AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಪ್ತ ಸಾಗರದಾಚೆ ಎಲ್ಲೋ: ಸೈಡ್ ಬಿನಲ್ಲಿ ಬಣ್ಣ ಬದಲಿಸಿ ಕೆಂಪಾದ ಕತೆ

Sapta Sagaradache Ello Side B: ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ನಟಿಸಿದ್ದ ನವಿರು ಪ್ರೇಮಕತೆ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಪ್ರೇಕ್ಷಕರು ಹಾಗೂ ವಿಮರ್ಶಕರ ಮೆಚ್ಚುಗೆ ಗಳಿಸಿತ್ತು. ಈ ಸಿನಿಮಾದ ಎರಡನೇ ಭಾಗ ಬಿಡುಗಡೆಗೆ ಸಜ್ಜಾಗಿದ್ದು ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ.

ಸಪ್ತ ಸಾಗರದಾಚೆ ಎಲ್ಲೋ: ಸೈಡ್ ಬಿನಲ್ಲಿ ಬಣ್ಣ ಬದಲಿಸಿ ಕೆಂಪಾದ ಕತೆ
ಎಸ್​ಎಸ್​ಇ2
ಮಂಜುನಾಥ ಸಿ.
|

Updated on:Nov 04, 2023 | 7:12 PM

Share

ರಕ್ಷಿತ್ ಶೆಟ್ಟಿ (Rakshit Shetty), ರುಕ್ಮಿಣಿ ವಸಂತ್ (Rukmini Vasanth) ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಸೆಪ್ಟೆಂಬರ್ 1 ರಂದು ಬಿಡುಗಡೆ ಆಗಿ ಪ್ರೇಕ್ಷಕರು ಹಾಗೂ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಹೊಡಿ, ಬಡಿ ಸಿನಿಮಾಗಳ ಜಮಾನಾದಲ್ಲಿ ನವಿರು ಪ್ರೇಮಕತೆಯನ್ನು ಇಂಟೆನ್ಸ್​ ಆಗಿ ಹೇಳಿರುವ ರೀತಿಗೆ ಪ್ರೇಕ್ಷಕರು ಫಿದಾ ಆಗಿದ್ದರು. ಮನು ಹಾಗೂ ಪ್ರಿಯಾಳ ಜಗತ್ತಿನಲ್ಲಿ ತಾವೂ ಒಬ್ಬರಾಗಿ ಅವರ ಪ್ರೀತಿ, ಖುಷಿ, ದುಃಖಗಳನ್ನು ತಾವೂ ಅನುಭವಿಸಿ ಹೊಸ ರೀತಿಯ ಅನುಭವ ಪಡೆದಿದ್ದರು. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾವು ಒಂದು ಕುತೂಹಕಲಕಾರಿ ಘಟ್ಟದಲ್ಲಿ ಅಂತ್ಯವಾಗಿ, ಕತೆಯಲ್ಲಿ ಮುಂದೆ ಏನಾಯ್ತು ಎಂಬುದನ್ನು ಮುಂದಿನ ಭಾಗದಲ್ಲಿ ತೋರಿಸುವುದಾಗಿ ಹೇಳಿದ್ದರು ನಿರ್ದೇಶಕ ಹೇಮಂತ್ ರಾವ್.

ಅಂತೆಯೇ ಇದೀಗ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಸೈಡ್ ಬಿ ಅಥವಾ ಎರಡನೇ ಭಾಗದ ಟ್ರೈಲರ್ ಬಿಡುಗಡೆ ಆಗಿದೆ. ಮೊದಲ ಭಾಗದ ಟ್ರೈಲರ್​ನಲ್ಲಿ ನೀಲಿ ಬಣ್ಣ ಢಾಳಾಗಿ ಕಂಡಿತ್ತು, ಆದರೆ ಸೈಡ್ ಬಿನಲ್ಲಿ ನವಿರಾದ ನೀಲಿ ಬಣ್ಣದ ಸ್ಥಾನವನ್ನು ಕೆಂಪು ಬಣ್ಣ ಆಕ್ರಮಿಸಿದೆ. ಅಪ್ಪಟ ಪ್ರೇಮಿಯಾಗಿದ್ದ ಮನು, ಇಲ್ಲಿ ಅವತಾರ ಬದಲಿಸಿಕೊಂಡು ವೈಯಲೆಂಟ್ ಆಗಿದ್ದಾನೆ. ಕೈಯಲ್ಲಿ ಚಾಕು ಸಹ ಇದೆ.

ಮೊದಲ ಭಾಗದಲ್ಲಿ ಜೈಲು ಪಾಲಾಗಿ ತನ್ನ ಪ್ರೀತಿಗೆ ದೂರವಾಗುವ ಸನ್ನಿವೇಶ ತಂದುಕೊಂಡಿದ್ದ ಮನು, ಎರಡನೇ ಭಾಗದಲ್ಲಿ ಜೈಲಿನಿಂದ ಬಿಡುಗಡೆಯನ್ನೇನೋ ಪಡೆದಿದ್ದಾನೆ. ಆದರೆ ಪ್ರಿಯಾಳ ನೆನಪಿನಿಂದ ಹೊರಗೆ ಬಂದಿಲ್ಲ. ಪ್ರಿಯಾ ಈಗ ಭಿನ್ನ ಜಗತ್ತಿನಲ್ಲಿ ಬದುಕುತ್ತಿದ್ದಾಳೆ. ಎದುರು-ಬದುರು ಇದ್ದರೂ ಸಹ ಒಬ್ಬೊಬ್ಬರು ಒಂದೊಂದು ತೀರವಾಗಿಬಿಟ್ಟಿದ್ದಾರೆ ಪ್ರಿಯಾ ಹಾಗೂ ಮನು.

ಇದನ್ನೂ ಓದಿ:ನವೆಂಬರ್​ 17ಕ್ಕೆ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಬಿಡುಗಡೆ; ಈ ಬಾರಿ ಏನು ಸ್ಪೆಷಲ್​?

ಟ್ರೈಲರ್​ನಲ್ಲಿ ಚೈತ್ರಾ ಆಚಾರ್ ಸಹ ಇದ್ದಾರೆ. ಮನು, ಪ್ರಿಯಾಳ ನೆನಪಿನಿಂದ ಹೊರಗೆ ಬರಲು ಚೈತ್ರಾ ಆಚಾರ್ ನಿರ್ವಹಿಸಿರುವ ಸುರಭಿ ಪಾತ್ರದ ಸಾಂಗತ್ಯಕ್ಕೆ ಜಾರುವ ಕೆಲವು ದೃಶ್ಯಗಳನ್ನು ಟ್ರೈಲರ್​ನಲ್ಲಿ ತೋರಿಸಲಾಗಿದೆ. ಮೊದಲ ಭಾಗದಲ್ಲಿ ಕಾಣಿಸಿಕೊಂಡಿದ್ದ ಅಚ್ಯುತ್ ಕುಮಾರ್ ಈ ಸಿನಿಮಾದಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ಎರಡನೇ ಭಾಗದಲ್ಲಿ ಗೋಪಾಲ ದೇಶಪಾಂಡೆ ಅವರಿಗೆ ಮಹತ್ವದ ಪಾತ್ರ ಇರುವಂತಿದೆ.

ಮೊದಲ ಭಾಗದಂತೆಯೇ ಎರಡನೇ ಭಾಗದಲ್ಲಿಯೂ ಸಂಗೀತ, ನಿರೂಪಣಾ ವಿಧಾನ, ಕ್ಯಾಮೆರಾ ಕೆಲಸಗಳು ಗಮನ ಸೆಳೆಯುವಂತಿದೆ. ಇದರ ಕೆಲವು ಝಲಕ್​ಗಳು ಟ್ರೈಲರ್​ನಲ್ಲಿಯೇ ಕಾಣ ಸಿಗುತ್ತವೆ. ಹೇಮಂತ್ ರಾವ್ ನಿರ್ದೇಶನದ ಈ ಸಿನಿಮಾಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದಾರೆ. ನಿರ್ಮಾಣ ರಕ್ಷಿತ್ ಶೆಟ್ಟಿ ಅವರದ್ದೇ. ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಸಿನಿಮಾ ನವೆಂಬರ್ 17ರಂದು ಕನ್ನಡ ಸೇರಿದಂತೆ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:08 pm, Sat, 4 November 23

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು