ಸ್ಟಾರ್​ ನಟನ ರೀತಿ ತಲೆ ಎತ್ತಿದೆ ಚಾರ್ಲಿ ಶ್ವಾನದ ಕಟೌಟ್​; ರಕ್ಷಿತ್​ ಶೆಟ್ಟಿ ಸಿನಿಮಾಗೆ ಭರ್ಜರಿ ಪ್ರಚಾರ

777 Charlie Movie: ರಕ್ಷಿತ್ ಶೆಟ್ಟಿ ಜೊತೆ ನಟಿಸಿರುವ ಚಾರ್ಲಿ ಶ್ವಾನದ ಬೃಹತ್​ ಕಟೌಟ್​ ನಿಲ್ಲಿಸಲಾಗಿದೆ. ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಸ್ಟಾರ್​ ನಟನ ರೀತಿ ತಲೆ ಎತ್ತಿದೆ ಚಾರ್ಲಿ ಶ್ವಾನದ ಕಟೌಟ್​; ರಕ್ಷಿತ್​ ಶೆಟ್ಟಿ ಸಿನಿಮಾಗೆ ಭರ್ಜರಿ ಪ್ರಚಾರ
ಚಾರ್ಲಿ ಕಟೌಟ್
Follow us
| Updated By: ಮದನ್​ ಕುಮಾರ್​

Updated on:Jun 05, 2022 | 12:15 PM

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘777 ಚಾರ್ಲಿ’ ಕೂಡ ಪ್ರಮುಖವಾಗಿದೆ. ರಕ್ಷಿತ್​ ಶೆಟ್ಟಿ (Rakshit Shetty) ನಟನೆಯ ಈ ಸಿನಿಮಾದಲ್ಲಿ ಚಾರ್ಲಿ ಹೆಸರಿನ ಶ್ವಾನ ನಟಿಸಿದೆ. ಜೂನ್​ 10ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ. ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಕಥೆಯನ್ನು ಹೊಂದಿರುವ ಈ ಸಿನಿಮಾಗೆ ಕಿರಣ್​ ರಾಜ್​ (Director Kiran Raj) ನಿರ್ದೇಶನ ಮಾಡಿದ್ದಾರೆ. ಪ್ರಾಣಿಪ್ರಿಯರೆಲ್ಲರಿಗೂ ಈ ಚಿತ್ರ ಖಂಡಿತಾ ಇಷ್ಟ ಆಗಲಿದೆ ಎಂಬ ಭರವಸೆ ಚಿತ್ರತಂಡದ್ದು. ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಹಲವು ಚಿತ್ರಮಂದಿರಗಳ ಎದುರು ಚಾರ್ಲಿಯ ಕಟೌಟ್​ ತಲೆ ಎತ್ತಿದೆ! ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ಸ್ಟಾರ್​ ನಟರ ಕಟೌಟ್​ ರಾರಾಜಿಸುವುದು ಸಹಜ. ಆದರೆ ‘777 ಚಾರ್ಲಿ’ ಸಿನಿಮಾದಲ್ಲಿ (777 Charlie Movie) ನಾಯಿ ಕೂಡ ಪ್ರಮುಖ ಪಾತ್ರ ನಿಭಾಯಿಸಿರುವುದರಿಂದ ಅದರ ಕಟೌಟ್​ ಕೂಡ ಹಾಕಲಾಗಿದೆ.

‘777 ಚಾರ್ಲಿ’ ಒಂದು ಪ್ಯಾನ್​ ಇಂಡಿಯಾ ಸಿನಿಮಾ. ಕರ್ನಾಟಕ ಮಾತ್ರವಲ್ಲದೇ ದೇಶದ ವಿವಿಧ ರಾಜ್ಯಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಚೆನ್ನೈನ ಸತ್ಯಂ ಸಿನಿಮಾಸ್​ ಎದುರು ಚಾರ್ಲಿ ಶ್ವಾನದ ಬೃಹತ್​ ಕಟೌಟ್​ ನಿಲ್ಲಿಸಲಾಗಿದೆ. ಅದರ ಫೋಟೋವನ್ನು ಚಿತ್ರತಂಡ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದೆ. ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಇದನ್ನೂ ಓದಿ
Image
21 ನಗರಗಳಲ್ಲಿ ಪ್ರೀಮಿಯರ್​ ಆಗಲಿದೆ ‘777 ಚಾರ್ಲಿ’; ಹೊಸ ದಾಖಲೆ ಬರೆಯಲು ಸಜ್ಜಾದ ರಕ್ಷಿತ್​ ಶೆಟ್ಟಿ ಸಿನಿಮಾ
Image
ಶ್ವಾನದ ಬಳಿಯೇ ‘777 ಚಾರ್ಲಿ’ ಟ್ರೇಲರ್ ರಿಲೀಸ್ ಮಾಡಿಸಿದ ರಕ್ಷಿತ್ ಶೆಟ್ಟಿ
Image
ರಶ್ಮಿಕಾ ಮಂದಣ್ಣಗೆ ಖಂಡಿತಾ ಇಷ್ಟ ಆಗಲಿದೆ ರಕ್ಷಿತ್​ ಶೆಟ್ಟಿಯ ‘777 ಚಾರ್ಲಿ’ ಸಿನಿಮಾ; ಕಾರಣ ಏನು?
Image
777 Charlie Trailer: ‘777 ಚಾರ್ಲಿ’ ಸಿನಿಮಾ ಟ್ರೇಲರ್​ ರಿಲೀಸ್​: ಎಮೋಷನಲ್​ ಕಥೆಯ ಸುಳಿವು ನೀಡಿದ ರಕ್ಷಿತ್​ ಶೆಟ್ಟಿ

ಇದನ್ನೂ ಓದಿ: ಕನ್ನಡದ ಮುದ್ದು ಚಾರ್ಲಿ ಎದುರು ಫೈಟ್​ ಮಾಡಲಿದೆ ಡೈನೋಸಾರ್; ಈ ಯುದ್ಧದಲ್ಲಿ ಏನಾಗಲಿದೆ ಭವಿಷ್ಯ?

ರಕ್ಷಿತ್​ ಶೆಟ್ಟಿ ಅವರ ಪರಂವಾ ಸ್ಡುಡಿಯೋಸ್​ ಬ್ಯಾನರ್​ ಮೂಲಕ ‘777 ಚಾರ್ಲಿ’ ಸಿನಿಮಾ ನಿರ್ಮಾಣ ಆಗಿದೆ. ರಾಜ್​ ಬಿ. ಶೆಟ್ಟಿ, ದಾನಿಶ್​ ಸೇಠ್​, ಸಂಗೀತ ಶೃಂಗೇರಿ ಮುಂತಾದವರು ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ನೋಬಿನ್​ ಪೌಲ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಬಿಡುಗಡೆಗೂ ಮುನ್ನ 21 ನಗರಗಳಲ್ಲಿ ಪೇಯ್ಡ್​ ಪ್ರೀಮಿಯರ್​ ಮಾಡಲಾಗುತ್ತಿದೆ.

ಈಗಾಗಲೇ ದೆಹಲಿ, ಲಖನೌ ಮುಂತಾದ ಕಡೆಗಳಲ್ಲಿ ಈ ಸಿನಿಮಾದ ಪೇಯ್ಡ್​ ಪ್ರೀಮಿಯರ್​ ಆಗಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಭಾವುಕರಾಗಿ ಚಿತ್ರಮಂದಿರದಿಂದ ಹೊರಬರುತ್ತಿರುವ ವಿಡಿಯೋಗಳನ್ನು ಕೂಡ ಚಿತ್ರತಂಡ ಹಂಚಿಕೊಂಡಿದೆ. ಅನೇಕರಿಂದ ಚಿತ್ರದ ಬಗ್ಗೆ ಪಾಸಿಟಿವ್​ ವಿಮರ್ಶೆ ಸಿಗುತ್ತಿದೆ. ಇದರಿಂದ ಚಿತ್ರತಂಡದ ಆತ್ಮವಿಶ್ವಾಸ ಹೆಚ್ಚಿದೆ. ವಿವಿಧ ಭಾಷೆಯಲ್ಲಿ ಈ ಸಿನಿಮಾವನ್ನು ಅಲ್ಲಿನ ಸ್ಟಾರ್​ ನಟರು ಬಿಡುಗಡೆ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:15 pm, Sun, 5 June 22

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್