AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಬಗ್ಗೆ ಕೆಟ್ಟ ಕಮೆಂಟ್​ಗಳ ಸುರಿಮಳೆ; ರಕ್ಷಿತ್​ ಶೆಟ್ಟಿ ಪ್ರತಿಕ್ರಿಯೆಗೆ ಭೇಷ್​ ಎನ್ನಲೇಬೇಕು

Rashmika Mandanna: ಅನೇಕ ಅಭಿಮಾನಿಗಳು ರಶ್ಮಿಕಾ ಬಗ್ಗೆ ಕೆಟ್ಟದಾಗಿ ಕಮೆಂಟ್​ ಮಾಡಿದ್ದಾರೆ. ಎಷ್ಟರಮಟ್ಟಿಗೆಂದರೆ, ಆ ಕುರಿತು ಸ್ವತಃ ರಕ್ಷಿತ್​ ಶೆಟ್ಟಿ ಪ್ರತಿಕ್ರಿಯೆ ನೀಡುವುದು ಅನಿವಾರ್ಯ ಆಯಿತು.

ರಶ್ಮಿಕಾ ಬಗ್ಗೆ ಕೆಟ್ಟ ಕಮೆಂಟ್​ಗಳ ಸುರಿಮಳೆ; ರಕ್ಷಿತ್​ ಶೆಟ್ಟಿ ಪ್ರತಿಕ್ರಿಯೆಗೆ ಭೇಷ್​ ಎನ್ನಲೇಬೇಕು
ರಕ್ಷಿತ್​-ರಶ್ಮಿಕಾ
Follow us
TV9 Web
| Updated By: ಮದನ್​ ಕುಮಾರ್​

Updated on: Jun 08, 2021 | 4:10 PM

ನಟಿ ರಶ್ಮಿಕಾ ಮಂದಣ್ಣ ಅವರನ್ನು ಕಂಡರೆ ಒಂದು ವರ್ಗದ ನೆಟ್ಟಿಗರು ಉರಿದು ಬೀಳುತ್ತಾರೆ. ಮನಬಂದಂತೆ ಟ್ರೋಲ್ ಮಾಡುತ್ತಾರೆ. ಅವರ ಮಾಜಿ ಪ್ರಿಯಕರ ರಕ್ಷಿತ್​ ಶೆಟ್ಟಿಯ ವಿಚಾರ ಬಂದಾಗಲೂ ರಶ್ಮಿಕಾಗೆ ಖಾರದ ಕಮೆಂಟ್​ಗಳ ಮೂಲಕ ಜನರು ತಿರುಗೇಟು ನೀಡುತ್ತಾರೆ. ಆದರೆ ಇದೆಲ್ಲ ಸರಿಯಲ್ಲ ಎಂದು ರಕ್ಷಿತ್​ ಶೆಟ್ಟಿ ಹೇಳಿದ್ದಾರೆ. ಹಾಗೆ ನೋಡಿದರೆ, ಈಗ ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್​ ಶೆಟ್ಟಿ ನಡುವೆ ಯಾವುದೇ ಕಿರಿಕ್​ ಇಲ್ಲ. ಹಾಗಿದ್ದರೂ ಕೂಡ ಅಭಿಮಾನಿಗಳು ಮಾತ್ರ ರಶ್ಮಿಕಾ ಬಗ್ಗೆ ಕೆಟ್ಟ ಕಮೆಂಟ್​ ಮಾಡುತ್ತಿರುವುದು ರಕ್ಷಿತ್​ಗೆ ಬೇಸರ ಮೂಡಿಸಿದೆ.

ಜೂ.6ರಂದು ರಕ್ಷಿತ್​ ಶೆಟ್ಟಿ 38ನೇ ವರ್ಷದ ಬರ್ತ್​​ಡೇ ಆಚರಿಸಿಕೊಂಡರು. ಅಂದು ಅವರ ‘777 ಚಾರ್ಲಿ’ ಸಿನಿಮಾದ ಟೀಸರ್​ ರಿಲೀಸ್​ ಆಗಿ ಒಳ್ಳೆಯ ಪ್ರತಿಕ್ರಿಯೆ ಪಡೆಯಿತು. ಈ ಎಲ್ಲ ವಿಚಾರಗಳ ಬಗ್ಗೆ ಮಾತನಾಡಲು ಅವರು ಸೋಮವಾರ (ಜೂ.7) ಇನ್​ಸ್ಟಾಗ್ರಾಮ್​ನಲ್ಲಿ ಲೈವ್​ ಬಂದಿದ್ದರು. ಈ ವೇಳೆ ಅನೇಕ ಅಭಿಮಾನಿಗಳು ರಶ್ಮಿಕಾ ಬಗ್ಗೆ ಕೆಟ್ಟದಾಗಿ ಕಮೆಂಟ್​ ಮಾಡಿದ್ದಾರೆ. ಎಷ್ಟರಮಟ್ಟಿಗೆಂದರೆ, ಆ ಕುರಿತು ಸ್ವತಃ ರಕ್ಷಿತ್​ ಶೆಟ್ಟಿ ಪ್ರತಿಕ್ರಿಯೆ ನೀಡುವುದು ಅನಿವಾರ್ಯ ಆಯಿತು.

‘ಕೆಲವೊಂದು ಕಮೆಂಟ್​ಗಳನ್ನು ನೋಡೋಕೆ ಬಹಳ ಬೇಜಾರಾಗುತ್ತೆ. ಆದರೆ ಆ ಕಮೆಂಟ್​ಗಳು ನನ್ನ ಬಗ್ಗೆ ಇರೋದಲ್ಲ. ಬೇರೆಯವರ ಬಗ್ಗೆ ಇರುವಂಥದ್ದು. ನಾನು ಎಲ್ಲರಲ್ಲೂ ಒಂದು ಮನವಿ ಮಾಡಿಕೊಳ್ಳುತ್ತೇನೆ. ಹಳೆಯದನ್ನು ಬಿಟ್ಟು ಬಿಡೋಣ. ಮುಗಿದು ಹೋಗಿದ್ದು ಆಗಿ ಹೋಯ್ತು. ಅದರ ಬಗ್ಗೆ ಮಾತನಾಡಿ ಪ್ರಯೋಜನ ಇಲ್ಲ. ಯಾವುದೇ ಮನುಷ್ಯರಿಗೂ ಅಗೌರವ ತೋರಿಸುವುದು ಬೇಡ. ನಮ್ಮ ಬಗ್ಗೆ ನಾವೇ ಅಸಹ್ಯಪಟ್ಟುಕೊಳ್ಳುವ ರೀತಿಯ ಕಮೆಂಟ್​ಗಳನ್ನು ನಾವು ಬೇರೆಯವರಿಗೂ ಮಾಡಬಾರದು’ ಎಂದು ರಕ್ಷಿತ್​ ಹೇಳಿದ್ದಾರೆ.

‘ಎಲ್ಲರಲ್ಲೂ ನಾನು ಮನವಿ ಮಾಡಿಕೊಳ್ಳುತ್ತೇನೆ. ಮೊದಲು ಮನುಷ್ಯರಾಗೋಣ. ಎಲ್ಲರನ್ನೂ ಗೌರವಿಸೋಣ. ಎಲ್ಲರಿಗೂ ಅವರದ್ದೇ ಆದ ಬದುಕು ಇದೆ. ಈ ಕಮೆಂಟ್​ ಸೆಕ್ಷನ್​ನಲ್ಲಿ ನಾನು ಒಳ್ಳೆಯ ಕಮೆಂಟ್​ಗಳನ್ನು ನೋಡೋಕೆ ಇಷ್ಟಪಡ್ತೀನಿ. ನಮ್ಮ ಸಿನಿಮಾ ಬಗ್ಗೆ ಕಮೆಂಟ್ಸ್​ ನೋಡೋಕೆ ಇಷ್ಟಪಡ್ತೀನಿ’ ಎನ್ನುವ ಮೂಲಕ ಅಭಿಮಾನಿಗಳಿಗೆ ರಕ್ಷಿತ್​ ಶೆಟ್ಟಿ ಬುದ್ಧಿಮಾತು ಹೇಳಿದ್ದಾರೆ.

ಇಷ್ಟು ಕೂಲ್​ ಆಗಿ ಉತ್ತರಿಸಿರುವ ಅವರಿಗೆ ಅಭಿಮಾನಿಗಳು ಹಲವು ಬಗೆಯಲ್ಲಿ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಇನ್ಮೇಲಾದರೂ ರಶ್ಮಿಕಾ ಮಂದಣ್ಣ ಬಗ್ಗೆ ಕೆಟ್ಟ ಕಮೆಂಟ್​ಗಳು ನಿಲ್ಲುತ್ತವೋ ಇಲ್ಲವೋ ಎಂಬುದು ನೆಟ್ಟಿಗರ ವರ್ತನೆಗೆ ಮೇಲೆ ನಿಂತಿದೆ.

ಇದನ್ನೂ ಓದಿ:

Rakshit Shetty Birthday: ‘ಸಿಂಪಲ್​ ಸ್ಟಾರ್​’ ರಕ್ಷಿತ್​ ಶೆಟ್ಟಿ ಅಭಿಮಾನಿಗಳ ಪಾಲಿಗೆ ‘ಭರವಸೆಯ ಸ್ಟಾರ್’​ ಆಗಿದ್ದು ಹೇಗೆ?

ಪ್ರೀತಿ ಹುಟ್ಟೋಕೆ​ 3 ಸೆಕೆಂಡ್​ ಸಾಕು; ಆದ್ರೆ ರಶ್ಮಿಕಾಗೆ 0.3 ಸೆಕೆಂಡ್​ನಲ್ಲಿ ಹೊಸ ಹೃದಯದ ಜೊತೆ ಲವ್ ಶುರು

ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್