AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾ ನೋಡಿ ಹೊಗಳಿದ ರಕ್ಷಿತಾ ಪ್ರೇಮ್, ಮಾಸ್ಟರ್ ಆನಂದ್

ಕಿಚ್ಚ ಸುದೀಪ್, ಉಪೇಂದ್ರ ಬಳಿಕ ರಕ್ಷಿತಾ ಪ್ರೇಮ್, ಮಾಸ್ಟರ್ ಆನಂದ್ ಕೂಡ ‘ಟಾಕ್ಸಿಕ್’ ಸಿನಿಮಾ ನೋಡಿದ್ದಾರೆ. ಬಳಿಕ ಅವರು ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿರುವ ಮಿಶ್ರ ಪ್ರತಿಕ್ರಿಯೆ ನಡುವೆಯೂ ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

‘ಟಾಕ್ಸಿಕ್’ ಸಿನಿಮಾ ನೋಡಿ ಹೊಗಳಿದ ರಕ್ಷಿತಾ ಪ್ರೇಮ್, ಮಾಸ್ಟರ್ ಆನಂದ್
Rakshitha Prem, Yash, Master Anand
ಮದನ್​ ಕುಮಾರ್​
|

Updated on: Aug 30, 2026 | 11:15 AM

Share

‘ಟಾಕ್ಸಿಕ್’ (Toxic) ಸಿನಿಮಾ ನೋಡಿದ ಕೆಲವರಿಗೆ ಇಷ್ಟ ಆಗಿಲ್ಲ. ಪರಭಾಷೆಯ ಪ್ರೇಕ್ಷಕರು ಹೆಚ್ಚಾಗಿ ಈ ಸಿನಿಮಾವನ್ನು ಟ್ರೋಲ್ ಮಾಡುತ್ತಿದ್ದಾರೆ. ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದ ಈ ಸಿನಿಮಾ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಯಶ್ (Yash) ಅವರ ಪ್ರಯತ್ನಕ್ಕೆ ಮೆಚ್ಚುಗೆ ಸಲ್ಲಬೇಕು ಎಂದು ಅಪ್ಪಟ ಅಭಿಮಾನಿಗಳು ಹೇಳುತ್ತಿದ್ದಾರೆ. ಅವರ ನಟನೆಗೆ ಪ್ರಶಂಸೆ ಸಿಕ್ಕಿದೆ. ಕನ್ನಡದ ಹಲವು ಸೆಲೆಬ್ರಿಟಿಗಳು ಈ ಸಿನಿಮಾ ಬಗ್ಗೆ ಮಾತನಾಡುತ್ತಿದ್ದಾರೆ. ಸುದೀಪ್, ಉಪೇಂದ್ರ, ಆರ್. ಚಂದ್ರು ಬಳಿಕ ರಕ್ಷಿತಾ ಪ್ರೇಮ್, ಮಾಸ್ಟರ್ ಆನಂದ್, ಪ್ರದೀಪ್ ಈಶ್ವರ್ ಮುಂತಾದವರು ‘ಟಾಕ್ಸಿಕ್’ ಸಿನಿಮಾಗೆ ಬೆಂಬಲ ಸೂಚಿಸಿದ್ದಾರೆ.

ಸಿನಿಮಾ ನೋಡಿದ ಬಳಿಕ ಮಾಸ್ಟರ್ ಆನಂದ್ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಅದರಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ಹಾಯ್, ಎಲ್ಲರಿಗೂ ನಮಸ್ಕಾರ. ಇದು ಮಧ್ಯ ರಾತ್ರಿ ಪೋಸ್ಟ್. ಟಾಕ್ಸಿಕ್ ಸಿನಿಮಾ ನೋಡಿಕೊಂಡು ಬಂದು ಈ ವಿಡಿಯೋ ಮಾಡುತ್ತಿದ್ದೇನೆ. ಭಾವನೆಗಳು ಹಾಗೆ ಇರುವಾಗಲೇ ಹೇಳಿಬಿಡೋಣ ಅಂತ ವಿಡಿಯೋ ಮಾಡಿದ್ದೇನೆ. ಈ ಸಿನಿಮಾ ಬಗ್ಗೆ ಬೇರೆ ರೀತಿಯ ಅಭಿಪ್ರಾಯವನ್ನು ಜನರು ಯಾಕೆ ಕೊಡುತ್ತಿದ್ದಾರೆ ಅಂತ ಗೊತ್ತಿಲ್ಲ’ ಎಂದು ಮಾಸ್ಟರ್ ಆನಂದ್ ಅವರು ಮಾತು ಆರಂಭಿಸಿದ್ದಾರೆ.

ಟಾಕ್ಸಿಕ್ ಹೊಗಳಿದ ಮಾಸ್ಟರ್ ಆನಂದ್:

‘ನಿಜವಾಗಿಯೂ ಇದೊಂದು ಬ್ರಿಲಿಯಂಟ್ ಸ್ಕ್ರಿಪ್ಟ್, ಚಿತ್ರಕಥೆ, ಡೈರೆಕ್ಷನ್. ಇದನ್ನು ನೋಡಲು ಬೇರೆಯದೇ ದೃಷ್ಟಿಕೋನ ಬೇಕು. ಆ ದೃಷ್ಟಿಕೋನ ಇಲ್ಲದೇ ಇರುವುದಕ್ಕೆ ನಿಮಗೆ ಗೊಂದಲ ಆಗುತ್ತಿದೆ ಎನಿಸುತ್ತದೆ. ಈ ಸಿನಿಮಾ ತುಂಬಾ ಕ್ಲಿಯರ್ ಆಗಿದೆ. ಹಲವು ಭಾವನೆಗಳು ಈ ಸಿನಿಮಾದಲ್ಲಿವೆ. ಆ್ಯಕ್ಷನ್, ರೊಮ್ಯಾನ್ಸ್ ಇದೆ. ಆರ್ಟ್ ಡೈರೆಕ್ಷನ್ ಚೆನ್ನಾಗಿದೆ. ನಾವು ಈ ರೀತಿಯ ಸಿನಿಮಾಗೆ ಬೆಂಬಲ ನೀಡಬೇಕು’ ಎಂದು ಮಾಸ್ಟರ್ ಆನಂದ್ ಅವರು ಹೇಳಿದ್ದಾರೆ.

‘ಟಾಕ್ಸಿಕ್’ ನೋಡಿ ರಕ್ಷಿತಾ ಪ್ರೇಮ್ ಮೆಚ್ಚುಗೆ:

‘ಈಗ ತಾನೆ ನಾನು ಟಾಕ್ಸಿಕ್ ಸಿನಿಮಾ ನೋಡಿದ್ದೇನೆ. ತುಂಬ ಚೆನ್ನಾಗಿ ಮಾಡಿದ್ದಾರೆ. ಎಲ್ಲರೂ ಸಿನಿಮಾ ನೋಡಿ. ಒಬ್ಬ ಮನುಷ್ಯನ ಮನಸ್ಥಿತಿ ಬಗ್ಗೆ ಈ ಸಿನಿಮಾ ಇದೆ. ಇದು ದಕ್ಷಿಣ ಭಾರತದ ಸಿನಿಮಾ ಎಂಬ ಕಾರಣಕ್ಕೆ ನಾವು ಒಪ್ಪಿಕೊಳ್ಳುತ್ತಿಲ್ಲವೇ? ಯಶ್ ಅವರ ನಟನೆ ಈ ಸಿನಿಮಾದಲ್ಲಿ ಬಹಳ ಚೆನ್ನಾಗಿದೆ. ನನ್ನ ಸ್ನೇಹಿತರಿಗೂ ಈ ಸಿನಿಮಾ ಇಷ್ಟ ಆಯಿತು’ ಎಂದು ರಕ್ಷಿತಾ ಪ್ರೇಮ್ ಅವರು ಹೇಳಿದ್ದಾರೆ.

ಇದನ್ನೂ ಓದಿ: 4 ದಿನಕ್ಕೆ ಎಷ್ಟಾಯಿತು ‘ಟಾಕ್ಸಿಕ್’ ಸಿನಿಮಾದ ಕಲೆಕ್ಷನ್? ಇಲ್ಲಿದೆ ಲೆಕ್ಕ

ಯಶ್ ಬಗ್ಗೆ ಪ್ರದೀಪ್ ಈಶ್ವರ್ ಮಾತು:

‘ಹಿಟ್ ಅಥವಾ ಫ್ಲಾಪ್ ಎನ್ನುವುದು ಹೀರೊಗಳಿಗೆ ಅನ್ವಯಿಸುತ್ತದೆಯೇ ಹೊರತು ಲೆಜೆಂಡ್‌ಗಳಿಗಲ್ಲ. ಯಶ್ ಅವರು ಕೇವಲ ಕರ್ನಾಟಕಕ್ಕೆ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗಕ್ಕೇ ಒಬ್ಬ ನಿಜವಾದ ಲೆಜೆಂಡ್. ಕನ್ನಡಿಗನಾಗಿ ನಾನು ಯಶ್ ಅವರನ್ನು ಬೆಂಬಲಿಸುತ್ತೇನೆ. ಕರ್ನಾಟಕದ ಈ ಪ್ರತಿಭೆಯನ್ನು ನಾವೆಲ್ಲಾ ಕನ್ನಡಿಗರು ಒಗ್ಗಟ್ಟಾಗಿ ನಿಂತು ಬೆಂಬಲಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ’ ಎಂದು ಪ್ರದೀಪ್ ಈಶ್ವರ್ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'