AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾಯ್ತು ರಕ್ಷಿತ್​ ಶೆಟ್ಟಿ ಗೆಟಪ್​: ‘ನಿಮ್ಮ ಮನು 10 ವರ್ಷಗಳ ನಂತರ’ ಎಂದ ಸಿಂಪಲ್​ ಸ್ಟಾರ್​

Rakshit Shetty | Saptha Sagaradache Ello: ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಹೊಸ ಪೋಸ್ಟರ್​ ಬಿಡುಗಡೆ ಆಗಿದೆ. ಇದರಲ್ಲಿ ರಕ್ಷಿತ್​ ಶೆಟ್ಟಿ ಅವರ ಗೆಟಪ್​ ಗಮನ ಸೆಳೆಯುತ್ತಿದೆ.

ಬದಲಾಯ್ತು ರಕ್ಷಿತ್​ ಶೆಟ್ಟಿ ಗೆಟಪ್​: ‘ನಿಮ್ಮ ಮನು 10 ವರ್ಷಗಳ ನಂತರ’ ಎಂದ ಸಿಂಪಲ್​ ಸ್ಟಾರ್​
ರಕ್ಷಿತ್ ಶೆಟ್ಟಿ
TV9 Web
| Edited By: |

Updated on:May 23, 2022 | 12:48 PM

Share

‘ಸಿಂಪಲ್​ ಸ್ಟಾರ್’ ರಕ್ಷಿತ್​ ಶೆಟ್ಟಿ (Rakshit Shetty) ಅವರು ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಪ್ರತಿ ಸಿನಿಮಾದಲ್ಲಿಯೂ ಅವರು ಬೇರೆ ಬೇರೆ ರೀತಿಯ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇನ್ನೇನು ಕೆಲವೇ ದಿನಗಳಲ್ಲಿ ಅವರ ‘777 ಚಾರ್ಲಿ’ ಸಿನಿಮಾ ರಿಲೀಸ್​ ಆಗಲಿದೆ. ಅದರ ಜೊತೆಗೆ ರಕ್ಷಿತ್​ ಶೆಟ್ಟಿ ನಟನೆಯ ಮುಂಬರುವ ಸಿನಿಮಾಗಳ ಬಗ್ಗೆಯೂ ಕೌತುಕ ಮೂಡಿದೆ. ನಿರ್ದೇಶಕ ಹೇಮಂತ್​ ಎಂ. ರಾವ್​ (Hemanth M Rao) ಆ್ಯಕ್ಷನ್​-ಕಟ್​ ಹೇಳುತ್ತಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ರಕ್ಷಿತ್​ ಶೆಟ್ಟಿ ಅವರು ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಈಗ ಹೊಸ ಪೋಸ್ಟರ್​ ರಿಲೀಸ್​ ಮಾಡಲಾಗಿದೆ. ಈ ಪೋಸ್ಟರ್​ನಲ್ಲಿ ಅವರು ತುಂಬ ರಗಡ್​ ಆಗಿ ಕಾಣಿಸಿಕೊಂಡಿದ್ದಾರೆ. ಆ ಮೂಲಕ ‘ಸಪ್ತ ಸಾಗರದಾಚೆ ಎಲ್ಲೋ’ (Saptha Sagaradache Ello) ಸಿನಿಮಾ ಮೇಲೆ ಕೌತುಕ ಮೂಡುವಂತಾಗಿದೆ. ಈ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ ಅವರಿಗೆ ಜೋಡಿಯಾಗಿ ರುಕ್ಮಿಣಿ ವಸಂತ್​ ಅವರ ನಟಿಸುತ್ತಿದ್ದಾರೆ. ಇಬ್ಬರ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ತುಂಬ ನಿರೀಕ್ಷೆ ಇದೆ. ಈಗ ರಕ್ಷಿತ್​ ಶೆಟ್ಟಿ ಅವರ ಈ ಹೊಸ ಪೋಸ್ಟರ್​ ವೈರಲ್​ ಆಗುತ್ತಿದೆ. ಇದನ್ನು ನೋಡಿ ಅನೇಕ ಸೆಲೆಬ್ರಿಟಿಗಳು ಕೂಡ ಫಿದಾ ಆಗಿದ್ದಾರೆ.

ರಕ್ಷಿತ್​ ಶೆಟ್ಟಿ ಅವರು ಇತ್ತೀಚೆಗೆ ದೇಹದ ತೂಕ ಹೆಚ್ಚಿಸಿಕೊಂಡಿದ್ದರು. ‘777 ಚಾರ್ಲಿ’ ಸಿನಿಮಾದ ಟ್ರೇಲರ್​ ಲಾಂಚ್​ ಸಂದರ್ಭದಲ್ಲಿ ಮಾಧ್ಯಮಗಳ ಎದುರು ರಕ್ಷಿತ್​ ಕಾಣಿಸಿಕೊಂಡಾಗ ಅವರು ಕೊಂಚ ದಪ್ಪ ಆಗಿದ್ದಾರೆ ಎಂಬುದು ಎಲ್ಲರ ಗಮನಕ್ಕೂ ಬಂತು. ಅಷ್ಟಕ್ಕೂ ಅವರು ದೇಹದ ತೂಕ ಹೆಚ್ಚಿಸಿಕೊಂಡಿದ್ದು ಯಾಕೆ ಎಂಬುದಕ್ಕೆ ಈಗ ಉತ್ತರ ಸಿಕ್ಕಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ರಕ್ಷಿತ್​ ಶೆಟ್ಟಿ ಅವರು ಬೇರೆ ಬೇರೆ ಗೆಟಪ್​ ಧರಿಸಲಿದ್ದಾರೆ. ಈ ಮೊದಲು ಬಿಡುಗಡೆ ಆಗಿದ್ದ ಪೋಸ್ಟರ್​ಗಳಲ್ಲಿ ಅವರು ಲವರ್ ಬಾಯ್​ ರೀತಿ ಕಾಣಿಸಿಕೊಂಡಿದ್ದರು. ಚಿತ್ರದ ದ್ವಿತೀಯಾರ್ಧದಲ್ಲಿ ರಕ್ಷಿತ್​ ಶೆಟ್ಟಿ ಲುಕ್​ ಹೇಗಿರಲಿದೆ ಎಂಬುದಕ್ಕೆ ಈಗ ಹೊಸ ಪೋಸ್ಟರ್​ ಮೂಲಕ ಉತ್ತರ ಸಿಕ್ಕಿದೆ.

ಇದನ್ನೂ ಓದಿ
Image
‘ಬೇರೆ ಭಾಷೆಯಲ್ಲಿ ನಟಿಸೋ ಆಸೆ ಇಲ್ಲ, ಕನ್ನಡದಲ್ಲಿ ಒಳ್ಳೆಯ ಚಿತ್ರ ಮಾಡಿದ್ರೆ ದೇಶಾದ್ಯಂತ ರೀಚ್​ ಆಗತ್ತೆ’: ರಕ್ಷಿತ್​ ಶೆಟ್ಟಿ
Image
ರಶ್ಮಿಕಾ ಮಂದಣ್ಣಗೆ ಖಂಡಿತಾ ಇಷ್ಟ ಆಗಲಿದೆ ರಕ್ಷಿತ್​ ಶೆಟ್ಟಿಯ ‘777 ಚಾರ್ಲಿ’ ಸಿನಿಮಾ; ಕಾರಣ ಏನು?
Image
‘ಸಕುಟುಂಬ ಸಮೇತ’ ಮದುವೆ ಕಹಾನಿಯ ಡೀಲ್​ ಖುದುರಿದ ಬಳಿಕ ಬದಲಾಯ್ತು ರಕ್ಷಿತ್​ ಶೆಟ್ಟಿ ತೀರ್ಮಾನ
Image
ರಕ್ಷಿತ್​ ಶೆಟ್ಟಿಗೆ ರುಕ್ಮಿಣಿ ಜೊತೆ ಇದೇ ಮೊದಲ ಬಾರಿಗೆ ಸೀರಿಯಸ್​ ಆಗಿ ಲವ್​ ಆಗ್ತಿದೆ! ಏನ್​ ಸಮಾಚಾರ?

ಇದನ್ನೂ ಓದಿ: ‘ರಮ್ಯಾ ನನ್ನ ಕ್ರಶ್​, ಆದರೆ ಮದುವೆ ಬಗ್ಗೆ ಹಬ್ಬಿರೋದು ಗಾಸಿಪ್​’: ನೇರ ಪ್ರಶ್ನೆಗೆ ಉತ್ತರ ನೀಡಿದ ರಕ್ಷಿತ್​ ಶೆಟ್ಟಿ

ಪಾತ್ರಕ್ಕಾಗಿ ರಕ್ಷಿತ್​ ಶೆಟ್ಟಿ ಅವರು ಸಖತ್​ ತಯಾರಿ ಮಾಡಿಕೊಂಡು ನಟಿಸಿದ್ದಾರೆ. ಅವರ ಬದ್ಧತೆ ಕಂಡು ನಿರ್ದೇಶಕ ಹೇಮಂತ್ ಎಂ.​ ರಾವ್​ ಮತ್ತು ಅವರ ತಂಡಕ್ಕೆ ಖುಷಿ ಆಗಿದೆ. ಈ ಸಿನಿಮಾ ರಕ್ಷಿತ್​ ಶೆಟ್ಟಿ ಅವರ ‘ಪರಂವಾ ಪಿಕ್ಚರ್ಸ್​​’ ಬ್ಯಾನರ್​ ಮೂಲಕ ಮೂಡಿಬರುತ್ತಿದೆ. ಹೊಸ ಪೋಸ್ಟರ್​ ಅನ್ನು ರಕ್ಷಿತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ನಿಮ್ಮ ಮನು ಹತ್ತು ವರ್ಷಗಳ ನಂತರ’ ಎಂದು ಅವರು ಕ್ಯಾಪ್ಷನ್​ ನೀಡಿದ್ದಾರೆ. ಅವರ ಮುಖದ ಮೇಲೆ ಹಳೇ ಗಾಯದ ಗುರುತುಗಳು ಕಾಣಿಸಿಕೊಂಡಿವೆ. ಅಂದರೆ ಕಥೆಯಲ್ಲಿ ಸಾಕಷ್ಟು ಘಟನೆಗಳು ನಡೆದ ಬಳಿಕ ಹೀರೋ ಈ ರೀತಿಯಾಗಿ ಬದಲಾಗುತ್ತಾನೆ ಎಂಬ ಸುಳಿವು ನೀಡಲಾಗಿದೆ. ಈ ಗೆಟಪ್​ಗಾಗಿ ರಕ್ಷಿತ್​ ಶೆಟ್ಟಿ ಅವರು ಅಂದಾಜು 20 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರೆ. ಸಾಲ್ಟ್​ ಆ್ಯಂಡ್​ ಪೆಪ್ಪರ್​ ಗಡ್ಡದಲ್ಲಿ ಪೋಸ್​ ನೀಡಿದ್ದಾರೆ. ಒಟ್ಟಾರೆಯಾಗಿ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕುವಲ್ಲಿ ಯಶಸ್ವಿ ಆಗಿದೆ.

ಸದ್ಯ ರಕ್ಷಿತ್ ಶೆಟ್ಟಿ ಅವರು ‘777 ಚಾರ್ಲಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಜೂನ್​ ಅಂತ್ಯದಲ್ಲಿ ಅವರು ಮತ್ತೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ. ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಬಳಿಕ ನಿರ್ದೇಶಕ ಹೇಮಂತ್​ ಎಂ. ರಾವ್​ ಮತ್ತು ರಕ್ಷಿತ್​ ಶೆಟ್ಟಿ ಎರಡನೇ ಬಾರಿಗೆ ಒಂದಾಗಿರುವುದರಿಂದಲೂ ಈ ಚಿತ್ರ ಹೈಪ್​ ಪಡೆದುಕೊಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:48 pm, Mon, 23 May 22

Follow Us
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು