AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಪಿರೈಟ್​ ಕೇಸ್​; ಕೋರ್ಟ್​ನಲ್ಲೇ ಇತ್ಯರ್ಥ ಮಾಡಿಕೊಳ್ಳಲು ರಕ್ಷಿತ್​ ಶೆಟ್ಟಿ ನಿರ್ಧಾರ

‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ 2 ಹಾಡುಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಇದೆ. ಇದಕ್ಕೆ ಸಂಬಂಧಿಸಿದಂತೆ ಎಫ್​ಐಆರ್​ ದಾಖಲಾಗಿದೆ. ಹಾಗಾಗಿ ರಕ್ಷಿತ್​ ಶೆಟ್ಟಿ ಅವರ ಒಡೆತನದ ಪರಂವಾ ಸ್ಟುಡಿಯೋಸ್​ ಸಂಸ್ಥೆಯು ಪ್ರತಿಕ್ರಿಯೆ ನೀಡಿದೆ. 2 ಹಾಡುಗಳ ಬಳಕೆ ಆಗಿರುವುದು ಎಲ್ಲಿ ಎಂಬುದನ್ನು ತಿಳಿಸಲಾಗಿದೆ. ನ್ಯಾಯಾಲಯದ ಮೆಟ್ಟಿಲು ಏರಲು ‘ಪರಂವಾ ಸ್ಟುಡಿಯೋಸ್​’ ತೀರ್ಮಾನಿಸಿದೆ.

ಕಾಪಿರೈಟ್​ ಕೇಸ್​; ಕೋರ್ಟ್​ನಲ್ಲೇ ಇತ್ಯರ್ಥ ಮಾಡಿಕೊಳ್ಳಲು ರಕ್ಷಿತ್​ ಶೆಟ್ಟಿ ನಿರ್ಧಾರ
ರಕ್ಷಿತ್​ ಶೆಟ್ಟಿ
ಮದನ್​ ಕುಮಾರ್​
|

Updated on:Jul 15, 2024 | 8:47 PM

Share

ನಟ ರಕ್ಷಿತ್​ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಸಕ್ರಿಯರಾಗಿದ್ದಾರೆ. ಅವರು ನಿರ್ಮಾಣ ಮಾಡುವ ಸಿನಿಮಾಗಳಿಗೆ ಈ ಮೊದಲು ಕೂಡ ವಿಘ್ನಗಳು ಉಂಟಾಗಿದ್ದವು. ರಕ್ಷಿತ್​ ಶೆಟ್ಟಿ ಒಡೆತನದ ‘ಪರಂವಾ ಸ್ಟುಡಿಯೋಸ್’ ನಿರ್ಮಾಣ ಮಾಡಿದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡನ್ನು ಅನುಮತಿ ಇಲ್ಲದೇ ಬಳಸಲಾಗಿದೆ ಎಂಬ ಕಾರಣಕ್ಕೆ ಈಗ ‘ಎಂಆರ್​ಟಿ ಮ್ಯೂಸಿಕ್​’ ಸಂಸ್ಥೆಯು ಕೇಸ್​ ಹಾಕಿದೆ. ಇದಕ್ಕೆ ಸಂಬಂಧಿಸಿದಂತೆ ‘ಪರಂವಾ ಸ್ಟುಡಿಯೋಸ್​’ ಕಡೆಯಿಂದ ಸ್ಪಷ್ಟನೆ ನೀಡಲಾಗಿದೆ. ಅಲ್ಲದೇ, ಈ ವ್ಯಾಜ್ಯವನ್ನು ನ್ಯಾಯಾಲಯದಲ್ಲೇ ಇತ್ಯರ್ಥ ಮಾಡಿಕೊಳ್ಳಲು ರಕ್ಷಿತ್​ ಶೆಟ್ಟಿ ನಿರ್ಧರಿಸಿದ್ದಾರೆ.

‘ಪರಂವಾ ಸ್ಟುಡಿಯೋಸ್​’ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ವಿವರವಾಗಿ ಸ್ಪಷ್ಟನೆ ಪ್ರಕಟಿಸಲಾಗಿದೆ. ಆ ಪತ್ರ ಹೀಗಿದೆ.. ‘ಪ್ರೀತಿಯ ಪ್ರೇಕ್ಷಕರೇ ಹಾಗೂ ಮಾಧ್ಯಮ ಮಿತ್ರರೇ, ನಾವು ಈ ಬಹಿರಂಗ ಪತ್ರವನ್ನು ಎಂಆರ್​ಟಿ ಮ್ಯೂಸಿಕ್ ಸಂಸ್ಥೆ ನಮ್ಮ ಮೇಲೆ 2 ಹಾಡಿನ ಹಕ್ಕು ಉಲ್ಲಂಘನೆಯ ಆರೋಪ ಮಾಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ಬರೆದಿರುತ್ತೇವೆ. ಮೊದಲಿಗೆ ಸ್ಪಷ್ಟಿಕರಿಸಲು, ಚಿತ್ರದಲ್ಲಿ ಬಳಕೆಯಾಗಿರುವ ತುಣುಕುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಕಾರಣ, ಚಿತ್ರದಲ್ಲಿ ಈ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿದೆ ಎಂದು, ಹಾಗು ಬಳಕೆಯ ರೂಪವನ್ನು ನಿಮ್ಮ ಗಮನಕ್ಕೆ ತರಲು’ ಎಂದು ಪತ್ರ ಆರಂಭಿಸಲಾಗಿದೆ.

‘ಬಳಕೆಯ ವಿವರ: 1. ತರಗತಿಯೊಂದಲ್ಲಿ ಶಾಲಾಬಾಲಕಿ ‘ಒಮ್ಮೆ ನಿನ್ನನ್ನು..’ ಹಾಡನ್ನು ಸಹಪಾಠಿಗಳ ಮುಂದೆ ಹಾಡುವುದು. 2. ಮನೆಯ ಟಿವಿಯಲ್ಲಿ ‘ನ್ಯಾಯ ಎಲ್ಲಿದೆ..’ ಹಾಡಿನ ಪ್ರಸಾರಣೆ. ಈ ಮುಂಚೆ, ಅಂದರೆ, ಬ್ಯಾಚುಲರ್ ಪಾರ್ಟಿ ಸಿನಿಮಾ ತೆರೆಕಾಣುವುದಕ್ಕೂ ಮುನ್ನವೇ ನಾವು ‘ಎಂಆರ್​ಟಿ’ ಸಂಸ್ಥೆಯ ಮುಖ್ಯಸ್ಥರೊಂದಿಗೆ ಈ ಕುರಿತು ಮಾತುಕತೆ ನಡೆಸಿದ್ದೆವು. ಆದರೆ ಅವರು ನಮ್ಮ ಮುಂದೆ ಇಟ್ಟ ಶುಲ್ಕ ನಮ್ಮ ಬಜೆಟ್​ಅನ್ನು ಮೀರಿತ್ತು. ಎಂಆರ್​ಟಿ ಸಂಸ್ಥೆ ಶುಲ್ಕದ ಕುರಿತಾಗಿ ಮರುಮಾತುಕತೆಗೆ ತಯಾರಿರರಿಲ್ಲ. ಈಗ, ನಮ್ಮ ಮೇಲೆ ಹಾಡಿನ ಉಲ್ಲಂಘನೆಯ ಆರೋಪ ಬಂದಿದ್ದು, ಎಫ್​ಐಆರ್ ದಾಖಲಾಗಿದೆ’ ಎಂದು ಬರೆಯಲಾಗಿದೆ.

‘ಇದು ನಿಜವಾಗಿಯು ಹಾಡಿನ ಹಕ್ಕು ಉಲ್ಲಂಘನೆಯೆ? ಹೌದಾಗಿದ್ದೇ ಆದಲ್ಲಿ, ನಾವು ತೆರಬೇಕಾದ ದಂಡವಾದರೂ ಎಷ್ಟು? ಏಕೆಂದರೆ ಎಂಆರ್​ಟಿ ಸಂಸ್ಥೆಯಿಂದ ಕೇಳಲ್ಪಟ್ಟದ್ದು ಬೃಹತ್‌ ಮೊತ್ತ ಎಂದರೆ ತಪ್ಪಾಗಲಾರದು. ಅಲ್ಲವಾದರೆ, ಈ ತರಹದ ಆರೋಪವನ್ನು ಈಗಾಗಲಿ ಅಥವಾ ಮುಂಬರುವ ದಿನಗಳಲ್ಲಾಗಲಿ ಹೇಗೆ ಸಹಿಸಿಕೊಳ್ಳುವುದು? ಇದೊಂದು ಯಕ್ಷ ಪ್ರಶ್ನೆ. ಇದಕ್ಕೆ ಉತ್ತರ ನಾವು ಹುಡುಕಬಯಸುತ್ತೇವೆ’ ಎಂದಿದೆ ‘ಪರಂವಾ ಸ್ಟುಡಿಯೋಸ್​’.

ಇದನ್ನೂ ಓದಿ: ಆರು ಮರಿಗಳಿಗೆ ಜನ್ಮ ನೀಡಿದ 777 ಚಾರ್ಲಿ; ಲೈವ್​ ಬಂದು ಸಿಹಿ ಸುದ್ದಿ ನೀಡಿದ ರಕ್ಷಿತ್​ ಶೆಟ್ಟಿ

‘ಹಾಗಾಗಿ, ನ್ಯಾಯ ಮತ್ತು ಪ್ರಭುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯಸ್ಥಾನದಲ್ಲಿಯೇ ನಿರ್ಧಾರವಾಗಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ.ಇದರಿಂದ ಇನ್ನು ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿನಿಮಾಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು ನಮ್ಮ ಈ ಪ್ರಾಮಾಣಿಕ ಪ್ರಯತ್ನ. ನಿಮ್ಮ ಬೆಂಬಲ ಮತ್ತು ಪ್ರೀತಿಯನ್ನು ಆಶಿಸುವ, ಪರಂವಾ ಸ್ಟಡಿಯೋಸ್’ ಎಂದು ಬಹಿರಂಗ ಪತ್ರ ಹಂಚಿಕೊಳ್ಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:37 pm, Mon, 15 July 24

Follow Us
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್