ ಮಾತು ಹಾಗೂ ಒಮ್ಮೆ ನನ್ನನ್ನು ಹಾಡನ್ನು ಯಾವುದೇ ಒಪ್ಪಿಗೆ ಇಲ್ಲದೆ ಬಳಸಿದ್ದಾರೆ. ಹಾಗೆ ಸಿನಿಮಾ ಬಿಡುಗಡೆ ಮಾಡಿದ್ದಾರೆ. ಹೀಗಾಗಿ ಯಶವಂತಪುರ ಪೋಲೀಸ್ ಸ್ಟೇಶನ್​ನಲ್ಲಿ ದೂರು ದಾಖಲು ಮಾಡಿದ್ದೇವೆ’ ಎಂದಿದ್ದಾರೆ ಅವರು.

ಮಾತುಕತೆ ಮೂಲಕ?

‘ಪರಂವ ಸ್ಟುಡಿಯೋ’ ಅವರಿಂದ ಪ್ರಕರಣದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸದ್ಯ ಸಿನಿಮಾದಲ್ಲಿ ಚಿಕ್ಕ ಬಿಟ್ ಅಷ್ಟೇ ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರೂ ಕೂತು ಮಾತನಾಡಿ ವಿವಾದ ಪರಿಹರಿಸಲು ಪ್ರಯತ್ನ ನಡೆಯೋ ಸಾಧ್ಯತೆ ಇದೇ ಎನ್ನಲಾಗಿದೆ. ರಕ್ಷಿತ್ ಶೆಟ್ಟಿ ಕಾಂಪ್ರೋಮೈಸ್ ಆಗಲು ರೆಡಿ ಇದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಸ್ಯಾಂಡಲ್​ವುಡ್​ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು

ವಿಚಾರಣೆಗೆ ಹಾಜರಾಗಿಲ್ಲ

ರಕ್ಷಿತ್ ಶೆಟ್ಟಿಗೆ ಪತ್ರದ ಮುಖಾಂತರ ಯಶವಂತಪುರ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ. ಇಂದೇ ವಿಚಾರಣೆಗೆ ಹಾಜರಾಗಲು ಯಶವಂತಪುರ ಪೊಲೀಸರಿಂದ ನೋಟಿಸ್ ನೀಡಿದ್ದಾರೆ. ರಕ್ಷಿತ್ ಶೆಟ್ಟಿ ಇಲ್ಲದ ಕಾರಣ ಮ್ಯಾನೇಜರ್‌ಗೆ ಸಿಬ್ಬಂದಿ ನೋಟಿಸ್‌ ಕೊಟ್ಟಿದ್ದಾರೆ. ಸಿನಿಮಾವೊಂದರ ಸಂಬಂಧ ಹೊರ ಜಿಲ್ಲೆಯಲ್ಲಿ ರಕ್ಷಿತ್ ಇದ್ದಾರೆ. ವಾಪಸಾದ ಬಳಿಕ ವಿಚಾರಣೆಗೆ ಹಾಜರಾಗುವುದಾಗಿ ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್