‘ರಂಗಿ ತರಂಗದಲ್ಲಿ’ ಹೀರೋ ಆಗಿ ರಕ್ಷಿತ್ ನಟಿಸಬೇಕಿತ್ತು.. ಆಮೇಲೆ ಏನಾಯ್ತು?
Rangitharanga Movie: ಕನ್ನಡ ಚಿತ್ರರಂಗದ ಕಲ್ಟ್ ಕ್ಲಾಸಿಕ್ ಥ್ರಿಲ್ಲರ್ ಸಿನಿಮಾ ‘ರಂಗಿತರಂಗ’. ಈ ಸಿನಿಮಾ ಬಿಡುಗಡೆ ಆಗಿ 10 ವರ್ಷಗಳಾಯ್ತು. ಸಿನಿಮಾ ಅನ್ನು ಅನುಪ್ ಭಂಡಾರಿ ನಿರ್ದೇಶನ ಮಾಡಿದ್ದರು, ಅವರ ಸಹೋದರ ನಿರೂಪ್ ಭಂಡಾರಿ ನಾಯಕನಾಗಿ ನಟಿಸಿದ್ದರು. ಸಾಯಿಕುಮಾರ್ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದರು. ಅಸಲಿಗೆ ಈ ಸಿನಿಮಾನಲ್ಲಿ ರಕ್ಷಿತ್ ಶೆಟ್ಟಿ ನಾಯಕನಾಗಿ ನಟಿಸಬೇಕಿತ್ತಂತೆ. ಆದರೆ ನಟಿಸಲಿಲ್ಲ ಏಕೆ?

2015ರಲ್ಲಿ ಬಿಡುಗಡೆ ಕಂಡಿದ್ದ ‘ರಂಗಿ ತರಂಗ’ ಇಂದು (ಜುಲೈ 4) ರೀ-ರಿಲೀಸ್ ಆಗಿದೆ. ಈ ಚಿತ್ರವನ್ನು ಥಿಯೇಟರ್ನಲ್ಲಿ ಮಿಸ್ ಮಾಡಿಕೊಂಡವರು ಥಿಯೇಟರ್ನಲ್ಲಿಯೇ ನೋಡುವ ಅವಕಾವನ್ನು ಕಲ್ಪಿಸಲಾಗಿದೆ ಎಂಬುದು ವಿಶೇಷ. ‘ರಂಗಿ ತರಂಗ’ ಸಿನಿಮಾಗೆ ನಿರೂಪ್ ಭಂಡಾರಿ ಹೀರೋ ಆದರೆ, ಅವರ ಸಹೋದರ ಅನುಪ್ ಭಂಡಾರಿ ನಿರ್ದೇಶನ ಇತ್ತು. ಈ ಸಿನಿಮಾಗೆ ರಕ್ಷಿತ್ ಶೆಟ್ಟಿ ಹೀರೋ ಆಗಿ ನಟಿಸಬೇಕಿತ್ತು. ಈ ವಿಚಾರವನ್ನು ಅನುಪ್ ಹೇಳಿಕೊಂಡಿದ್ದಾರೆ.
ಅನುಪ್ ಭಂಡಾರಿ ಅವರು ನಿರ್ದೇಶನದಲ್ಲಿ ಮೊದಲ ಅನುಭವ. ಈ ಸಿನಿಮಾಗೆ ಅವರು ನಿರ್ದೇಶನ ಮತ್ತು ಸಹೋದರ ಎಂದಾಗ ಅಂಜಿಕೆ ಆಯಿತು. ಫಸ್ಟ್ ಡೇ ಫಸ್ಟ್ ಶೋ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅನುಪ್, ‘ಮೊದಲು ಈ ಸಿನಿಮಾಗೆ ನಿರೂಪ್ ಅವರೇ ಹೀರೋ ಆಗಿ ಆಯ್ಕೆ ಆದರು. ಆದರೆ, ನಾನು ನಿರ್ದೇಶನ ತಮ್ಮ ನಟನೆ ಎಂದಾಗ ಯಾರದರೂ ಸಿಗುತ್ತಾರಾ ಎನ್ನುವ ಪ್ರಶ್ನೆ ಮೂಡಿತು. ಆಗ ನಿರೂಪ್ ರಕ್ಷಿತ್ ಶೆಟ್ಟಿ ಬಗ್ಗೆ ಹೇಳಿದ’ ಎಂದಿದ್ದಾರೆ.
ಇದನ್ನೂ ಓದಿ:ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್ ಸಿನಿಮಾ
‘ಸಿಂಪಲ್ ಆಗಿ ಒಂದು ಲವ್ ಸ್ಟೋರಿ ಮಾಡಿದ್ದಾರೆ. ನಮ್ಮ ರೀತಿಯದ್ದೇ ಆಲೋಚನೆ ಅನಿಸುತ್ತದೆ ಎಂದು ರಕ್ಷಿತ್ ಬಗ್ಗೆ ನಿರೂಪ್ ಹೇಳಿದ. ಆಗ ನಾನು ಅವರನ್ನು ಸಂಪರ್ಕಿಸಿದೆ. ಆ ಸಂದರ್ಭದಲ್ಲಿ ಅವರು ಉಳಿದವರು ಕಂಡಂತೆ ಸಿನಿಮಾ ಮಾಡುತ್ತಿದ್ದರು. ಅದು ಮುಗಿದ ಬಳಿಕವೇ ಈ ಚಿತ್ರವನ್ನು ಅವರು ಮಾಡಬೇಕಿತ್ತು. ಅದಾದ ಮೇಲೂ ಭೇಟಿ ಮಾಡಿದ್ದೆ’ ಎಂದಿದ್ದಾರೆ ಅನುಪ್.
View this post on Instagram
ಆದರೆ, ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಅವರು ಈ ಸಿನಿಮಾ ಮಾಡಲಿಲ್ಲ. ‘ಕಪಾಲಿ ಥಿಯೇಟರ್ನಲ್ಲಿ ಜನರು ಸಿನಿಮಾ ನೋಡಿ ಚೆನ್ನಾಗಿಲ್ಲ ಎಂದು ಹೇಳುತ್ತಾ ಬರುತ್ತಿದ್ದರು. ಆದರೆ, ರಕ್ಷಿತ್ ಅವರು ಸಿನಿಮಾ ನೋಡಿ ಹೊಗಳಿದ್ದರು’ ಎಂದಿದ್ದಾರೆ ಅನುಪ್. ರಕ್ಷಿತ್ ಅವರ ಜಡ್ಜ್ಮೆಂಟ್ ಸರಿ ಆಗಿತ್ತು. ಸಿನಿಮಾ ಸೂಪರ್ ಹಿಟ್ ಆಯಿತು. ಆ ಸಂದರ್ಭದಲ್ಲಿ ರಿಲೀಸ್ ಆದ ‘ಬಾಹುಬಲಿ’ ಚಿತ್ರಕ್ಕೆ ಈ ಚಿತ್ರವು ಸ್ಪರ್ಧೆ ನೀಡಿತು ಮತ್ತು ಗೆಲುವು ಕಂಡಿತು. ಈ ಚಿತ್ರ ಜುಲೈ 4ರಂದು ಮತ್ತೆ ಥಿಯೇಟರ್ಗೆ ಬರುತ್ತಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:16 pm, Thu, 3 July 25



