ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಮೊದಲ ಸಾಂಗ್ ಹೇಗಿದೆ ಕೇಳಿ..

Horaata Lyrical Song: ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾನ ಅದ್ದೂರಿಯಾಗಿ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ಇದರ ಭಾಗವಾಗಿ ಸಾಂಗ್ ರಿಲೀಸ್ ಮಾಡಲಾಗಿದೆ. ‘ಹೋರಾಟ..’ ಹೆಸರಿನ ಹಾಡು ಬಿಡುಗಡೆ ಆಗಿದೆ.

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಮೊದಲ ಸಾಂಗ್ ಹೇಗಿದೆ ಕೇಳಿ..
ರಕ್ಷಿತ್ ಶೆಟ್ಟಿ
Follow us
|

Updated on:Jul 20, 2023 | 10:58 AM

ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಸೆಪ್ಟೆಂಬರ್ 1ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ‘777 ಚಾರ್ಲಿ’ (777 Charlie Movie) ಬಳಿಕ ರಿಲೀಸ್ ಆಗುತ್ತಿರುವ ರಕ್ಷಿತ್ ನಟನೆಯ ಸಿನಿಮಾ ಇದು ಎಂಬ ಕಾರಣದಿಂದಲೂ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಪ್ರಮೋಷನ್ ಆರಂಭ ಆಗಿದೆ. ಈ ಸಿನಿಮಾದ ಮೊದಲ ಸಾಂಗ್ ಇಂದು (ಜುಲೈ 20) ರಿಲೀಸ್ ಆಗಿದೆ. ಈ ಹಾಡು ಕೇಳುಗರಿಗೆ ಇಷ್ಟ ಆಗಿದೆ.

ಹೇಮಂತ್ ರಾವ್ ಹಾಗೂ ರಕ್ಷಿತ್ ಶೆಟ್ಟಿ ಕಾಂಬಿನೇಷನ್​ನಲ್ಲಿ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಸಿನಿಮಾ ಮೂಡಿ ಬಂದಿತ್ತು. ಈ ಚಿತ್ರ ಶೀರ್ಷಿಕೆಯ ಮೂಲಕವೇ ಗಮನ ಸೆಳೆದಿತ್ತು. ಈ ಸಿನಿಮಾ ವಿಮರ್ಶಕರಿಂದ ಮೆಚ್ಚುಗೆಯನ್ನೂ ಪಡೆಯಿತು. ಈಗ ಮತ್ತೊಂದು ಭಿನ್ನವಾದ ಟೈಟಲ್ ಜೊತೆ ಈ ಜೋಡಿ ಪ್ರೇಕ್ಷಕರ ಎದುರು ಬರುತ್ತಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾನ ಅದ್ದೂರಿಯಾಗಿ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ಇದರ ಭಾಗವಾಗಿ ಸಾಂಗ್ ರಿಲೀಸ್ ಮಾಡಲಾಗಿದೆ. ‘ಹೋರಾಟ..’ ಹೆಸರಿನ ಹಾಡು ಬಿಡುಗಡೆ ಆಗಿದೆ.

ಚರಣ್ ರಾಜ್ ಅವರ ಕೆಲಸದ ಬಗ್ಗೆ ಪ್ರೇಕ್ಷಕರಿಗೆ ಭರವಸೆ ಇದೆ. ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಹೋರಾಟ..’ ಹಾಡು ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ಎಷ್ಟು ಹಾಡುಗಳು ಇರಲಿವೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಇದನ್ನೂ ಓದಿ: ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಮಧ್ಯೆ ಫ್ರೆಂಡ್​ಶಿಪ್ ಬೆಳೆದಿದ್ದು ಹೇಗೆ? ಇಲ್ಲಿದೆ ಇವರ ಗೆಳೆತನದ ಕಥೆ

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಎರಡು ಭಾಗದಲ್ಲಿ ರಿಲೀಸ್ ಆಗುತ್ತಿದೆ. ಮೊದಲ ಭಾಗಕ್ಕೆ ‘ಸೈಡ್​ ಎ’ ಎಂದು ಹೆಸರು ಇಡಲಾಗಿದೆ. ಎರಡನೇ ಪಾರ್ಟ್​ಗೆ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಎಂದು ಕರೆಯಲಾಗಿದೆ. ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಜೊತೆ ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಗೋಪಾಲ್ ಕೃಷ್ಣ ದೇಶಪಾಂಡೆ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Thu, 20 July 23

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ