AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಿಚರ್ಡ್ ಆಂಟನಿ’ ಬಗ್ಗೆ ಸುಳಿವು ಕೊಟ್ಟ ರಕ್ಷಿತ್ ಶೆಟ್ಟಿ

Richard Anthony: ರಕ್ಷಿತ್ ಶೆಟ್ಟಿ ‘ರಿಚರ್ಡ್ ಆಂಟನಿ’ ಸಿನಿಮಾದ ಬಗ್ಗೆ ಸುಳಿವೊಂದನ್ನು ನೀಡಿದ್ದಾರೆ. ರಕ್ಷಿತ್ ನೀಡಿರುವ ಸುಳಿವಿನಂತೆ ಆದಷ್ಟು ಬೇಗ ಸಿನಿಮಾ ಪ್ರಾರಂಭವಾಗಲಿದೆ.

‘ರಿಚರ್ಡ್ ಆಂಟನಿ’ ಬಗ್ಗೆ ಸುಳಿವು ಕೊಟ್ಟ ರಕ್ಷಿತ್ ಶೆಟ್ಟಿ
ಮಂಜುನಾಥ ಸಿ.
|

Updated on: Feb 04, 2024 | 3:25 PM

Share

ರಕ್ಷಿತ್ ಶೆಟ್ಟಿ (Rakshit Shetty) ನಟಿಸಿ ನಿರ್ಮಾಣ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಸೈಡ್ ಬಿ ಇತ್ತೀಚೆಗಷ್ಟೆ ಒಟಿಟಿಯಲ್ಲಿ ಬಿಡುಗಡೆ ಆಗಿ ಭಾರಿ ಮೆಚ್ಚುಗೆ ಗಳಿಸುತ್ತಿದೆ. ಚಿತ್ರಮಂದಿರದಲ್ಲಿಯೂ ಸಹ ಈ ಸಿನಿಮಾ ಹಿಟ್ ಎನಿಸಿಕೊಂಡಿತ್ತು. ಈಗ ಒಟಿಟಿಯಲ್ಲಿ ದೇಶ-ವಿದೇಶಗಳ ಸಿನಿಮಾ ಪ್ರೇಕ್ಷಕರನ್ನು ಎಸ್​ಎಸ್​ಇ ತಲುಪಿದ್ದು ಇಡೀ ಚಿತ್ರತಂಡಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಬಳಿಕ ರಕ್ಷಿತ್ ಶೆಟ್ಟಿ ತಮ್ಮದೇ ನಿರ್ದೇಶನದ ‘ರಿಚರ್ಡ್ ಆಂಟನಿ’ ಸಿನಿಮಾದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ರಿಚರ್ಡ್ ಆಂಟನಿ’ ಬಗ್ಗೆ ಇತ್ತೀಚೆಗೆ ಕೆಲವು ಸುದ್ದಿಗಳು ಸಹ ಹರಿದಾಡುತ್ತಿವೆ. ಇದರ ನಡುವೆ ಸಿನಿಮಾದ ಬಗ್ಗೆ ಸಣ್ಣ ಸುಳಿವೊಂದನ್ನು ರಕ್ಷಿತ್ ನೀಡಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಯ ಸುರಿಮಳೆಯೇ ಸುರಿಸಲಾಗುತ್ತಿದೆ. ರಕ್ಷಿತ್ ಶೆಟ್ಟಿ ಆಯ್ದ ಕೆಲವು ಒಳ್ಳೆಯ ಟ್ವೀಟ್​ಗಳಿಗೆ ಪ್ರತಿಕ್ರಿಯೆ ಸಹ ನೀಡುತ್ತಿದ್ದಾರೆ. ‘ಎಸ್​ಎಸ್​ಇ’ ಸೈಡ್ ಬಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದ ನೆಟ್ಟಿಗರೊಬ್ಬರು ರಕ್ಷಿತ್ ಶೆಟ್ಟಿ ಅವರನ್ನು ‘ರಿಚರ್ಡ್ ಆಂಟೋನಿ’ ಯಾವಾರ ಆರಂಭಿಸುತ್ತೀರಿ, ಒಂದು ಸುಳಿವಾದರೂ ಕೊಡಿ ಎಂದಿದ್ದರು.

ಇದನ್ನೂ ಓದಿ:ಪಾರ್ಟಿಗೆ ಕರಿಯಲ್ವಾ ಎಂದ ಶಿವಣ್ಣನಿಗೆ, ರಕ್ಷಿತ್ ಶೆಟ್ಟಿ ಹೇಳಿದ್ದೇನು?

ನೆಟ್ಟಿಗರ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾ ಬಿಡುಗಡೆ ಆಗಿ ಮಾರ್ಚ್ 28ಕ್ಕೆ ಹತ್ತು ವರ್ಷವಾಗುತ್ತದೆ’ ಎಂದಿದ್ದಾರೆ. ‘ರಿಚರ್ಡ್ ಆಂಟನಿ’ ಸಿನಿಮಾವನ್ನು ಅದೇ ದಿನ ಪ್ರಾರಂಭ ಮಾಡುವ ಸಾಧ್ಯತೆ ಇದೆ. ‘ಉಳಿದವರು ಕಂಡಂತೆ’ ಸಿನಿಮಾ 2014ರ ಮಾರ್ಚ್ 28ಕ್ಕೆ ಬಿಡುಗಡೆ ಆಗಿತ್ತು. ಅದಾದ ಬಳಿಕ ಇನ್ಯಾವುದೇ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಿರ್ದೇಶನ ಮಾಡಿಲ್ಲ. ಇದೀಗ ‘ರಿಚರ್ಡ್ ಆಂಟನಿ’ ನಿರ್ದೇಶನ ಮಾಡುತ್ತಿದ್ದಾರೆ.

‘ರಿಚರ್ಟ್ ಆಂಟನಿ’ ಸಿನಿಮಾವನ್ನು ಹೊಂಬಾಳೆ ಪ್ರೊಡಕ್ಷನ್​ನವರು ನಿರ್ಮಾಣ ಮಾಡಲಿದ್ದಾರೆ ಎನ್ನಲಾಗಿತ್ತು. ಹೊಂಬಾಳೆಯವರು ಕೆಲ ಪೋಸ್ಟರ್​ಗಳನ್ನು ಸಹ ಬಿಡುಗಡೆ ಮಾಡಿದ್ದರು. ಆದರೆ ಇತ್ತೀಚೆಗೆ ಹೊರಬಂದಿರುವ ಸುದ್ದಿಯಂತೆ ಹೊಂಬಾಳೆಯವರು ‘ರಿಚರ್ಡ್ ಆಂಟನಿ’ ಸಿನಿಮಾವನ್ನು ಕೈಬಿಟ್ಟಿದ್ದಾರಂತೆ. ಹೀಗಾಗಿ ರಕ್ಷಿತ್ ಶೆಟ್ಟಿ ತಾವೇ ಸ್ವತಃ ‘ರಿಚರ್ಡ್ ಆಂಟನಿ’ ಸಿನಿಮಾ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ