AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದರ್ಶನ್ ಕೂಡ ಫೋನ್ ಮಾಡಿ ರಾಕೇಶ್ ಬಗ್ಗೆ ಕೇಳಿದ್ರು’: ರಕ್ಷಿತಾ ಪ್ರೇಮ್ ಭಾವುಕ ಮಾತು

ಹೃದಯಾಘಾತದಿಂದ ಹಾಸ್ಯ ನಟ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ. ಅಂತಿಮ ದರ್ಶನ ಪಡೆದ ರಕ್ಷಿತಾ ಪ್ರೇಮ್ ಅವರು ಕಣ್ಣೀರು ಹಾಕಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡುವಾಗ ರಾಕೇಶ್ ಜೊತೆಗಿನ ಒಡನಾಟವನ್ನು ಅವರು ಮೆಲುಕು ಹಾಕಿದರು. ದರ್ಶನ್ ಕೂಡ ಕರೆ ಮಾಡಿ ರಾಕೇಶ್ ಬಗ್ಗೆ ವಿಚಾರಿಸಿದರು ಎಂದು ರಕ್ಷಿತಾ ಪ್ರೇಮ್ ಹೇಳಿದ್ದಾರೆ.

‘ದರ್ಶನ್ ಕೂಡ ಫೋನ್ ಮಾಡಿ ರಾಕೇಶ್ ಬಗ್ಗೆ ಕೇಳಿದ್ರು’: ರಕ್ಷಿತಾ ಪ್ರೇಮ್ ಭಾವುಕ ಮಾತು
Rakshita Prem
ಮದನ್​ ಕುಮಾರ್​
|

Updated on: May 12, 2025 | 7:09 PM

Share

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಹಾಸ್ಯ ನಟ ರಾಕೇಶ್ ಪೂಜಾರಿ (Rakesh Poojary) ಅವರು ನಿಧನರಾಗಿದ್ದು ಇಡೀ ಚಿತ್ರರಂಗಕ್ಕೆ ನೋವು ತಂದಿದೆ. ಅವರ ಪ್ರತಿಭೆ ಮತ್ತು ವ್ಯಕ್ತಿತ್ವದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಮಲ್ಪೆ ಸಮೀಪದ ಹೂಡೆಗೆ ಆಗಮಿಸಿದ ಅನೇಕ ಸೆಲೆಬ್ರಿಟಿಗಳು ಅಂತಿಮ ದರ್ಶನ ಪಡೆದಿದ್ದಾರೆ. ನಟಿ ರಕ್ಷಿತಾ ಪ್ರೇಮ್ ಕೂಡ ಬಂದು ಕಣ್ಣೀರು ಸುರಿಸಿದ್ದಾರೆ. ಈ ವೇಳೆ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ರಾಕೇಶ್ ಪೂಜಾರಿ ಜೊತೆಗಿನ ನೆನಪುಗಳನ್ನು ಅವರು ಮೆಲುಕು ಹಾಕಿದರು. ರಕ್ಷಿತಾ ಪ್ರೇಮ್ (Rakshita Prem) ಮೇಲೆ ರಾಕೇಶ್ ಪೂಜಾರಿ ಅವರು ಅಪಾರ ಅಭಿಮಾನ ಹೊಂದಿದ್ದರು. ಅದನ್ನೆಲ್ಲ ನೆನಪಿಸಿಕೊಂಡು ರಕ್ಷಿತಾ ಅವರು ಕಣ್ಣೀರು ಹಾಕಿದ್ದಾರೆ.

‘ತುಂಬ ವರ್ಷಗಳಿಂದ ನನಗೆ ರಾಕೇಶ್ ಪರಿಚಯ. ಅವನು ಕಾಮಿಡಿ ಕಿಲಾಡಿಗಳು ಗೆದ್ದ. ಅಷ್ಟೇ ಪ್ರತಿಭಾವಂತ ಕೂಡ. ತೆರೆ ಹಿಂದೆ ಅಷ್ಟೇ ಒಳ್ಳೆಯ ಹುಡುಗ ಕೂಡ ಹೌದು. ನಮ್ಮ ಕಾಮಿಡಿ ಕಿಲಾಡಿಗಳು ತಂಡ ಒಂದು ಕುಟುಂಬದ ರೀತಿ ಇರುತ್ತಿತ್ತು. ಇಷ್ಟು ಬೇಗ ಅವನು ಹೋಗಬಾರದಿತ್ತು. ಅವನಿಗೆ ತುಂಬ ಸಣ್ಣ ವಯಸ್ಸು. ಅವರ ತಂದೆ ಕೂಡ ಎರಡು ವರ್ಷಗಳ ಹಿಂದೆ ತೀರಿ ಹೋಗಿದ್ದರು’ ಎಂದಿದ್ದಾರೆ ರಕ್ಷಿತಾ ಪ್ರೇಮ್.

‘ಅವರ ಮನೆಯಲ್ಲಿ ರಾಕೇಶ್ ಒಬ್ಬನೇ ದುಡಿಯುವವನು ಇದ್ದಿದ್ದು. ಈಗ ಅವರ ಅಮ್ಮ ಮತ್ತು ತಂಗಿಯನ್ನು ನೋಡಿದರೆ ನಿಜವಾಗಿಯೂ ಬೇಜಾರು ಆಗುತ್ತದೆ. ರಾಕೇಶ್ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಕ್ಷಿತಾ ಪ್ರೇಮ್ ಅವರು ಕಂಬನಿ ಮಿಡಿದಿದ್ದಾರೆ. ಆ್ಯಂಕರ್ ಅನುಶ್ರೀ, ನಿರ್ದೇಶಕ ಯೋಗರಾಜ್ ಭಟ್ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದಿದ್ದಾರೆ.

ಇದನ್ನೂ ಓದಿ
Image
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
Image
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
Image
‘ಸದಾ ಹೃದಯದಲ್ಲಿರುತ್ತೀರಿ’; ರಾಕೇಶ್ ಸಾವಿಗೆ ರಕ್ಷಿತಾ ಭಾವುಕ ಪೋಸ್ಟ್
Image
‘ಕಾಂತಾರ: ಚಾಪ್ಟರ್ 1’ ಶೂಟ್ ಮುಗಿಸಿ ಬಂದಿದ್ದ ರಾಕೇಶ್ ಪೂಜಾರಿ

‘ಈಗ ಎಲ್ಲವೂ ನೆನಪಾಗುತ್ತಿದೆ. ರಾಕೇಶ್ ಬಗ್ಗೆ ಏನು ನೆನಪಾಗಲ್ಲ ಅಂತ ಹೇಳೋಕೆ ಆಗಲ್ಲ. ಆರು ತಿಂಗಳ ಹಿಂದೆ ಅವನಿಗೆ ಅಪಘಾತ ಆಗಿತ್ತು. ಆಗ ನಾವೆಲ್ಲ ಅವನಿಗೆ ತುಂಬ ಬೈಯ್ದಿದ್ದೆವು. ತುಂಬ ಹುಷಾರಾಗಿ ಇರಬೇಕು, ಹೀಗೆಲ್ಲ ಗಾಡಿ ಓಡಿಸಬಾರದು ಅಂತ ಹೇಳಿದ್ದೆವು. ಹಲವಾರು ಬಾರಿ ನಮ್ಮ ಮನೆಗೆ ಊಟಕ್ಕೆ ಬಂದಿದ್ದ. ಜೊತೆಯಾಗಿ ನಕ್ಕಿದ್ದೇವೆ. ಅದನ್ನೆಲ್ಲ ಯಾವತ್ತೂ ಮರೆಯೋಕೆ ಆಗಲ್ಲ’ ಎಂದು ರಕ್ಷಿತಾ ಪ್ರೇಮ್ ಹೇಳಿದ್ದಾರೆ.

ಇದನ್ನೂ ಓದಿ: ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ

‘ರಾಕೇಶ್ ತುಂಬ ಒಳ್ಳೆಯ ಹುಡುಗ. ಅಂಥವನು ಇಷ್ಟು ಬೇಗ ಹೋಗಿದ್ದು ತುಂಬ ಬೇಜಾರಾಗುತ್ತದೆ. ಅವನು ಮೊದಲ ದಿನದಿಂದಲೂ ಇನ್​ಸ್ಟಾಗ್ರಾಮ್​ನಲ್ಲಿ ನನ್ನ ಜೊತೆ ಇರುವ ಫೋಟೋದ ಡಿಪಿಯನ್ನೇ ಹಾಕಿಕೊಂಡಿದ್ದ. ಇವತ್ತು ಬೆಳಿಗ್ಗೆ ದರ್ಶನ್ ಕೂಡ ಫೋನ್ ಮಾಡಿ ಕೇಳಿದರು. ನಮಗೆಲ್ಲರಿಗೂ ಈ ಘಟನೆಯಿಂದ ತುಂಬ ನೋವಾಗಿದೆ’ ಎಂದಿದ್ದಾರೆ ರಕ್ಷಿತಾ ಪ್ರೇಮ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ