777 Charlie: ಜಪಾನ್ ಭಾಷೆಯಲ್ಲಿ ರಿಲೀಸ್ ಆದ ‘777 ಚಾರ್ಲಿ’; ಹೇಗಿದೆ ಪ್ರತಿಕ್ರಿಯೆ?

‘777 ಚಾರ್ಲಿ’ ಸಿನಿಮಾ 2022ರ ಜೂನ್ 10ರಂದು ಕರ್ನಾಟಕದಾದ್ಯಂತ ಬಿಡುಗಡೆ ಕಂಡಿತು. ಈಗ ಚಿತ್ರ ಜಪಾನ್​ನಲ್ಲಿ ರಿಲೀಸ್ ಆಗಿದೆ. ವಿದೇಶದಲ್ಲೂ ಚಿತ್ರ ಈಗ ಮೆಚ್ಚುಗೆ ಪಡೆಯುತ್ತಿದೆ. ರಕ್ಷಿತ್ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಹೆಸರು ಮಾಡುತ್ತಿದದ್ದಾರೆ. ಅವರು ‘777 ಚಾರ್ಲಿ’ ಚಿತ್ರದಿಂದ ಲಾಭ ಕಂಡಿದ್ದಾರೆ.

777 Charlie: ಜಪಾನ್ ಭಾಷೆಯಲ್ಲಿ ರಿಲೀಸ್ ಆದ ‘777 ಚಾರ್ಲಿ’; ಹೇಗಿದೆ ಪ್ರತಿಕ್ರಿಯೆ?
ರಕ್ಷಿತ್ ಶೆಟ್ಟಿ
Follow us
|

Updated on: Jun 29, 2024 | 7:01 AM

ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿರೋ ‘777 ಚಾರ್ಲಿ’ ಸಿನಿಮಾ ಭರ್ಜರಿ ಗಳಿಕೆ ಮಾಡಿತ್ತು. 2022ರಲ್ಲಿ ರಿಲೀಸ್ ಆದ ಈ ಚಿತ್ರ ಪ್ರಾಣಿ ಪ್ರಿಯರ ಮನ ಗೆದ್ದಿತ್ತು. ಕಲ್ಲು ಹೃದಯಿಗಳ ಮನಸ್ಸನ್ನೂ ಈ ಸಿನಿಮಾ ಕರಗಿಸಿತ್ತು. ಅನೇಕರು ಈ ಚಿತ್ರ ನೋಡಿ ಕಣ್ಣೀರು ಹಾಕಿದ್ದರು. ಈಗ ಸಿನಿಮಾ ಜಪಾನ್​ನಲ್ಲಿ ರಿಲೀಸ್ ಆಗಿದೆ. ಅಲ್ಲಿಯ ಭಾಷೆಗೆ ಡಬ್ ಆಗಿ ಚಿತ್ರ ರಿಲೀಸ್ ಆಗಿದೆ. ಅಲ್ಲಿಯೂ ಸಿನಿಮಾ ಮೆಚ್ಚುಗೆ ಪಡೆದಿದೆ.

ರಕ್ಷಿತ್ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಹೆಸರು ಮಾಡುತ್ತಿದದ್ದಾರೆ. ಅವರು ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸುತ್ತಾರೆ ಎಂದಾಗಲೇ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿತ್ತು. ಈ ಚಿತ್ರದ ಟೀಸರ್ ಹಾಗೂ ಟ್ರೇಲರ್​ಗಳು ಗಮನ ಸೆಳೆದವು. ಈ ಸಿನಿಮಾ 2022ರ ಜೂನ್ 10ರಂದು ಕರ್ನಾಟಕದಾದ್ಯಂತ ಬಿಡುಗಡೆ ಕಂಡಿತು. ವಿದೇಶದಲ್ಲೂ ಚಿತ್ರ ಈಗ ಮೆಚ್ಚುಗೆ ಪಡೆಯುತ್ತಿದೆ.

ಭಾರತದ ಅನೇಕ ಸಿನಿಮಾಗಳು ಜಪಾನ್​ನಲ್ಲಿ ರಿಲೀಸ್ ಆಗುತ್ತವೆ. ‘ಕೆಜಿಎಫ್ 2’, ‘ಆರ್​ಆರ್​ಆರ್’ ಮೊದಲಾದ ಸಿನಿಮಾಗಳು ಜಪಾನ್​ನಲ್ಲಿ ಬಿಡುಗಡೆ ಆಗಿ ಮೆಚ್ಚುಗೆ ಪಡೆದಿವೆ. ಈಗ ‘777 ಚಾರ್ಲಿ’ ಸಿನಿಮಾ ಸಮಯ. ಈ ಚಿತ್ರ ಜಪಾನ್ ಭಾಷೆಯಲ್ಲಿ ರಿಲೀಸ್ ಆಗಿದೆ.

ಇದನ್ನೂ ಓದಿ: ಒಟಿಟಿ ಬದಲಿಗೆ ಹೊಸ ಹಾದಿ ತುಳಿದ ರಕ್ಷಿತ್ ಶೆಟ್ಟಿ; ಜುಲೈ 13ಕ್ಕೆ ‘ಏಕಂ’ ರಿಲೀಸ್

ಸಿನಿಮಾ ಜೂನ್ 28ರಂದು ಜಪಾನ್​ನಲ್ಲಿ ರಿಲೀಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಈ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಇದನ್ನು ರಕ್ಷಿತ್ ಶೆಟ್ಟಿ ಅವರು ರೀ-ಟ್ವೀಟ್ ಮಾಡಿಕೊಳ್ಳುತ್ತಿದ್ದಾರೆ. ಜಪಾನ್ ಮಂದಿಗೆ ಸಿನಿಮಾ ಸಖತ್ ಇಷ್ಟ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ