AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter Review: ಸದಾ ಕಾಲ ನೆನಪಿನಲ್ಲಿ ಉಳಿಯುವ ಸಿನಿಮಾ’: ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಟ್ವಿಟರ್​ ವಿಮರ್ಶೆ

Sapta Sagaradaache Ello Side B: ಡಿಫರೆಂಟ್​ ಆದ ಒಂದು ಪ್ರೇಮಕಥೆಯನ್ನು ನಿರ್ದೇಶಕ ಹೇಮಂತ್​ ಎಂ. ರಾವ್​ ಅವರು ತೆರೆಗೆ ತಂದಿರುವ ರೀತಿ ಎಲ್ಲರಿಗೂ ಇಷ್ಟ ಆಗುತ್ತಿದೆ. ವಿಶೇಷವಾಗಿ ಕ್ಲಾಸ್​ ಪ್ರೇಕ್ಷಕರನ್ನು ಈ ಸಿನಿಮಾ ಸೆಳೆದುಕೊಳ್ಳುತ್ತಿದೆ. ಪ್ರೀಮಿಯರ್​ ಶೋ ಮತ್ತು ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಪ್ರೇಕ್ಷಕರು ಟ್ವಿಟರ್​ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

Twitter Review: ಸದಾ ಕಾಲ ನೆನಪಿನಲ್ಲಿ ಉಳಿಯುವ ಸಿನಿಮಾ’: ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಟ್ವಿಟರ್​ ವಿಮರ್ಶೆ
ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ
ಮದನ್​ ಕುಮಾರ್​
|

Updated on: Nov 17, 2023 | 1:21 PM

Share

ಒಂದು ಕಥೆಯನ್ನು ಎರಡು ಪಾರ್ಟ್​ನಲ್ಲಿ ಹೇಳುವ ಟ್ರೆಂಡ್​ ಚಾಲ್ತಿಯಲ್ಲಿದೆ. ಅದೇ ರೀತಿ ‘ಸಪ್ತ ಸಾಗರದಾಚೆ ಎಲ್ಲೋ’ (Sapta Sagaradaache Ello) ಸಿನಿಮಾ ಕೂಡ ಎರಡು ಪಾರ್ಟ್​ನಲ್ಲಿ ಮೂಡಿಬಂದಿದೆ. ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಎ’ ಸಿನಿಮಾಗೆ ಜನರಿಂದ ಮೆಚ್ಚುಗೆ ಸಿಕ್ಕಿತ್ತು. ಅದರ ಮುಂದುವರಿದ ಕಥೆಯನ್ನು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಸಿನಿಮಾದಲ್ಲಿ ಹೇಳಲಾಗಿದೆ. ರಕ್ಷಿತ್​ ಶೆಟ್ಟಿ (Rakshit Shetty), ರುಕ್ಮಿಣಿ ವಸಂತ್​ ಅವರ ಜೊತೆ ಈ ಬಾರಿ ಚೈತ್ರಾ ಆಚಾರ್​ ಕೂಡ ಸೇರಿಕೊಂಡಿದ್ದಾರೆ. ಇಂದು (ನವೆಂಬರ್​ 17) ಈ ಸಿನಿಮಾ ಬಿಡುಗಡೆ ಆಗಿದೆ. ಗುರುವಾರ (ನವೆಂಬರ್​ 16) ರಾತ್ರಿಯೇ ಅನೇಕ ಕಡೆಗಳಲ್ಲಿ ಪೇಯ್ಡ್​ ಪ್ರೀಮಿಯರ್​ ಮಾಡಲಾಗಿತ್ತು. ಸಿನಿಮಾ ನೋಡಿದ ಬಹುತೇಕ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ (SSE Side B) ಸಿನಿಮಾದ ಟ್ವಿಟರ್​ ವಿಮರ್ಶೆ ಇಲ್ಲಿದೆ..

ಡಿಫರೆಂಟ್​ ಆದ ಒಂದು ಪ್ರೇಮಕಥೆಯನ್ನು ನಿರ್ದೇಶಕ ಹೇಮಂತ್​ ಎಂ. ರಾವ್​ ಅವರು ತೆರೆಗೆ ತಂದಿರುವ ರೀತಿ ಎಲ್ಲರಿಗೂ ಇಷ್ಟ ಆಗುತ್ತಿದೆ. ವಿಶೇಷವಾಗಿ ಕ್ಲಾಸ್​ ಪ್ರೇಕ್ಷಕರನ್ನು ಈ ಸಿನಿಮಾ ಸೆಳೆದುಕೊಳ್ಳುತ್ತಿದೆ. ‘ಇದು ಈ ದಶಕದಲ್ಲಿ ಬಂದ ಬೆಸ್ಟ್​ ಲವ್​ ಸ್ಟೋರಿ. ಸದಾ ಕಾಲ ನೆನಪಿನಲ್ಲಿ ಉಳಿಯುವಂತಹ ಸಿನಿಮಾ ಇದಾಗಿದೆ’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ. ಹೇಮಂತ್​ ಎಂ. ರಾವ್​ ಅವರ ಕಸುಬುದಾರಿಕೆಗೆ ಮೆಚ್ಚುಗೆ ಸಿಗುತ್ತಿದೆ.

ಕೆಲವರು ಈ ಸಿನಿಮಾವನ್ನು ಮಾಸ್ಟರ್​ಪೀಸ್​ ಎಂದು ಕರೆದಿದ್ದಾರೆ. ಭಾವನೆಗಳಿಗೆ ಹೆಚ್ಚು ಮಹತ್ವ ನೀಡಿರುವುದು ಬಹುತೇಕರಿಗೆ ಇಷ್ಟ ಆಗಿದೆ. ‘ಇದು ನಿಜವಾದ ಸೀಕ್ವೆಲ್​. ಎಲ್ಲರೂ ನೋಡಲೇಬೇಕಾದ ಸಿನಿಮಾ’ ಎಂಬ ಅಭಿಪ್ರಾಯ ಕೂಡ ಪ್ರೇಕ್ಷಕರಿಂದ ಬಂದಿದೆ. ರಕ್ಷಿತ್​ ಶೆಟ್ಟಿ, ಚೈತ್ರಾ ಆಚಾರ್​, ರುಕ್ಮಿಣಿ ವಸಂತ್​ ಮುಂತಾದವರ ನಟನೆಗೆ ಚಪ್ಪಾಳೆ ಸಿಗುತ್ತಿದೆ. ‘ಈ ಸಿನಿಮಾದ ಕೊನೆಯ 25 ನಿಮಿಷ ನಿಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿದುಕೊಳ್ಳುತ್ತದೆ’ ಎಂದು ನೆಟ್ಟಿಗರೊಬ್ಬರು ಪೋಸ್ಟ್​ ಮಾಡಿದ್ದಾರೆ.

ಕನ್ನಡ ಮಾತ್ರವಲ್ಲದೇ ಪರಭಾಷೆಗೂ ಡಬ್​ ಆಗಿ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಚಿತ್ರ ಬಿಡುಗಡೆ ಆಗಿದೆ. ಈಗಾಗಲೇ ಸಮಂತಾ ರುತ್​ ಪ್ರಭು ಮುಂತಾದ ಸೆಲೆಬ್ರಿಟಿಗಳು ಈ ಸಿನಿಮಾ ಬಗ್ಗೆ ತಮ್ಮ ನಿರೀಕ್ಷೆ ಎಷ್ಟಿದೆ ಎಂಬುದನ್ನು ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ಈ ಸಿನಿಮಾ ಬಗ್ಗೆ ಜನರಲ್ಲಿ ಕ್ರೇಜ್​ ಸೃಷ್ಟಿಯಾಗಿದೆ ಎಂದು ಪ್ರೇಕ್ಷಕರು ಟ್ವೀಟ್​ ಮಾಡಿದ್ದಾರೆ. ‘ಇಂಥ ಗಾಡವಾದ ಲವ್​ ಸ್ಟೋರಿ ನೀಡಿದ್ದಕ್ಕೆ ಹೇಮಂತ್​ ರಾವ್​ ಅವರಿಗೆ ಧನ್ಯವಾದಗಳು’ ಎಂದು ತೆಲುಗು ಮಂದಿ ತಿಳಿಸಿದ್ದಾರೆ.

ಇದನ್ನೂ ಓದಿ: SSE Side B Review: ‘ಸೈಡ್​ ಎ’ ಬಳಿಕ ಮನು, ಪ್ರಿಯಾ ಬದುಕು ಬದಲಾದರೂ ‘ಸೈಡ್​ ಬಿ’ ಲಯ ಬದಲಾಗಿಲ್ಲ

‘ಎಲ್ಲರ ನಟನೆ ಚೆನ್ನಾಗಿದೆ. ಪ್ರತಿ ಫ್ರೇಮ್​ ಕೂಡ ಉತ್ತಮವಾಗಿ ಮೂಡಿಬಂದಿದೆ. ಕಥೆ ಮತ್ತು ಕ್ಲೈಮ್ಯಾಕ್ಸ್​ ಇಷ್ಟವಾಯ್ತು’ ಎಂದು ಪ್ರೇಕ್ಷಕರು ಮೆಚ್ಚುಗೆ ತಿಳಿಸಿದ್ದಾರೆ. ಕಥೆ ಅಪೂರ್ಣವಾಗಿದೆ ಎಂದು ಕೂಡ ಕೆಲವರು ಟೀಕೆ ಮಾಡಿದ್ದಾರೆ. ಸಿನಿಮಾದ ಕಥೆ ಕೊನೆಗೊಂಡ ರೀತಿ ಒಂದಷ್ಟು ಮಂದಿಗೆ ಇಷ್ಟ ಆಗಿಲ್ಲ. ಅದೇನೇ ಇದ್ದರೂ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಸಿನಿಮಾಗೆ ಉತ್ತಮ ಓಪನಿಂಗ್ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು