AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

777 Charlie: ಜಪಾನ್ ಭಾಷೆಯಲ್ಲಿ ರಿಲೀಸ್ ಆದ ‘777 ಚಾರ್ಲಿ’; ಹೇಗಿದೆ ಪ್ರತಿಕ್ರಿಯೆ?

‘777 ಚಾರ್ಲಿ’ ಸಿನಿಮಾ 2022ರ ಜೂನ್ 10ರಂದು ಕರ್ನಾಟಕದಾದ್ಯಂತ ಬಿಡುಗಡೆ ಕಂಡಿತು. ಈಗ ಚಿತ್ರ ಜಪಾನ್​ನಲ್ಲಿ ರಿಲೀಸ್ ಆಗಿದೆ. ವಿದೇಶದಲ್ಲೂ ಚಿತ್ರ ಈಗ ಮೆಚ್ಚುಗೆ ಪಡೆಯುತ್ತಿದೆ. ರಕ್ಷಿತ್ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಹೆಸರು ಮಾಡುತ್ತಿದದ್ದಾರೆ. ಅವರು ‘777 ಚಾರ್ಲಿ’ ಚಿತ್ರದಿಂದ ಲಾಭ ಕಂಡಿದ್ದಾರೆ.

777 Charlie: ಜಪಾನ್ ಭಾಷೆಯಲ್ಲಿ ರಿಲೀಸ್ ಆದ ‘777 ಚಾರ್ಲಿ’; ಹೇಗಿದೆ ಪ್ರತಿಕ್ರಿಯೆ?
ರಕ್ಷಿತ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Jun 29, 2024 | 7:01 AM

Share

ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿರೋ ‘777 ಚಾರ್ಲಿ’ ಸಿನಿಮಾ ಭರ್ಜರಿ ಗಳಿಕೆ ಮಾಡಿತ್ತು. 2022ರಲ್ಲಿ ರಿಲೀಸ್ ಆದ ಈ ಚಿತ್ರ ಪ್ರಾಣಿ ಪ್ರಿಯರ ಮನ ಗೆದ್ದಿತ್ತು. ಕಲ್ಲು ಹೃದಯಿಗಳ ಮನಸ್ಸನ್ನೂ ಈ ಸಿನಿಮಾ ಕರಗಿಸಿತ್ತು. ಅನೇಕರು ಈ ಚಿತ್ರ ನೋಡಿ ಕಣ್ಣೀರು ಹಾಕಿದ್ದರು. ಈಗ ಸಿನಿಮಾ ಜಪಾನ್​ನಲ್ಲಿ ರಿಲೀಸ್ ಆಗಿದೆ. ಅಲ್ಲಿಯ ಭಾಷೆಗೆ ಡಬ್ ಆಗಿ ಚಿತ್ರ ರಿಲೀಸ್ ಆಗಿದೆ. ಅಲ್ಲಿಯೂ ಸಿನಿಮಾ ಮೆಚ್ಚುಗೆ ಪಡೆದಿದೆ.

ರಕ್ಷಿತ್ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಹೆಸರು ಮಾಡುತ್ತಿದದ್ದಾರೆ. ಅವರು ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸುತ್ತಾರೆ ಎಂದಾಗಲೇ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿತ್ತು. ಈ ಚಿತ್ರದ ಟೀಸರ್ ಹಾಗೂ ಟ್ರೇಲರ್​ಗಳು ಗಮನ ಸೆಳೆದವು. ಈ ಸಿನಿಮಾ 2022ರ ಜೂನ್ 10ರಂದು ಕರ್ನಾಟಕದಾದ್ಯಂತ ಬಿಡುಗಡೆ ಕಂಡಿತು. ವಿದೇಶದಲ್ಲೂ ಚಿತ್ರ ಈಗ ಮೆಚ್ಚುಗೆ ಪಡೆಯುತ್ತಿದೆ.

ಭಾರತದ ಅನೇಕ ಸಿನಿಮಾಗಳು ಜಪಾನ್​ನಲ್ಲಿ ರಿಲೀಸ್ ಆಗುತ್ತವೆ. ‘ಕೆಜಿಎಫ್ 2’, ‘ಆರ್​ಆರ್​ಆರ್’ ಮೊದಲಾದ ಸಿನಿಮಾಗಳು ಜಪಾನ್​ನಲ್ಲಿ ಬಿಡುಗಡೆ ಆಗಿ ಮೆಚ್ಚುಗೆ ಪಡೆದಿವೆ. ಈಗ ‘777 ಚಾರ್ಲಿ’ ಸಿನಿಮಾ ಸಮಯ. ಈ ಚಿತ್ರ ಜಪಾನ್ ಭಾಷೆಯಲ್ಲಿ ರಿಲೀಸ್ ಆಗಿದೆ.

ಇದನ್ನೂ ಓದಿ: ಒಟಿಟಿ ಬದಲಿಗೆ ಹೊಸ ಹಾದಿ ತುಳಿದ ರಕ್ಷಿತ್ ಶೆಟ್ಟಿ; ಜುಲೈ 13ಕ್ಕೆ ‘ಏಕಂ’ ರಿಲೀಸ್

ಸಿನಿಮಾ ಜೂನ್ 28ರಂದು ಜಪಾನ್​ನಲ್ಲಿ ರಿಲೀಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಈ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಇದನ್ನು ರಕ್ಷಿತ್ ಶೆಟ್ಟಿ ಅವರು ರೀ-ಟ್ವೀಟ್ ಮಾಡಿಕೊಳ್ಳುತ್ತಿದ್ದಾರೆ. ಜಪಾನ್ ಮಂದಿಗೆ ಸಿನಿಮಾ ಸಖತ್ ಇಷ್ಟ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ