AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮುಂದೆ ಕಡಿಮೆ ಸಿನಿಮಾಗಳಲ್ಲಿ ನಟಿಸುವೆ: ರಕ್ಷಿತ್ ಶೆಟ್ಟಿ ಗುರಿ ಬೇರೆಯೇ ಇದೆ

Rakshit Shetty: 'ಸಪ್ತ ಸಾಗರದಾಚೆ ಎಲ್ಲೊ' ಸಿನಿಮಾ ಬಿಡುಗಡೆಯ ಹೊಸ್ತಿಲಲ್ಲಿರುವ ರಕ್ಷಿತ್ ಶೆಟ್ಟಿ, ತಾವಿನ್ನು ಹೆಚ್ಚು ಸಿನಿಮಾದಲ್ಲಿ ನಟಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಇನ್ನು ಮುಂದೆ ಕಡಿಮೆ ಸಿನಿಮಾಗಳಲ್ಲಿ ನಟಿಸುವೆ: ರಕ್ಷಿತ್ ಶೆಟ್ಟಿ ಗುರಿ ಬೇರೆಯೇ ಇದೆ
ರಕ್ಷಿತ್ ಶೆಟ್ಟಿ
ಮಂಜುನಾಥ ಸಿ.
|

Updated on: Aug 17, 2023 | 8:59 PM

Share

ನಟ ರಕ್ಷಿತ್ ಶೆಟ್ಟಿ (Rakshit Shetty) ಕನ್ನಡದ ಪ್ರತಿಭಾವಂತ ನಟರಲ್ಲಿ ಒಬ್ಬರು. ಸ್ಟಾರ್ ಆಗುವತ್ತ ದಾಪುಗಾಲು ಹಾಕಿರುವ ರಕ್ಷಿತ್ ಶೆಟ್ಟಿ, ತಮ್ಮ ಈ ಹಿಂದಿನ ‘777 ಚಾರ್ಲಿ‘ (777 Charlie) ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ನಟ ಎನಿಸಿಕೊಂಡಿದ್ದಾರೆ. ಸಾಕಷ್ಟು ಸಿನಿಮಾ ಅವಕಾಶ ಇದ್ದಾಗಿಯೂ ಗುಣಮಟ್ಟದ ಸಿನಿಮಾಗಳಲ್ಲಷ್ಟೆ ನಟಿಸಬೇಕೆಂಬ ಉದ್ದೇಶದಿಂದ ಸಿನಿಮಾದಿಂದ ಸಿನಿಮಾಕ್ಕೆ ದೊಡ್ಡ ಗ್ಯಾಪ್ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೊ‘ (Sapta Sagaradache ello) ಸಿನಿಮಾ ಬಿಡುಗಡೆಗೆ ತಯಾರಾಗಿ ನಿಂತಿರುವಾಗ, ತಾವಿನ್ನು ಹೆಚ್ಚು ಸಿನಿಮಾಗಳಲ್ಲಿ ನಟಿಸುವುದಿಲ್ಲ ಎಂದು ರಕ್ಷಿತ್ ಘೋಷಿಸಿದ್ದಾರೆ.

‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಟ್ರೈಲರ್ ಲಾಂಚ್ ಇವೆಂಟ್​ನಲ್ಲಿ ಮಾತನಾಡಿದ ರಕ್ಷಿತ್ ಶೆಟ್ಟಿ, ”ನಾನಿನ್ನು ಹೆಚ್ಚು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡುತ್ತೇನೆ. ನನ್ನ ಸಿನಿಮಾಗಳಲ್ಲಿ ನಾನು ನಟಿಸುತ್ತೇನೆ, ಆದರೆ ನಟಿಸಬೇಕು ಎಂಬ ಕಾರಣಕ್ಕೆ ಸಿಕ್ಕ ಸಿನಿಮಾಗಳಲ್ಲೆಲ್ಲ ನಟಿಸುವುದಿಲ್ಲ, ಒಂದೊಮ್ಮೆ ನಿರ್ದೇಶಕ ಹೇಮಂತ್ ರಾವ್ ಯಾವುದೇ ಸಿನಿಮಾದ ಯಾವುದೇ ಪಾತ್ರಕ್ಕೆ ಕರೆದರೂ ಹೋಗಿ ನಟಿಸುತ್ತೇನೆ” ಎಂದಿದ್ದಾರೆ.

ರಕ್ಷಿತ್ ಶೆಟ್ಟಿಗೆ ನಟನೆಗಿಂತಲೂ ನಿರ್ದೇಶನದ ಕಡೆಗೆ ಹೆಚ್ಚು ಒಲವಿದೆ. ‘ಉಳಿದವರು ಕಂಡಂತೆ’ ಸಿನಿಮಾ ನಿರ್ದೇಶಿಸಿರುವ ರಕ್ಷಿತ್ ಶೆಟ್ಟಿ ಇದೀಗ ಅದರದ್ದೇ ಪ್ರೀಕ್ವೆಲ್ ಆಗಿರುವ ‘ರಿಚರ್ಡ್ ಆಂಟೊನಿ’ ಸಿನಿಮಾದ ನಿರ್ದೇಶನಕ್ಕೆ ತಯಾರಾಗಿದ್ದಾರೆ. ಸ್ವತಃ ಹಲವು ಬಾರಿ ರಕ್ಷಿತ್ ಶೆಟ್ಟಿ ತಮಗೆ ನಿರ್ದೇಶನದ ಮೇಲಿರುವ ಪ್ರೀತಿಯ ಬಗ್ಗೆ ಮಾತನಾಡಿದ್ದಾರೆ. ಹಿಂದೊಮ್ಮೆ ಸಂದರ್ಶನದಲ್ಲಿ ಒಂದು ಸಮಯದ ಬಳಿಕ ನಾನು ನಟನೆಯನ್ನೇ ನಿಲ್ಲಿಸಿಬಿಡುತ್ತೇನೆ, ಕೇವಲ ನಿರ್ದೇಶನಕ್ಕಷ್ಟೆ ಸೀಮಿತವಾಗುತ್ತೇನೆ ಎಂದಿದ್ದರು.

ಇದನ್ನೂ ಓದಿ:ಸಪ್ತ ಸಾಗರದಾಚೆ ಎಲ್ಲೊ ಟ್ರೈಲರ್ ಬಿಡುಗಡೆ: ಸಾಗರದಂಥಹಾ ಪ್ರೇಮದ ಕತೆ, ತಣ್ಣಗೆ ಹರಿವ ನದಿಯಂಥಹಾ ಸಿನಿಮಾ

ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ ರಕ್ಷಿತ್ ಶೆಟ್ಟಿ, ”ಉಳಿದವರು ಕಂಡಂತೆ’ ಸಿನಿಮಾ ಮಾಡುವಾಗ, ಯಾವುದೇ ನಿರ್ದೇಶಕನಿಗಾದರೂ ಅವನ ಕಲ್ಪನೆಗೆ ತಕ್ಕಂತೆ ಸಿನಿಮಾ ಮಾಡುವ ಅವಕಾಶ ಸೃಷ್ಟಿಸಬೇಕು ಹಾಗೆ ಒಂದು ವೇದಿಕೆಯನ್ನು ತಯಾರು ಮಾಡಬೇಕು, ಯಾವ ನಿರ್ದೇಶಕನೂ ಬಜೆಟ್ ಕಾರಣಕ್ಕೆ ಯೋಚನೆಯನ್ನು ಸೀಮಿತಗೊಳಿಸಿಕೊಳ್ಳಬಾರದು, ಸ್ವತಃ ನನಗೂ ನಾನು ನನಗೆ ಅನ್ನಿಸಿದಂತೆ ಸಿನಿಮಾ ನಿರ್ದೇಶಿಸಲು ವೇದಿಕೆ ರೆಡಿ ಮಾಡಿಕೊಳ್ಳಬೇಕು ಎಂದುಕೊಂಡಿದ್ದೆ. ಪರಮವಃ ಮೂಲಕ ಅದನ್ನು ಸಾಧಿಸುವ ದಾರಿಯಲ್ಲಿದ್ದೇನೆ” ಎಂದಿದ್ದಾರೆ.

ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾವನ್ನು ಹೇಮಂತ್ ರಾವ್ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಮೊದಲ ಭಾಗ ಸೆಪ್ಟೆಂಬರ್ 1 ಕ್ಕೆ ಬಿಡುಗಡೆ ಆಗುತ್ತಿದೆ. ಸಿನಿಮಾದಲ್ಲಿ ರುಕ್ಮಿಣಿ ವಸಂತ್, ಚೈತ್ರಾ ಆಚಾರ್ ನಾಯಕಿಯಾಗಿ ನಟಿಸಿದ್ದಾರೆ. ಜೊತೆಗೆ ಅಚ್ಯುತ್ ಕುಮಾರ್, ಅವಿನಾಶ್ ಇನ್ನಿತರೆ ನಟರುಗಳು ಇದ್ದಾರೆ. ಸಿನಿಮಾಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?