AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಒಂದಾದ ರಕ್ಷಿತ್​ ಶೆಟ್ಟಿ-ಅನಂತ್​ ನಾಗ್​; ಈ ಬಾರಿ ನಡೆಯಲಿದೆ ‘ಆಬ್ರಕಡಾಬ್ರ’

Abracadabra Movie: ರಕ್ಷಿತ್​ ಶೆಟ್ಟಿ ನಿರ್ಮಾಣ ಮಾಡುವ ಚಿತ್ರಗಳು ಸಾಮಾನ್ಯ ಸಿನಿಮಾಗಿಂತ ಭಿನ್ನವಾಗಿರುತ್ತದೆ ಎಂಬುದು ಅಭಿಮಾನಿಗಳಿಗೆ ಮನದಟ್ಟಾಗಿದೆ. ಹೀಗಾಗಿ, ರಕ್ಷಿತ್​ ಶೆಟ್ಟಿಗೆ ದೊಡ್ಡ ಅಭಿಮಾನಿ ಬಳಗವೇ ಹುಟ್ಟಿಕೊಂಡಿದೆ.

ಮತ್ತೆ ಒಂದಾದ ರಕ್ಷಿತ್​ ಶೆಟ್ಟಿ-ಅನಂತ್​ ನಾಗ್​; ಈ ಬಾರಿ ನಡೆಯಲಿದೆ ‘ಆಬ್ರಕಡಾಬ್ರ’
ಮತ್ತೆ ಒಂದಾದ ರಕ್ಷಿತ್​ ಶೆಟ್ಟಿ-ಅನಂತ್​ ನಾಗ್​; ಈ ಬಾರಿ ನಡೆಯಲಿದೆ ‘ಆಬ್ರಕಡಾಬ್ರ’
TV9 Web
| Edited By: |

Updated on: Aug 24, 2021 | 2:55 PM

Share

‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಸಿನಿಮಾದಲ್ಲಿ ಅನಂತ್​ ನಾಗ್ ಮತ್ತು ರಕ್ಷಿತ್​ ಶೆಟ್ಟಿ​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಇಬ್ಬರೂ ಮತ್ತೆ ಒಂದಾಗಿದ್ದಾರೆ. ಅಂದರೆ, ಅನಂತ್​ನಾಗ್​ ಮುಂದಿನ ಚಿತ್ರಕ್ಕೆ ರಕ್ಷಿತ್​ ಶೆಟ್ಟಿ ಬಂಡವಾಳ ಹೂಡುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಖುಷಿಯಾಗಿದ್ದಾರೆ.

ರಕ್ಷಿತ್​ ಶೆಟ್ಟಿ ನಿರ್ಮಾಣ ಮಾಡುವ ಚಿತ್ರಗಳು ಸಾಮಾನ್ಯ ಸಿನಿಮಾಗಿಂತ ಭಿನ್ನವಾಗಿರುತ್ತದೆ ಎಂಬುದು ಅಭಿಮಾನಿಗಳಿಗೆ ಮನದಟ್ಟಾಗಿದೆ. ಹೀಗಾಗಿ, ರಕ್ಷಿತ್​ ಶೆಟ್ಟಿಗೆ ದೊಡ್ಡ ಅಭಿಮಾನಿ ಬಳಗವೇ ಹುಟ್ಟಿಕೊಂಡಿದೆ. ನಾಯಕನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಅವರು ಹೆಸರು ಮಾಡಿದ್ದಾರೆ. ಈಗ ಅವರು ‘ಆಬ್ರಕಡಾಬ್ರ’ ಹೆಸರಿನ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಈ ಬಗ್ಗೆ ಬರೆದುಕೊಂಡಿರುವ ರಕ್ಷಿತ್​, ‘ನಮ್ಮ ಪರಂವಃ ಸ್ಟುಡಿಯೋಸ್ ನಿರ್ಮಾಣದ ಮುಂದಿನ ಚಿತ್ರ ಆಬ್ರಕಡಾಬ್ರ. ಎಂದಿನಂತೆ ನಿಮ್ಮೆಲ್ಲರ ಪ್ರೀತಿಯ ಆಶೀರ್ವಾದ ನಮ್ಮ ಮೇಲೆ ಹಾಗೂ ಕನ್ನಡ ಚಿತ್ರಗಳ ಮೇಲೆ ಸದಾ ಹೀಗೆ ಇರಲಿ’ ಎಂದು ಕೋರಿದ್ದಾರೆ.

ಈ ಸಿನಿಮಾದಲ್ಲಿ ಅನಂತ್​ ನಾಗ್​, ಸಿರಿ ರವಿಕುಮಾರ್​ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ. ಶಿಶಿರ್​ ರಾಜ್​ಮೋಹನ್​ ಅವರು ಈ ಸಿನಿಮಾದ ಕಥೆ ಬರೆದು, ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಶೀಘ್ರವೇ ಈ ಸಿನಿಮಾದ ಶೂಟಿಂಗ್​ ಆರಂಭಗೊಳ್ಳಲಿದೆ. ರಕ್ಷಿತ್ ಹಂಚಿಕೊಂಡಿರುವ ಪೋಸ್ಟರ್​ ಎಲ್ಲರ ಗಮನ ಸೆಳೆಯುತ್ತಿದೆ.

‘777 ಚಾರ್ಲಿ’ ಸಿನಿಮಾದಲ್ಲಿ ರಕ್ಷಿತ್​ ನಟಿಸುತ್ತಿದ್ದಾರೆ. ಈ ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಒಂದು ಶ್ವಾನ ಕೂಡ ಸಿನಿಮಾದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಚಿತ್ರದ ಟೀಸರ್​ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿತ್ತು. ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾದಲ್ಲೂ ರಕ್ಷಿತ್​ ನಟಿಸುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್​ ನಿರ್ಮಾಣದ ‘ರಿಚರ್ಡ್​ ಆ್ಯಂಟೋನಿ’ ಸಿನಿಮಾದಲ್ಲೂ ರಕ್ಷಿತ್​ ನಟಿಸುತ್ತಿದ್ದಾರೆ. ‘ಸಕುಟುಂಬ ಸಮೇತ’ ಮೊದಲಾದ ಸಿನಿಮಾಗಳನ್ನು ಅವರು ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: Richard Anthony Teaser: ಯೂಟ್ಯೂಬ್​ನಲ್ಲಿ ಧೂಳೆಬ್ಬಿಸಿದ ರಿಚರ್ಡ್ ಆಂಟನಿ; ಮತ್ತೊಂದು ದಾಖಲೆ ಬರೆದ ರಕ್ಷಿತ್ ಶೆಟ್ಟಿ

 ‘ಹಿಂದೆ ನೋಡೋಕೆ ಇಷ್ಟವಿಲ್ಲ, ನಾನು ಗೋರಿ ಕಟ್ಕೊಂಡೇ ಮುಂದೆ ಹೋಗೋದು’; ಎಲ್ಲಾ ವಿಚಾರಕ್ಕೆ ಸ್ಪಷ್ಟನೆ ನೀಡಿದ ರಕ್ಷಿತ್​

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?