AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter Review: ಸದಾ ಕಾಲ ನೆನಪಿನಲ್ಲಿ ಉಳಿಯುವ ಸಿನಿಮಾ’: ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಟ್ವಿಟರ್​ ವಿಮರ್ಶೆ

Sapta Sagaradaache Ello Side B: ಡಿಫರೆಂಟ್​ ಆದ ಒಂದು ಪ್ರೇಮಕಥೆಯನ್ನು ನಿರ್ದೇಶಕ ಹೇಮಂತ್​ ಎಂ. ರಾವ್​ ಅವರು ತೆರೆಗೆ ತಂದಿರುವ ರೀತಿ ಎಲ್ಲರಿಗೂ ಇಷ್ಟ ಆಗುತ್ತಿದೆ. ವಿಶೇಷವಾಗಿ ಕ್ಲಾಸ್​ ಪ್ರೇಕ್ಷಕರನ್ನು ಈ ಸಿನಿಮಾ ಸೆಳೆದುಕೊಳ್ಳುತ್ತಿದೆ. ಪ್ರೀಮಿಯರ್​ ಶೋ ಮತ್ತು ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಪ್ರೇಕ್ಷಕರು ಟ್ವಿಟರ್​ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

Twitter Review: ಸದಾ ಕಾಲ ನೆನಪಿನಲ್ಲಿ ಉಳಿಯುವ ಸಿನಿಮಾ’: ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಟ್ವಿಟರ್​ ವಿಮರ್ಶೆ
ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ
ಮದನ್​ ಕುಮಾರ್​
|

Updated on: Nov 17, 2023 | 1:21 PM

Share

ಒಂದು ಕಥೆಯನ್ನು ಎರಡು ಪಾರ್ಟ್​ನಲ್ಲಿ ಹೇಳುವ ಟ್ರೆಂಡ್​ ಚಾಲ್ತಿಯಲ್ಲಿದೆ. ಅದೇ ರೀತಿ ‘ಸಪ್ತ ಸಾಗರದಾಚೆ ಎಲ್ಲೋ’ (Sapta Sagaradaache Ello) ಸಿನಿಮಾ ಕೂಡ ಎರಡು ಪಾರ್ಟ್​ನಲ್ಲಿ ಮೂಡಿಬಂದಿದೆ. ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಎ’ ಸಿನಿಮಾಗೆ ಜನರಿಂದ ಮೆಚ್ಚುಗೆ ಸಿಕ್ಕಿತ್ತು. ಅದರ ಮುಂದುವರಿದ ಕಥೆಯನ್ನು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಸಿನಿಮಾದಲ್ಲಿ ಹೇಳಲಾಗಿದೆ. ರಕ್ಷಿತ್​ ಶೆಟ್ಟಿ (Rakshit Shetty), ರುಕ್ಮಿಣಿ ವಸಂತ್​ ಅವರ ಜೊತೆ ಈ ಬಾರಿ ಚೈತ್ರಾ ಆಚಾರ್​ ಕೂಡ ಸೇರಿಕೊಂಡಿದ್ದಾರೆ. ಇಂದು (ನವೆಂಬರ್​ 17) ಈ ಸಿನಿಮಾ ಬಿಡುಗಡೆ ಆಗಿದೆ. ಗುರುವಾರ (ನವೆಂಬರ್​ 16) ರಾತ್ರಿಯೇ ಅನೇಕ ಕಡೆಗಳಲ್ಲಿ ಪೇಯ್ಡ್​ ಪ್ರೀಮಿಯರ್​ ಮಾಡಲಾಗಿತ್ತು. ಸಿನಿಮಾ ನೋಡಿದ ಬಹುತೇಕ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ (SSE Side B) ಸಿನಿಮಾದ ಟ್ವಿಟರ್​ ವಿಮರ್ಶೆ ಇಲ್ಲಿದೆ..

ಡಿಫರೆಂಟ್​ ಆದ ಒಂದು ಪ್ರೇಮಕಥೆಯನ್ನು ನಿರ್ದೇಶಕ ಹೇಮಂತ್​ ಎಂ. ರಾವ್​ ಅವರು ತೆರೆಗೆ ತಂದಿರುವ ರೀತಿ ಎಲ್ಲರಿಗೂ ಇಷ್ಟ ಆಗುತ್ತಿದೆ. ವಿಶೇಷವಾಗಿ ಕ್ಲಾಸ್​ ಪ್ರೇಕ್ಷಕರನ್ನು ಈ ಸಿನಿಮಾ ಸೆಳೆದುಕೊಳ್ಳುತ್ತಿದೆ. ‘ಇದು ಈ ದಶಕದಲ್ಲಿ ಬಂದ ಬೆಸ್ಟ್​ ಲವ್​ ಸ್ಟೋರಿ. ಸದಾ ಕಾಲ ನೆನಪಿನಲ್ಲಿ ಉಳಿಯುವಂತಹ ಸಿನಿಮಾ ಇದಾಗಿದೆ’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ. ಹೇಮಂತ್​ ಎಂ. ರಾವ್​ ಅವರ ಕಸುಬುದಾರಿಕೆಗೆ ಮೆಚ್ಚುಗೆ ಸಿಗುತ್ತಿದೆ.

ಕೆಲವರು ಈ ಸಿನಿಮಾವನ್ನು ಮಾಸ್ಟರ್​ಪೀಸ್​ ಎಂದು ಕರೆದಿದ್ದಾರೆ. ಭಾವನೆಗಳಿಗೆ ಹೆಚ್ಚು ಮಹತ್ವ ನೀಡಿರುವುದು ಬಹುತೇಕರಿಗೆ ಇಷ್ಟ ಆಗಿದೆ. ‘ಇದು ನಿಜವಾದ ಸೀಕ್ವೆಲ್​. ಎಲ್ಲರೂ ನೋಡಲೇಬೇಕಾದ ಸಿನಿಮಾ’ ಎಂಬ ಅಭಿಪ್ರಾಯ ಕೂಡ ಪ್ರೇಕ್ಷಕರಿಂದ ಬಂದಿದೆ. ರಕ್ಷಿತ್​ ಶೆಟ್ಟಿ, ಚೈತ್ರಾ ಆಚಾರ್​, ರುಕ್ಮಿಣಿ ವಸಂತ್​ ಮುಂತಾದವರ ನಟನೆಗೆ ಚಪ್ಪಾಳೆ ಸಿಗುತ್ತಿದೆ. ‘ಈ ಸಿನಿಮಾದ ಕೊನೆಯ 25 ನಿಮಿಷ ನಿಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿದುಕೊಳ್ಳುತ್ತದೆ’ ಎಂದು ನೆಟ್ಟಿಗರೊಬ್ಬರು ಪೋಸ್ಟ್​ ಮಾಡಿದ್ದಾರೆ.

ಕನ್ನಡ ಮಾತ್ರವಲ್ಲದೇ ಪರಭಾಷೆಗೂ ಡಬ್​ ಆಗಿ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಚಿತ್ರ ಬಿಡುಗಡೆ ಆಗಿದೆ. ಈಗಾಗಲೇ ಸಮಂತಾ ರುತ್​ ಪ್ರಭು ಮುಂತಾದ ಸೆಲೆಬ್ರಿಟಿಗಳು ಈ ಸಿನಿಮಾ ಬಗ್ಗೆ ತಮ್ಮ ನಿರೀಕ್ಷೆ ಎಷ್ಟಿದೆ ಎಂಬುದನ್ನು ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ಈ ಸಿನಿಮಾ ಬಗ್ಗೆ ಜನರಲ್ಲಿ ಕ್ರೇಜ್​ ಸೃಷ್ಟಿಯಾಗಿದೆ ಎಂದು ಪ್ರೇಕ್ಷಕರು ಟ್ವೀಟ್​ ಮಾಡಿದ್ದಾರೆ. ‘ಇಂಥ ಗಾಡವಾದ ಲವ್​ ಸ್ಟೋರಿ ನೀಡಿದ್ದಕ್ಕೆ ಹೇಮಂತ್​ ರಾವ್​ ಅವರಿಗೆ ಧನ್ಯವಾದಗಳು’ ಎಂದು ತೆಲುಗು ಮಂದಿ ತಿಳಿಸಿದ್ದಾರೆ.

ಇದನ್ನೂ ಓದಿ: SSE Side B Review: ‘ಸೈಡ್​ ಎ’ ಬಳಿಕ ಮನು, ಪ್ರಿಯಾ ಬದುಕು ಬದಲಾದರೂ ‘ಸೈಡ್​ ಬಿ’ ಲಯ ಬದಲಾಗಿಲ್ಲ

‘ಎಲ್ಲರ ನಟನೆ ಚೆನ್ನಾಗಿದೆ. ಪ್ರತಿ ಫ್ರೇಮ್​ ಕೂಡ ಉತ್ತಮವಾಗಿ ಮೂಡಿಬಂದಿದೆ. ಕಥೆ ಮತ್ತು ಕ್ಲೈಮ್ಯಾಕ್ಸ್​ ಇಷ್ಟವಾಯ್ತು’ ಎಂದು ಪ್ರೇಕ್ಷಕರು ಮೆಚ್ಚುಗೆ ತಿಳಿಸಿದ್ದಾರೆ. ಕಥೆ ಅಪೂರ್ಣವಾಗಿದೆ ಎಂದು ಕೂಡ ಕೆಲವರು ಟೀಕೆ ಮಾಡಿದ್ದಾರೆ. ಸಿನಿಮಾದ ಕಥೆ ಕೊನೆಗೊಂಡ ರೀತಿ ಒಂದಷ್ಟು ಮಂದಿಗೆ ಇಷ್ಟ ಆಗಿಲ್ಲ. ಅದೇನೇ ಇದ್ದರೂ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಸಿನಿಮಾಗೆ ಉತ್ತಮ ಓಪನಿಂಗ್ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!