AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘777 ಚಾರ್ಲಿ 2’ ಸಿನಿಮಾದಲ್ಲಿ ನಟಿಸೊಲ್ಲ: ಕಾರಣ ತಿಳಿಸಿದ ರಕ್ಷಿತ್ ಶೆಟ್ಟಿ

Rakshit Shetty: ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿಗೆ ದೊಡ್ಡ ಗೆಲುವು ತಂದುಕೊಟ್ಟ, ನಟನಾಗಿ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಪರಿಚಯ ತಂದುಕೊಟ್ಟ ಸಿನಿಮಾ '777 ಚಾರ್ಲಿ' ಆದರೆ ಆ ಸಿನಿಮಾದ ಎರಡನೇ ಭಾಗದಲ್ಲಿ ನಾನು ನಟಿಸಲ್ಲ ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ. ಅದಕ್ಕೆ ಕಾರಣವನ್ನೂ ನೀಡಿದ್ದಾರೆ.

'777 ಚಾರ್ಲಿ 2' ಸಿನಿಮಾದಲ್ಲಿ ನಟಿಸೊಲ್ಲ: ಕಾರಣ ತಿಳಿಸಿದ ರಕ್ಷಿತ್ ಶೆಟ್ಟಿ
ಚಾರ್ಲಿ
ಮಂಜುನಾಥ ಸಿ.
|

Updated on: Oct 13, 2023 | 4:39 PM

Share

ಕೆಜಿಎಫ್ 2‘ (KGF 2) ಸಿನಿಮಾ ಬಳಿಕ ಪ್ಯಾನ್ ಇಂಡಿಯಾ (Pan India) ಲೆವೆಲ್​ನಲ್ಲಿ ಬಿಡುಗಡೆ ಆಗಿ, ‘ಕೆಜಿಎಫ್​’ಗೆ ಮಾತ್ರವಲ್ಲ ಶ್ರಮವಹಿಸಿ ಕೆಲಸ ಮಾಡಿದರೆ, ಕತೆಯಲ್ಲಿ ಗುಣಮಟ್ಟ ಇದ್ದರೆ ಎಲ್ಲ ಸಿನಿಮಾಗಳನ್ನು ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಗೆಲ್ಲುವಂತೆ ಮಾಡಬಹುದು ಎಂದು ತೋರಿಸಿಕೊಟ್ಟ ಸಿನಿಮಾ ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’. ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡಿದ ಜೊತೆಗೆ ರಾಷ್ಟ್ರಪ್ರಶಸ್ತಿಯನ್ನು ಸಹ ಪಡೆದುಕೊಂಡಿತು ಈ ಸಿನಿಮಾ. ಇದೀಗ ಇನ್ನೋವೇಟಿವ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟ್​ನಲ್ಲಿಯೂ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಆದರೆ ರಕ್ಷಿತ್ ಶೆಟ್ಟಿ ಮಾತ್ರ ‘777 ಚಾರ್ಲಿ 2’ ಸಿನಿಮಾದಲ್ಲಿ ತಾವು ನಟಿಸುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.

ಇನ್ನೋವೇಟಿವ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟ್​ನಲ್ಲಿ ಭಾಗವಹಿಸಿ ‘777 ಚಾರ್ಲಿ’ ಸಿನಿಮಾದ ನಟನೆಗೆ ಪ್ರಶಸ್ತಿ ಪಡೆದು ಮಾತನಾಡಿದ ರಕ್ಷಿತ್ ಶೆಟ್ಟಿ, ”777 ಚಾರ್ಲಿ’ ಸಿನಿಮಾದ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣದ ಸಮಯದಲ್ಲಿ ನಿರ್ದೇಶಕ ಕಿರಣ್ ರಾಜ್ ಬಂದು, ‘777 ಚಾರ್ಲಿ 2′ ಸಿನಿಮಾಕ್ಕೆ ನನಗೆ ಒಳ್ಳೆ ಐಡಿಯಾ ಬಂದಿದೆ ಮಾಡೋಣ’ ಎಂದರು. ನಾನು ಕೈ ಮುಗಿದು ದಯವಿಟ್ಟು ಬೇಡಪ್ಪ, ಚಾರ್ಲಿ ಒಬ್ಬಳನ್ನೇ ಇಟ್ಟುಕೊಂಡು ಸಿನಿಮಾ ಮಾಡು ಆದರೆ ನಾನು ಮಾತ್ರ ನಟಿಸಲ್ಲ ಅಂದುಬಿಟ್ಟೆ” ಎಂದು ನೆನಪು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಜೊತೆ ಸಂಪರ್ಕದಲ್ಲಿದ್ದೇನೆ, ಆಕೆ ಬಗ್ಗೆ ಹೆಮ್ಮೆ ಇದೆ: ರಕ್ಷಿತ್ ಶೆಟ್ಟಿ

”ನಾಯಿ ಚಾರ್ಲಿ ಜೊತೆ ನಟಿಸುವುದು ಬಹಳ ಕಷ್ಟವಾದ ಕೆಲಸ. ಪ್ರತಿ ಸೀನ್​ಗೂ 30-40 ಟೇಕ್​ಗಳನ್ನು ಕೊಡಬೇಕಿತ್ತು. ಅಲ್ಲದೆ ನಾನು ಪ್ರತಿ ಟೇಕ್​ನಲ್ಲಿಯೂ ನನ್ನ ಬೆಸ್ಟ್ ಫರ್ಪಾಮೆನ್ಸ್ ಅನ್ನೇ ನೀಡಬೇಕಿತ್ತು, ಏಕೆಂದರೆ ಚಾರ್ಲಿ ಯಾವ ಟೇಕ್​ನಲ್ಲಿ ಸರಿಯಾಗಿ ನಟಿಸುತ್ತಿದ್ದಳು ಗೊತ್ತಾಗುತ್ತಿರಲಿಲ್ಲ. ಸುಮಾರು 150 ದಿನಗಳ ಕಾಲ ಚಿತ್ರೀಕರಣ ಮಾಡಿದೆವು. ನನಗೆ ಬಹಳ ಕಷ್ಟ ಎನಿಸಿತ್ತು. ಹಾಗಾಗಿ ಮತ್ತೊಮ್ಮೆ ಆ ಸಾಹಸ ಮಾಡುವುದು ಬೇಡ ಎಂದು ನಿರ್ಧಾರ ಮಾಡಿದೆ” ಎಂದು ನಗುತ್ತಲೇ ಹೇಳಿದರು ರಕ್ಷಿತ್ ಶೆಟ್ಟಿ.

”ಸಿನಿಮಾದ ಚಿತ್ರೀಕರಣ ಸಮಯದಲ್ಲಿ ಬಹಳ ಕಷ್ಟಪಟ್ಟೆವು, ಆದರೆ ಆ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ, ಸಿಗುತ್ತಿರುವ ಪ್ರಶಸ್ತಿಗಳು ನಮ್ಮ ಶ್ರಮವನ್ನೆಲ್ಲ ಮರೆಸಿವೆ. ನನ್ನ ಪಾಲಿಗೆ, ನಮ್ಮ ಪರಂವಃ ಸ್ಟುಡಿಯೋ ಪಾಲಿಗೆ ‘777 ಚಾರ್ಲಿ’ ಬಹಳ ಪ್ರಮುಖವಾದ ಸಿನಿಮಾ. ನಮ್ಮ ಸ್ಟುಡಿಯೋದ ಮೊದಲ ಪ್ಯಾನ್ ಇಂಡಿಯಾ ಹಾಗೂ ಅದ್ಧೂರಿ ಯಶಸ್ಸು ಗಳಿಸಿದ ಸಿನಿಮಾ. ‘777 ಚಾರ್ಲಿ’ ನನ್ನ ಪಾಲಿಗೆ ಯಾವಾಗಲೂ ವಿಶೇಷವಾದ ಸಿನಿಮಾ ಆಗಿರುತ್ತದೆ” ಎಂದಿದ್ದಾರೆ ರಕ್ಷಿತ್ ಶೆಟ್ಟಿ.

ಇದನ್ನೂ ಓದಿ:ಯಶ್ ಬಗ್ಗೆ ರಕ್ಷಿತ್ ಶೆಟ್ಟಿಗೆ ಯಾವ ರೀತಿಯ ಅಭಿಪ್ರಾಯ ಇದೆ? ‘SSE’ ಸ್ಟಾರ್ ವಿವರಿಸಿದ್ದು ಹೀಗೆ

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿದೆ. ಸಿನಿಮಾದ ಎರಡನೇ ಭಾಗ ಶೀಘ್ರದಲ್ಲಿಯೇ ಬಿಡುಗಡೆ ಆಗಲಿದೆ. ಇದರ ನಡುವೆ ‘ರಿಚರ್ಡ್ ಆಂಟೊನಿ’ ಸಿನಿಮಾ ನಿರ್ದೇಶಿಸಲು ರಕ್ಷಿತ್ ಶೆಟ್ಟಿ ತಯಾರಾಗುತ್ತಿದ್ದಾರೆ. ಈ ಸಿನಿಮಾವನ್ನು ರಕ್ಷಿತ್ ಅವರೇ ನಿರ್ದೇಶಿಸುತ್ತಿದ್ದು, ಹೊಂಬಾಳೆ ಫಿಲಮ್ಸ್ ಬಂಡವಾಳ ಹೂಡುತ್ತಿದೆ. ಅದರ ಬಳಿಕ ‘ಪುಣ್ಯಕೋಟಿ’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಇನ್ನು ಮುಂದೆ ಬೇರೆಯವರ ಸಿನಿಮಾದಲ್ಲಿ ಕಡಿಮೆ ನಟಿಸಿ, ನನ್ನ ಕತೆಗಳನ್ನು ಸಿನಿಮಾ ಮಾಡುವ ಬಗ್ಗೆ ಗಮನ ಹರಿಸಲಿದ್ದೇನೆ ಎಂದು ಈ ಹಿಂದೆ ರಕ್ಷಿತ್ ಹೇಳಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?