AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಉತ್ತಂಗಕ್ಕೇರು: ರಶ್ಮಿಕಾಗೆ ಮನಃಪೂರ್ವಕವಾಗಿ ಹಾರೈಸಿದ ರಕ್ಷಿತ್​ ಶೆಟ್ಟಿ

ರಶ್ಮಿಕಾ ಮಂದಣ್ಣಗೆ ಹಿಟ್​ ತಂದುಕೊಟ್ಟ ಸಿನಿಮಾ ಕಿರಿಕ್​ ಪಾರ್ಟಿ. ಇದು ಅವರ ಮೊದಲ ಚಿತ್ರ ಕೂಡ ಹೌದು. ಈ ಸಿನಿಮಾ ನಂತರದಲ್ಲಿ ರಶ್ಮಿಕಾ ಹಾಗೂ ನಟ ರಕ್ಷಿತ್​ ಶೆಟ್ಟಿ ಪರಸ್ಪರ ಪ್ರೀತಿಸಿದ್ದರು. ಕುಟುಂಬದ ಸಮ್ಮುಖದಲ್ಲಿ ಎಂಗೇಜ್​ಮೆಂಟ್​ ಕೂಡ ಆಗಿತ್ತು. ನಂತರ ಇಬ್ಬರ ಸಂಬಂಧ ಮುರಿದು ಬಿದ್ದಿತ್ತು. 

ಇನ್ನೂ ಉತ್ತಂಗಕ್ಕೇರು: ರಶ್ಮಿಕಾಗೆ ಮನಃಪೂರ್ವಕವಾಗಿ ಹಾರೈಸಿದ ರಕ್ಷಿತ್​ ಶೆಟ್ಟಿ
ರಕ್ಷಿತ್​-ರಶ್ಮಿಕಾ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 25, 2020 | 8:27 PM

Share

‘ರಶ್ಮಿಕಾ ನೀನು ಇನ್ನೂ ಬೆಳೆಯಬೇಕು. ನಿನ್ನ ಕನಸುಗಳೆಲ್ಲ ನಿಜವಾಗಬೇಕು’- ಹೀಗೆಂದು ರಕ್ಷಿತ್​ ಶೆಟ್ಟಿ ನಟಿ ರಶ್ಮಿಕಾಗೆ ಹಾರೈಸಿದ್ದಾರೆ! ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.

ರಶ್ಮಿಕಾ ಮಂದಣ್ಣಗೆ ಹಿಟ್​ ತಂದುಕೊಟ್ಟ ಸಿನಿಮಾ ಕಿರಿಕ್​ ಪಾರ್ಟಿ. ಇದು ಅವರ ಮೊದಲ ಚಿತ್ರ ಕೂಡ ಹೌದು. ಈ ಸಿನಿಮಾ ನಂತರದಲ್ಲಿ ರಶ್ಮಿಕಾ ಹಾಗೂ ನಟ ರಕ್ಷಿತ್​ ಶೆಟ್ಟಿ ಪರಸ್ಪರ ಪ್ರೀತಿಸಿದ್ದರು. ಕುಟುಂಬದ ಸಮ್ಮುಖದಲ್ಲಿ ಎಂಗೇಜ್​ಮೆಂಟ್​ ಕೂಡ ಆಗಿತ್ತು. ನಂತರ ಇಬ್ಬರ ಸಂಬಂಧ ಮುರಿದು ಬಿದ್ದಿತ್ತು.

ಇಬ್ಬರೂ ಬೇರೆ ಆದ ನಂತರ ಸಾಮಾಜಿಕ ಜಾಲತಾಣದಲ್ಲಿ ಒಬ್ಬರನ್ನೊಬ್ಬರು ಅನ್​ ಫಾಲೋ ಮಾಡಿಕೊಂಡಿದ್ದರು. ಇವೆಲ್ಲ ಕಳೆದು ಸುಮಾರು ಎರಡು ವರ್ಷಗಳೇ ಆಗುತ್ತಾ ಬಂದಿವೆ. ಆದರೆ, ಈವರೆಗೆ ಇಬ್ಬರೂ ಟ್ವಿಟರ್​ನಲ್ಲಿ ಒಬ್ಬರನ್ನೊಬ್ಬರು ಟ್ಯಾಗ್​ ಮಾಡಿಕೊಂಡಿರಲಿಲ್ಲ.

ಕಿರಿಕ್​ ಪಾರ್ಟಿ ಸಿನಿಮಾದ ಬೆಳಗೆದ್ದು ಹಾಡು ಬರೋಬ್ಬರಿ 10 ಕೋಟಿ ವೀಕ್ಷಣೆ ಕಂಡಿತ್ತು. ಇದೇ ಖುಷಿಯಲ್ಲಿ ಟ್ವೀಟ್​ ಮಾಡಿದ್ದ ರಶ್ಮಿಕಾ ಮಂದಣ್ಣ, ರಕ್ಷಿತ್​ ಶೆಟ್ಟಿಯನ್ನೂ ಟ್ಯಾಗ್​ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದರು.

ಈಗ ಈ ಟ್ವೀಟ್​ ಅನ್ನು ರೀಟ್ವೀಟ್​ ಮಾಡಿರುವ ರಕ್ಷಿತ್, ಇನ್ನೂ ಬೆಳಿ. ನಿನ್ನ ಎಲ್ಲ ಕನಸುಗಳು ನನಸಾಗಲಿ ಎಂದಿದ್ದಾರೆ.

ಯೂಟ್ಯೂಬ್​ನಲ್ಲಿ 10 ಕೋಟಿ ವ್ಯೂಸ್​ ಗಳಿಸಿತು ‘ಬೆಳಗೆದ್ದು’ ಸಾಂಗ್​.. ರಕ್ಷಿತ್​ ಶೆಟ್ಟಿಯನ್ನು ನೆನಪಿಸಿಕೊಂಡ ರಶ್ಮಿಕಾ ಮಂದಣ್ಣ

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್