AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಂಗಿ ತರಂಗದಲ್ಲಿ’ ಹೀರೋ ಆಗಿ ರಕ್ಷಿತ್ ನಟಿಸಬೇಕಿತ್ತು.. ಆಮೇಲೆ ಏನಾಯ್ತು?

Rangitharanga Movie: ಕನ್ನಡ ಚಿತ್ರರಂಗದ ಕಲ್ಟ್ ಕ್ಲಾಸಿಕ್ ಥ್ರಿಲ್ಲರ್ ಸಿನಿಮಾ ‘ರಂಗಿತರಂಗ’. ಈ ಸಿನಿಮಾ ಬಿಡುಗಡೆ ಆಗಿ 10 ವರ್ಷಗಳಾಯ್ತು. ಸಿನಿಮಾ ಅನ್ನು ಅನುಪ್ ಭಂಡಾರಿ ನಿರ್ದೇಶನ ಮಾಡಿದ್ದರು, ಅವರ ಸಹೋದರ ನಿರೂಪ್ ಭಂಡಾರಿ ನಾಯಕನಾಗಿ ನಟಿಸಿದ್ದರು. ಸಾಯಿಕುಮಾರ್ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದರು. ಅಸಲಿಗೆ ಈ ಸಿನಿಮಾನಲ್ಲಿ ರಕ್ಷಿತ್ ಶೆಟ್ಟಿ ನಾಯಕನಾಗಿ ನಟಿಸಬೇಕಿತ್ತಂತೆ. ಆದರೆ ನಟಿಸಲಿಲ್ಲ ಏಕೆ?

‘ರಂಗಿ ತರಂಗದಲ್ಲಿ’ ಹೀರೋ ಆಗಿ ರಕ್ಷಿತ್ ನಟಿಸಬೇಕಿತ್ತು.. ಆಮೇಲೆ ಏನಾಯ್ತು?
Rangitharanga
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 03, 2025 | 3:26 PM

Share

2015ರಲ್ಲಿ ಬಿಡುಗಡೆ ಕಂಡಿದ್ದ ‘ರಂಗಿ ತರಂಗ’ ಇಂದು (ಜುಲೈ 4) ರೀ-ರಿಲೀಸ್ ಆಗಿದೆ. ಈ ಚಿತ್ರವನ್ನು ಥಿಯೇಟರ್​ನಲ್ಲಿ ಮಿಸ್​​ ಮಾಡಿಕೊಂಡವರು ಥಿಯೇಟರ್​ನಲ್ಲಿಯೇ ನೋಡುವ ಅವಕಾವನ್ನು ಕಲ್ಪಿಸಲಾಗಿದೆ ಎಂಬುದು ವಿಶೇಷ. ‘ರಂಗಿ ತರಂಗ’ ಸಿನಿಮಾಗೆ ನಿರೂಪ್ ಭಂಡಾರಿ ಹೀರೋ ಆದರೆ, ಅವರ ಸಹೋದರ ಅನುಪ್ ಭಂಡಾರಿ ನಿರ್ದೇಶನ ಇತ್ತು. ಈ ಸಿನಿಮಾಗೆ ರಕ್ಷಿತ್ ಶೆಟ್ಟಿ ಹೀರೋ ಆಗಿ ನಟಿಸಬೇಕಿತ್ತು. ಈ ವಿಚಾರವನ್ನು ಅನುಪ್ ಹೇಳಿಕೊಂಡಿದ್ದಾರೆ.

ಅನುಪ್ ಭಂಡಾರಿ ಅವರು ನಿರ್ದೇಶನದಲ್ಲಿ ಮೊದಲ ಅನುಭವ. ಈ ಸಿನಿಮಾಗೆ ಅವರು ನಿರ್ದೇಶನ ಮತ್ತು ಸಹೋದರ ಎಂದಾಗ ಅಂಜಿಕೆ ಆಯಿತು. ಫಸ್ಟ್ ಡೇ ಫಸ್ಟ್ ಶೋ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅನುಪ್, ‘ಮೊದಲು ಈ ಸಿನಿಮಾಗೆ ನಿರೂಪ್ ಅವರೇ ಹೀರೋ ಆಗಿ ಆಯ್ಕೆ ಆದರು. ಆದರೆ, ನಾನು ನಿರ್ದೇಶನ ತಮ್ಮ ನಟನೆ ಎಂದಾಗ ಯಾರದರೂ ಸಿಗುತ್ತಾರಾ ಎನ್ನುವ ಪ್ರಶ್ನೆ ಮೂಡಿತು. ಆಗ ನಿರೂಪ್ ರಕ್ಷಿತ್ ಶೆಟ್ಟಿ ಬಗ್ಗೆ ಹೇಳಿದ’ ಎಂದಿದ್ದಾರೆ.

ಇದನ್ನೂ ಓದಿ:ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್ ಸಿನಿಮಾ

‘ಸಿಂಪಲ್ ಆಗಿ ಒಂದು ಲವ್ ಸ್ಟೋರಿ ಮಾಡಿದ್ದಾರೆ. ನಮ್ಮ ರೀತಿಯದ್ದೇ ಆಲೋಚನೆ ಅನಿಸುತ್ತದೆ ಎಂದು ರಕ್ಷಿತ್ ಬಗ್ಗೆ ನಿರೂಪ್ ಹೇಳಿದ. ಆಗ ನಾನು ಅವರನ್ನು ಸಂಪರ್ಕಿಸಿದೆ. ಆ ಸಂದರ್ಭದಲ್ಲಿ ಅವರು ಉಳಿದವರು ಕಂಡಂತೆ ಸಿನಿಮಾ ಮಾಡುತ್ತಿದ್ದರು. ಅದು ಮುಗಿದ ಬಳಿಕವೇ ಈ ಚಿತ್ರವನ್ನು ಅವರು ಮಾಡಬೇಕಿತ್ತು. ಅದಾದ ಮೇಲೂ ಭೇಟಿ ಮಾಡಿದ್ದೆ’ ಎಂದಿದ್ದಾರೆ ಅನುಪ್.

ಆದರೆ, ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಅವರು ಈ ಸಿನಿಮಾ ಮಾಡಲಿಲ್ಲ. ‘ಕಪಾಲಿ ಥಿಯೇಟರ್​ನಲ್ಲಿ ಜನರು ಸಿನಿಮಾ ನೋಡಿ ಚೆನ್ನಾಗಿಲ್ಲ ಎಂದು ಹೇಳುತ್ತಾ ಬರುತ್ತಿದ್ದರು. ಆದರೆ, ರಕ್ಷಿತ್ ಅವರು ಸಿನಿಮಾ ನೋಡಿ ಹೊಗಳಿದ್ದರು’ ಎಂದಿದ್ದಾರೆ ಅನುಪ್. ರಕ್ಷಿತ್ ಅವರ ಜಡ್ಜ್​ಮೆಂಟ್ ಸರಿ ಆಗಿತ್ತು. ಸಿನಿಮಾ ಸೂಪರ್ ಹಿಟ್ ಆಯಿತು. ಆ ಸಂದರ್ಭದಲ್ಲಿ ರಿಲೀಸ್ ಆದ ‘ಬಾಹುಬಲಿ’ ಚಿತ್ರಕ್ಕೆ ಈ ಚಿತ್ರವು ಸ್ಪರ್ಧೆ ನೀಡಿತು ಮತ್ತು ಗೆಲುವು ಕಂಡಿತು. ಈ ಚಿತ್ರ ಜುಲೈ 4ರಂದು ಮತ್ತೆ ಥಿಯೇಟರ್​ಗೆ ಬರುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:16 pm, Thu, 3 July 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?