AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಮುಂದಿನ ಎರಡು ಸಿನಿಮಾಗೆ ಇದುವೇ ಸ್ಫೂರ್ತಿ’; ವಿಶೇಷ ವಿಡಿಯೋ ಮೂಲಕ ಹಲವು ವಿಷಯ ತಿಳಿಸಿದ ರಕ್ಷಿತ್ ಶೆಟ್ಟಿ

‘ರಿಚರ್ಡ್​ ಆಂಟನಿ’ ಹಾಗೂ ‘ಪುಣ್ಯಕೋಟಿ’ ಸಿನಿಮಾಗಳನ್ನು ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಬಗ್ಗೆ ರಕ್ಷಿತ್ ಮಾತನಾಡಿದ್ದಾರೆ.

‘ನನ್ನ ಮುಂದಿನ ಎರಡು ಸಿನಿಮಾಗೆ ಇದುವೇ ಸ್ಫೂರ್ತಿ’; ವಿಶೇಷ ವಿಡಿಯೋ ಮೂಲಕ ಹಲವು ವಿಷಯ ತಿಳಿಸಿದ ರಕ್ಷಿತ್ ಶೆಟ್ಟಿ
ರಕ್ಷಿತ್
ರಾಜೇಶ್ ದುಗ್ಗುಮನೆ
|

Updated on: Jul 03, 2023 | 2:23 PM

Share

ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ, ಬರಹಗಾರನಾಗಿ ರಕ್ಷಿತ್ ಶೆಟ್ಟಿ (Rakshit Shetty) ಅವರು ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಎಲ್ಲಾ ಕ್ಷೇತ್ರದಲ್ಲಿ ಯಶಸ್ಸು ಕಂಡಿದ್ದಾರೆ ಅನ್ನೋದು ವಿಶೇಷ. ಗುರುಪೂರ್ಣಿಮೆ ದಿನ ರಕ್ಷಿತ್ ಶೆಟ್ಟಿ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ತಾವು ನಡೆದು ಬಂದ ದಾರಿ ಹಾಗೂ ಮುಂದೆ ತುಳಿಯ ಬೇಕಿರುವ ಹಾದಿಯ ಬಗ್ಗೆ ವಿವರಿಸಿದ್ದಾರೆ. ಸಿನಿಮಾದ ಮೇಲೆ ಪ್ರೀತಿ ಮೂಡಿದ್ದು ಹೇಗೆ ಎಂಬಿತ್ಯಾದಿ ವಿಚಾರಗಳ ಬಗ್ಗೆಯೂ ಅವರು ವಿವರಿಸಿದ್ದಾರೆ.

ರಕ್ಷಿತ್ ಶೆಟ್ಟಿ ಅವರ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಚಿತ್ರ ರಿಲೀಸ್​ಗೆ ರೆಡಿ ಇದೆ. ಸೆಪ್ಟೆಂಬರ್ 1ರಂದು ಈ ಚಿತ್ರ ರಿಲೀಸ್ ಆಗುತ್ತಿದೆ. ಇದರ ಜೊತೆಗೆ ಅವರು ನಿರ್ದೇಶನ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ‘ರಿಚರ್ಡ್​ ಆಂಟನಿ’ ಹಾಗೂ ‘ಪುಣ್ಯಕೋಟಿ’ ಸಿನಿಮಾಗಳನ್ನು ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಬಗ್ಗೆ ರಕ್ಷಿತ್ ಮಾತನಾಡಿದ್ದಾರೆ.

‘ರಿಚರ್ಡ್​ ಆಂಟನಿ’ ಸಿನಿಮಾದ ಪ್ರೋಮೋ ಶೂಟ್ ಮಾಡಿದ ಸ್ಥಳದಿಂದ ರಕ್ಷಿತ್ ಶೆಟ್ಟಿ ವಿಡಿಯೋ ಆರಂಭ ಆಗುತ್ತದೆ. ನಂತರ ರಕ್ಷಿತ್ ಅವರು ಕನಸುಗಳ ಬಗ್ಗೆ ಮಾತನಾಡಿದ್ದಾರೆ. ‘ಕೆಲವರಿಗೆ ಯಶಸ್ಸು ರಾತ್ರೋರಾತ್ರಿ ಕಥೆ ಆದ್ರೆ, ಇನ್ನೂ ಕೆಲವರಿಗೆ ಅದೆಷ್ಟೋ ವರ್ಷಗಳ ತಪಸ್ಸು ಆಗಿಬಿಡುತ್ತದೆ ಎಂದು ಹೇಳುವ ಮೂಲಕ ತಾವು ನಡೆದು ಬಂದ ಹಾದಿಯನ್ನು ನೆನಪಿಸಿಕೊಂಡಿದ್ದಾರೆ. ಯಶಸ್ಸು ಸಿಕ್ಕ ಬಳಿಕ ಆ ಯಶಸ್ಸಿನಲ್ಲಿ ತೇಲಬೇಕಾ ಅಥವಾ ಮತ್ತೊಂದು ಯಶಸ್ಸನ್ನು ಪಡೆಯಲು ಹೋಗಬೇಕಾ ಎನ್ನುವ ಪ್ರಶ್ನೆಯನ್ನು ಅವರು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: Rakshit Shetty Birthday: ‘ಸಿಂಪಲ್​ ಸ್ಟಾರ್​’ ರಕ್ಷಿತ್​ ಶೆಟ್ಟಿ ಅಭಿಮಾನಿಗಳ ಪಾಲಿಗೆ ‘ಭರವಸೆಯ ಸ್ಟಾರ್’​ ಆಗಿದ್ದು ಹೇಗೆ?

ರಕ್ಷಿತ್ ಶೆಟ್ಟಿ ಹುಟ್ಟಿದ್ದು ಉಡುಪಿಯಲ್ಲಿ. ಸಿನಿಮಾ ಕನಸು ಹುಟ್ಟಿಕೊಳ್ಳಲು ಉಡುಪಿ ಕಾರಣ ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ. ‘ನನ್ನ ಮುಂದಿನ ಎರಡು ಸಿನಿಮಾಗಳಿಗೆ (‘ರಿಚರ್ಡ್​ ಆಂಟನಿ’ ಹಾಗೂ ‘ಪುಣ್ಯಕೋಟಿ’) ಪರಶುರಾಮ ಹಾಗೂ ಆತನ ಕೊಡಲಿ ಸ್ಫೂರ್ತಿ. ಇದರ ಜೊತೆ ಈಗಾಗಲೇ ನಾಲ್ಕು ವರ್ಷ ಕಳೆದಿದ್ದೀನಿ, ಇನ್ನೂ ನಾಲ್ಕು ವರ್ಷ ಕಳೆಯೋದು ಇದೆ ಅನಿಸುತ್ತಿದೆ’ ಎಂದಿದ್ದಾರೆ. ಇದರ ಜೊತೆಗೆ ನಿರ್ದೇಶನದ ಮೇಲಿನ ಪ್ರೀತಿ ಕುರಿತು, ಆ ಅನುಭವದ ಬಗ್ಗೆಯೂ ಅವರು ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?