AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಚಿತ್ರದಿಂದ ಹೊಸ ಅಪ್​ಡೇಟ್​; ಇದು ಫ್ಯಾನ್ಸ್​ ಖುಷಿಪಡೋ ವಿಚಾರ

‘777 ಚಾರ್ಲಿ ಚಿತ್ರದ ಬಿಡುಗಡೆ ದಿನಾಂಕ ಏಪ್ರಿಲ್ 10ರ, ಬೆಳಗ್ಗೆ 11:04ಕ್ಕೆ ತಿಳಿಸಲಿದ್ದೇವೆ’ ಎಂದು ರಕ್ಷಿತ್ ಬರೆದುಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಸಂತಸ ಹೊರಹಾಕಿದ್ದಾರೆ.

ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಚಿತ್ರದಿಂದ ಹೊಸ ಅಪ್​ಡೇಟ್​; ಇದು ಫ್ಯಾನ್ಸ್​ ಖುಷಿಪಡೋ ವಿಚಾರ
ರಕ್ಷಿತ್ ಶೆಟ್ಟಿ
TV9 Web
| Edited By: |

Updated on: Apr 08, 2022 | 1:30 PM

Share

ರಕ್ಷಿತ್​ ಶೆಟ್ಟಿ (Rakshit Shetty) ಸಿಂಪಲ್​ ಸ್ಟಾರ್ ಎಂದೇ ಫೇಮಸ್​. ಅವರ ಸಿನಿಮಾ ತೆರೆಗೆ ಬರುತ್ತಿದೆ ಎಂದರೆ ಒಂದಷ್ಟು ಹೊಸತನ ಹಾಗೂ ಒಂದಷ್ಟು ಕುತೂಹಲ ಎರಡೂ ಇರುತ್ತದೆ. ಅವರ ನಟನೆಯ ‘777 ಚಾರ್ಲಿ’ ಸಿನಿಮಾ (777 Charlie) ಕೂಡ ದೊಡ್ಡಮಟ್ಟದ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ನಾಯಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಮೊದಲು ಬಿಡುಗಡೆ ಆಗಿದ್ದ ಟೀಸರ್​, ಪೋಸ್ಟರ್, ಸಾಂಗ್​​​ಗಳಿಂದ ಅಭಿಮಾನಿಗಳಿಗೆ ಸಿನಿಮಾ ಬಗ್ಗೆ ಕೌತುಕ ಹೆಚ್ಚಿತ್ತು. ಕೊವಿಡ್​ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬವಾದವು. ಈಗ ಸಿನಿಮಾ ಕೆಲಸಗಳು ಪೂರ್ಣಗೊಳ್ಳುವ ಹಂತ ತಲುಪಿದೆ. ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈಗ ಸಿನಿಮಾ ತಂಡದಿಂದ ಹೊಸ ಅಪ್​ಡೇಟ್​ ಸಿಕ್ಕಿದೆ. ಚಿತ್ರದ ರಿಲೀಸ್ ದಿನಾಂಕವನ್ನು ಏಪ್ರಿಲ್​ 10ರಂದು ರಿವೀಲ್ ಮಾಡುವ ಬಗ್ಗೆ ಚಿತ್ರತಂಡ ಘೋಷಿಸಿದೆ.

‘777 ಚಾರ್ಲಿ ಚಿತ್ರದ ಬಿಡುಗಡೆ ದಿನಾಂಕ ಏಪ್ರಿಲ್ 10ರ, ಬೆಳಗ್ಗೆ 11:04ಕ್ಕೆ ತಿಳಿಸಲಿದ್ದೇವೆ’ ಎಂದು ರಕ್ಷಿತ್ ಬರೆದುಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಸಂತಸ ಹೊರಹಾಕಿದ್ದಾರೆ. ‘ಸಿನಿಮಾಗೆ ಚೆನ್ನಾಗಿ ಪ್ರಮೋಷನ್​ ನೀಡಿ. ಚಿತ್ರವನ್ನು ಬೇಗ ರಿಲೀಸ್ ಮಾಡಿ’ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ ವರ್ಷದ ಅಂತ್ಯಕ್ಕೆ ‘777 ಚಾರ್ಲಿ’ ತೆರೆಗೆ ಬರಬೇಕಿತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ ಎಂಬುದನ್ನು ರಕ್ಷಿತ್ ಶೆಟ್ಟಿ ತಿಳಿಸಿದ್ದರು. ‘777 ಚಾರ್ಲಿಯ ಈ ಸುದೀರ್ಘ ಪಯಣದಲ್ಲಿ ನೀವು ನಮಗೆ ತೋರಿರುವ ಪ್ರೀತಿ ಹಾಗು ಬೆಂಬಲಕ್ಕೆ ನಾವು ಆಭಾರಿ. ನಾವು ಈ ಮೂಲಕ ತಿಳಿಸ ಬಯಸುವುದೇನೆಂದರೆ, ನಮ್ಮ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಮೊದಲು ನಿಗದಿಪಡಿಸಲಾಗಿದ್ದ ದಿನಾಂಕವಾದ 31 ಡಿಸೆಂಬರ್ 2021 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ. ಕೆಲವು ವಿಳಂಬಗಳು ಹೊಸದೊಂದು ಅಧ್ಯಾಯಕ್ಕೆ ನಾಂದಿಯಾಗುತ್ತದೆ. ಅತೀ ಶೀಘ್ರದಲ್ಲಿ ಹೊಸ ಪ್ರಕಟಣೆಯೊಂದಿಗೆ ನಿಮ್ಮ ಮುಂದೆ ಬರಲಿದ್ದೇವೆ. ಅಲ್ಲಿಯವರೆಗೂ, ಹರಸಿ.. ಹಾರೈಸಿ’ ಎಂದು ಅವರು ಈ ಮೊದಲು ಬರೆದುಕೊಂಡಿದ್ದರು. ಈಗ ಹೊಸ ಅಪ್​ಡೇಟ್​ನೊಂದಿಗೆ ರಕ್ಷಿತ್ ಶೆಟ್ಟಿ ಆಗಮಿಸಿದ್ದಾರೆ.

ಕಿರಣ್​ ರಾಜ್​ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್​ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ. ಶೆಟ್ಟಿ, ದಾನಿಶ್​ ಸೇಟ್​ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ. ಪರಮ್​ವಾ ಸ್ಟುಡಿಯೋ ಬ್ಯಾನರ್​ ಅಡಿಯಲ್ಲಿ ಚಿತ್ರ ಮೂಡಿ ಬರುತ್ತಿದೆ. ಹೊಸ ರಿಲೀಸ್ ಡೇಟ್​ಗಾಗಿ ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: ರಕ್ಷಿತ್​ ಶೆಟ್ಟಿ ‘777 ಚಾರ್ಲಿ’ಯಲ್ಲಿ ನಟಿಸಿದ ಶ್ವಾನ ಎಷ್ಟು ಬ್ರಿಲಿಯಂಟ್​ ಗೊತ್ತಾ? ಟ್ರೇನರ್​ ಬಿಚ್ಚಿಟ್ಟ ಅಚ್ಚರಿಯ ವಿಚಾರ

‘777 ಚಾರ್ಲಿ’ ಸಿನಿಮಾ ಶೂಟಿಂಗ್​ ಮುಕ್ತಾಯ; ಕುಂಬಳಕಾಯಿ ಒಡೆದ ಸಂಭ್ರಮದಲ್ಲಿ ರಕ್ಷಿತ್​

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ