AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakshit Shetty: ಅಮೆರಿಕದಲ್ಲಿ ಸಿದ್ಧವಾಗಲಿದೆ ‘ರಿಚರ್ಡ್​ ಆಂಟನಿ’ ಸ್ಕ್ರಿಪ್ಟ್​; ಕಾರಣ ತಿಳಿಸಿದ ರಕ್ಷಿತ್ ಶೆಟ್ಟಿ

Richard Anthony Kannada Movie: ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಬಿಡುಗಡೆ ಆದ ನಂತರ ‘ರಿಚರ್ಡ್​ ಆಂಟನಿ’ ಸಿನಿಮಾದ ಶೂಟಿಂಗ್​ ಆರಂಭ ಆಗಲಿದೆ. ಆ ಬಗ್ಗೆ ರಕ್ಷಿತ್​ ಶೆಟ್ಟಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಮದನ್​ ಕುಮಾರ್​
|

Updated on: May 10, 2023 | 1:07 PM

Share

ನಟ, ನಿರ್ದೇಶಕ ರಕ್ಷಿತ್​ ಶೆಟ್ಟಿ (Rakshit Shetty) ಅವರು ಪ್ರತಿ ಬಾರಿಯೂ ವಿಶೇಷವಾದ ಸ್ಕ್ರಿಪ್ಟ್​ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ‘777 ಚಾರ್ಲಿ’ ಸಿನಿಮಾದಿಂದ ದೊಡ್ಡ ಗೆಲುವು ಪಡೆದಿರುವ ಅವರು ಈಗ ಮುಂದಿನ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ. ಆ ಚಿತ್ರಕ್ಕೆ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಆದರ ಜೊತೆಗೆ ‘ರಿಚರ್ಡ್​ ಆಂಟನಿ’ ಸಿನಿಮಾದ ಬಗ್ಗೆಯೂ ರಕ್ಷಿತ್​ ಶೆಟ್ಟಿ ಗಮನ ಹರಿಸಿದ್ದಾರೆ. ಈ ಸಿನಿಮಾ ಅನೌನ್ಸ್​ ಆಗಿ ಬಹಳ ಸಮಯ ಕಳೆದಿದೆ. ಶೀರ್ಷಿಕೆ ಮೂಲಕ ಕೌತುಕ ಮೂಡಿಸಿರುವ ಈ ಚಿತ್ರದ ಬಗ್ಗೆ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ‘ರಿಚರ್ಡ್​ ಆಂಟನಿ’ (Richard Anthony) ಬಗ್ಗೆ ರಕ್ಷಿತ್​ ಶೆಟ್ಟಿ ಅವರು ಈಗ ಒಂದಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ಬುಧವಾರ (ಮೇ 10) ಉಡುಪಿಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ‘ರಿಚರ್ಡ್​ ಆಂಟನಿ’ ಚಿತ್ರದ ಸ್ಕ್ರಿಪ್ಟ್​ ಕೆಲಸಗಳ ಬಗ್ಗೆ ವಿವರ ನೀಡಿದರು.

‘ಇವತ್ತು ರಾತ್ರಿ ನಾನು ಅಮೆರಿಕಕ್ಕೆ ತೆರಳುತ್ತೇನೆ. ವೋಟ್​ ಮಾಡಬೇಕು ಎಂಬ ಕಾರಣದಿಂದ ಇಷ್ಟು ದಿನಗಳವರೆಗೆ ಕಾದಿದ್ದೆ. ಇಲ್ಲದಿದ್ದರೆ ಈಗಾಗಲೇ ಅಮೆರಿಕಕ್ಕೆ ಹೋಗಿರುತ್ತಿದ್ದೆ. ‘ರಿಚರ್ಡ್​ ಆಂಟನಿ’ ಚಿತ್ರದ ಫೈನಲ್​ ಡ್ರಾಫ್ಟ್​ ಬರೆಯಬೇಕಿದೆ. ಇಲ್ಲಿದ್ದರೆ ಸ್ಕ್ರಿಪ್ಟ್​ ಬರೆಯುವಾಗ ಅವರಿವರು ಫೋನ್​ ಮಾಡುತ್ತಾರೆ. ಅದರಿಂದ ಡಿಸ್ಟರ್ಬ್​ ಆಗತ್ತೆ. ಅಮೆರಿಕಕ್ಕೆ ಹೋದರೆ ಇಲ್ಲಿ ರಾತ್ರಿ ಆದಾಗ ಅಲ್ಲಿ ಬೆಳಗ್ಗೆ ಆಗಿರುತ್ತದೆ. ಯಾರೂ ಡಿಸ್ಟರ್ಬ್​ ಮಾಡಲ್ಲ. ಹಾಗಾಗಿ ಅಲ್ಲಿಗೆ ಹೋಗುತ್ತಿದ್ದೇನೆ’ ಎಂದು ರಕ್ಷಿತ್​ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: ‘ನಮ್ಮನೆ ಯುವರಾಣಿ’ ಮೀರಾ ಹೊಸ ಚಿತ್ರದ ಬಗ್ಗೆ ರಕ್ಷಿತ್​ ಶೆಟ್ಟಿ ನೀಡಿದ್ರು ಬ್ರೇಕಿಂಗ್​​ ನ್ಯೂಸ್​; ಇದಕ್ಕೆ ವಿಹಾನ್​ ಹೀರೋ

ರಕ್ಷಿತ್​ ಶೆಟ್ಟಿಗೂ ಬಂದಿತ್ತು ಕ್ಯಾಂಪೇನ್​ಗೆ ಆಹ್ವಾನ:

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕನ್ನಡ ಚಿತ್ರರಂಗದ ಅನೇಕ ಸ್ಟಾರ್​ ನಟ-ನಟಿಯರು ಬೇರೆ ಬೇರೆ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದಾರೆ. ಆದರೆ ರಕ್ಷಿತ್​ ಶೆಟ್ಟಿ, ರಿಷಬ್​ ಶೆಟ್ಟಿ ಸೇರಿದಂತೆ ಅನೇಕರು ಕ್ಯಾಂಪೇನ್​ನಿಂದ ದೂರ ಉಳಿದುಕೊಂಡರು. ಆ ಬಗ್ಗೆ ರಕ್ಷಿತ್​ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ‘ಪ್ರಚಾರಕ್ಕೆ ಬರುವಂತೆ ಅನೇಕರು ಕೇಳಿದ್ದರು. ಆದರೆ ನಾನು ರಾಜಕೀಯದ ಕ್ಯಾಂಪೇನ್​ಗೆ ಎಂದಿಗೂ ಹೋಗುವುದಿಲ್ಲ’ ಎಂದು ರಕ್ಷಿತ್​ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: Rakshit Shetty: 150 ಕೋಟಿ ರೂ. ಗಳಿಸಿದ ‘777 ಚಾರ್ಲಿ’; ಪ್ರಾಣಿಗಳ ರಕ್ಷಣೆಗೆ ಶೇ.5ರಷ್ಟು ಹಣ ದೇಣಿಗೆ ನೀಡಿದ ರಕ್ಷಿತ್​ ಶೆಟ್ಟಿ

ದೇಶದಲ್ಲಿ ಚುನಾವಣೆಯ ಕಾವು ಜೋರಾಗಿರುವ ಬಗ್ಗೆ ಕೇಳಿದ್ದಕ್ಕೆ ರಕ್ಷಿತ್​ ಶೆಟ್ಟಿ ಅವರು ನಗುತ್ತ ಉತ್ತರ ನೀಡಿದ್ದಾರೆ. ‘ನಾನು ಇನ್ನೂ ಜಾಸ್ತಿ ಮಾತನಾಡಿದರೆ ಹೆಸರುಗಳೆಲ್ಲ ಹೊರಗೆ ಬರುತ್ತವೆ’ ಎಂದು ಅವರು ನಗು ಚೆಲ್ಲಿದ್ದಾರೆ. ಜುಲೈ ಅಂತ್ಯದಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಬಿಡುಗಡೆ ಆಗಲಿದೆ ಎಂದು ರಕ್ಷಿತ್​ ಶೆಟ್ಟಿ ಹೇಳಿದ್ದಾರೆ. ಆ ಸಿನಿಮಾ ತೆರೆಕಂಡ ಬಳಿಕ ‘ರಿಚರ್ಡ್​ ಆಂಟನಿ’ ಶೂಟಿಂಗ್​ ಆರಂಭ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ