AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ವರ್ಷಗಳ ಹಿಂದೆ ಶುರುವಾದ ಲವ್​ಸ್ಟೋರಿ ಬಗ್ಗೆ ರಕ್ಷಿತ್​ ಶೆಟ್ಟಿ ಮನದಾಳದ ಮಾತು!

ನಟ ರಕ್ಷಿತ್​ ಶೆಟ್ಟಿ ಸದ್ಯ ‘777 ಚಾರ್ಲಿ‘ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆ 8 ವರ್ಷಗಳ ಹಿಂದಿನ ಲವ್​ ಸ್ಟೋರಿಯನ್ನು ನೆನಪಿಸಿಕೊಂಡಿದ್ದಾರೆ.

8 ವರ್ಷಗಳ ಹಿಂದೆ ಶುರುವಾದ ಲವ್​ಸ್ಟೋರಿ ಬಗ್ಗೆ ರಕ್ಷಿತ್​ ಶೆಟ್ಟಿ ಮನದಾಳದ ಮಾತು!
ರಕ್ಷಿತ್​ ಶೆಟ್ಟಿ
Follow us
ರಾಜೇಶ್ ದುಗ್ಗುಮನೆ
|

Updated on: Mar 08, 2021 | 7:12 PM

ಸ್ಯಾಂಡಲ್​ವುಡ್​ನ ಟಾಪ್ ನಟರಲ್ಲಿ ತಾವೂ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ ರಕ್ಷಿತ್ ಶೆಟ್ಟಿ. ಹೊಸತನದ ಸಿನಿಮಾಗಳ ಮೂಲಕ ಅವರು ಪ್ರೇಕ್ಷಕರಿಗೆ ಹತ್ತಿರವಾಗಿದ್ದಾರೆ. ಸೋಲು-ಗೆಲುವುಗಳ ನಡುವೆ ತಮ್ಮದೇ ಆದಂತಹ ಅಭಿಮಾನಿ ಬಳಗವನ್ನು ಅವರು ಸೃಷ್ಟಿಸಿಕೊಂಡಿದ್ದಾರೆ. ಅವರ ವೃತ್ತಿ ಬದುಕಿಗೆ ದೊಡ್ಡ ಟರ್ನ್​ ನೀಡಿದ್ದು, ಒಂದು ಲವ್​ ಸ್ಟೋರಿ. ಅದೇ ‘ಸಿಂಪಲ್ಲಾಗ್​ ಒಂದ್​ ಲವ್​ಸ್ಟೋರಿ’!

ಹೌದು, ರಕ್ಷಿತ್​ ಶೆಟ್ಟಿಗೆ ಚಿತ್ರರಂಗದಲ್ಲಿ ಮೊದಲ ಯಶಸ್ಸು ಸಿಕ್ಕಿದ್ದು ‘ಸಿಂಪಲ್ಲಾಗ್​ ಒಂದ್​ ಲವ್​ಸ್ಟೋರಿ‘ ಸಿನಿಮಾ ಮೂಲಕ. 2013ರಲ್ಲಿ ತೆರೆಕಂಡಿದ್ದ ಆ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿಗೆ ಜೋಡಿಯಾಗಿ ಶ್ವೇತಾ ಶ್ರೀವಾಸ್ತವ ನಟಿಸಿದ್ದರು. ‘ಸಿಂಪಲ್ಲಾಗ್​ ಒಂದ್​ ಲವ್​ಸ್ಟೋರಿ‘ ತೆರೆಕಂಡು ಇಂದಿಗೆ (ಮಾ.8) 8 ವರ್ಷಗಳಾಗಿವೆ. ತಮ್ಮ ಬದುಕಿಗೆ ಹೊಸ ತಿರುವು ನೀಡಿದ ಆ ಚಿತ್ರವನ್ನು ರಕ್ಷಿತ್​ ಶೆಟ್ಟಿ ಮತ್ತು ಇಡೀ ತಂಡದವರು ನೆನಪಿಸಿಕೊಂಡಿದ್ದಾರೆ.

‘ಚಿತ್ರರಂಗದಲ್ಲಿ ನನ್ನ ವೃತ್ತಿಬದುಕಿಗೆ ಪುಷ್ಠಿ ನೀಡಿದ ಸಿಂಪಲ್ಲಾಗ್​ ಒಂದ್​ ಲವ್​ಸ್ಟೋರಿ ಸಿನಿಮಾ ಸುಂದರವಾದ 8 ವರ್ಷಗಳನ್ನು ಪೂರೈಸಿದೆ. ಈ ಪಯಣದಲ್ಲಿ ಜೊತೆಯಾದ ಎಲ್ಲರಿಗೂ ಧನ್ಯವಾದಗಳು‘ ಎಂದು ರಕ್ಷಿತ್​ ಶೆಟ್ಟಿ ಟ್ವೀಟ್​ ಮಾಡಿದ್ದಾರೆ. ಹೊಸತನದ ಚಿತ್ರಕಥೆಯನ್ನು ಹೊಂದಿದ್ದ ಈ ಚಿತ್ರ ಸೂಪರ್​ ಹಿಟ್​ ಆಗಿತ್ತು. ಆ ಚಿತ್ರದ ಗೆಲುವಿನ ಬಳಿಕ ರಕ್ಷಿತ್​ ಶೆಟ್ಟಿಗೆ ‘ಸಿಂಪಲ್​ ಸ್ಟಾರ್​’ ಎಂಬ ಬಿರುದು ಕೂಡ ಸಿಕ್ಕಿತು.

‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಚಿತ್ರಕ್ಕೆ ಸುನಿ ನಿರ್ದೇಶನ ಮಾಡಿದ್ದರು. ಬಳಿಕ ಅವರು ಸಿಂಪಲ್​ ಸುನಿ ಎಂದೇ ಖ್ಯಾತರಾದರು. ಅವರು ಕೂಡ ಚಿತ್ರದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘8 ವರುಷದ ಹಿಂದಿನ ಈ ದಿನ ಕನಸೊಂದು ಮೊಳಗಿತ್ತು. ಬೆಳ್ಳಿತೆರೆಗೆ ಹಾರಿ, ಮರೆಯಲಾಗದ ನನ್ನ 2ನೇ ಜನನ ಈ ಸಿಂಪಲ್ಲಾಗ್ ಒಂದ್ LOVE STORY’ ಎಂದಿದ್ದಾರೆ ನಿರ್ದೇಶಕ ಸುನಿ. ಬಿ.ಜೆ. ಭರತ್​ ಸಂಗೀತ ನಿರ್ದೇಶನ ಮಾಡಿದ್ದ ಹಾಡುಗಳು ಇಂದಿಗೂ ಕೇಳುಗರ ಫೇವರಿಟ್​ ಆಗಿವೆ.

ಇದನ್ನೂ ಓದಿ: ಇನ್ನೂ ಉತ್ತಂಗಕ್ಕೇರು: ರಶ್ಮಿಕಾಗೆ ಮನಃಪೂರ್ವಕವಾಗಿ ಹಾರೈಸಿದ ರಕ್ಷಿತ್​ ಶೆಟ್ಟಿ

ಯೂಟ್ಯೂಬ್​ನಲ್ಲಿ 10 ಕೋಟಿ ವ್ಯೂಸ್​ ಗಳಿಸಿತು ‘ಬೆಳಗೆದ್ದು’ ಸಾಂಗ್​.. ರಕ್ಷಿತ್​ ಶೆಟ್ಟಿಯನ್ನು ನೆನಪಿಸಿಕೊಂಡ ರಶ್ಮಿಕಾ ಮಂದಣ್ಣ

ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್