AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿಕ್​ ಬಳಿಕ ಮುಂದುವರಿದ ರಕ್ಷಿತಾ-ದರ್ಶನ್​ ಫ್ರೆಂಡ್​ಶಿಪ್​; ಇಲ್ಲಿದೆ ಫೋಟೋ ಸಾಕ್ಷಿ

ವಿವಾದದ ನಂತರ ದರ್ಶನ್​ ಮತ್ತು ರಕ್ಷಿತಾ ಪ್ರೇಮ್​ ನಡುವೆ ಮತ್ತೆ ಸ್ನೇಹ ಚಿಗುರಿದೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ಫೋಟೋವನ್ನು ರಕ್ಷಿತಾ ಹಂಚಿಕೊಂಡಿದ್ದಾರೆ. ಅದರ ಜೊತೆ ಅವರು ನೀಡಿರುವ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ.

ಕಿರಿಕ್​ ಬಳಿಕ ಮುಂದುವರಿದ ರಕ್ಷಿತಾ-ದರ್ಶನ್​ ಫ್ರೆಂಡ್​ಶಿಪ್​; ಇಲ್ಲಿದೆ ಫೋಟೋ ಸಾಕ್ಷಿ
ದರ್ಶನ್​, ರಕ್ಷಿತಾ ಪ್ರೇಮ್​
TV9 Web
| Edited By: |

Updated on: Jul 29, 2021 | 9:31 AM

Share

ಕೆಲವೇ ದಿನಗಳ ಹಿಂದೆ ಸ್ಯಾಂಡಲ್​ವುಡ್​ನಲ್ಲಿ ವಿವಾದ ಭುಗಿಲೆದ್ದಿತ್ತು. ನಟ ದರ್ಶನ್​ (Darshan) ಮತ್ತು ನಿರ್ದೇಶಕ ಇಂದ್ರಜಿತ್​ ಲಂಕೇಶ್ (Indrajit Lankesh)​ ಅವರ ನಡುವೆ ಜಟಾಪಟಿ ಏರ್ಪಟ್ಟಿತ್ತು. ಮೊದಲು 25 ಕೋಟಿ ರೂ. ವಂಚನೆ ಯತ್ನದಿಂದ ಆರಂಭವಾದ ಪ್ರಕರಣ ಎತ್ತೆತ್ತಲೋ ಸಾಗಿತ್ತು. ಮಾತಿನ ಭರದಲ್ಲಿ ನಿರ್ದೇಶಕ ಪ್ರೇಮ್​ (Prem) ಬಗ್ಗೆಯೂ ದರ್ಶನ್ ಹಗುರವಾಗಿ ಮಾತನಾಡಿದ್ದರು. ಇದು ಸಹಜವಾಗಿಯೇ ಪ್ರೇಮ್​ ಅಸಮಾಧಾನಕ್ಕೆ ಕಾರಣವಾಗಿತ್ತು. ಆದರೆ ಈಗ ಪ್ರೇಮ್​ ಪತ್ನಿ, ನಟಿ ರಕ್ಷಿತಾ (Rakshitha Prem) ಅವರ ಸೋಶಿಯಲ್​ ಮೀಡಿಯಾ ಪೋಸ್ಟ್​ ಹೊಸ ಸಂದೇಶ ರವಾನಿಸಿದೆ.

ಪ್ರೇಮ್​ ಬಗ್ಗೆ ದರ್ಶನ್​ ಹಗುರವಾಗಿ ಮಾತನಾಡಿದ್ದರಿಂದ ರಕ್ಷಿತಾಗೂ ಬೇಸರ ಆಗಿತ್ತು. ಆದರೆ ಈಗ ದರ್ಶನ್​ ಮತ್ತು ರಕ್ಷಿತಾ ನಡುವೆ ಮತ್ತೆ ಸ್ನೇಹ ಚಿಗುರಿದೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ಫೋಟೋವನ್ನು ರಕ್ಷಿತಾ ಹಂಚಿಕೊಂಡಿದ್ದಾರೆ. ಅದರ ಜೊತೆ ಅವರು ನೀಡಿರುವ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ.

‘ಕೆಲವು ಸಂಬಂಧಗಳಿಗೆ ಕೊನೆ ಎಂಬುದೇ ಇಲ್ಲ. ದರ್ಶನ್​ ನೀವು ನನಗಾಗಿ ಸದಾ ಇರುತ್ತೀರಿ ಎಂಬುದು ನನಗೆ ಗೊತ್ತು. ನನ್ನ ಬದುಕಿನಲ್ಲಿ ಅಂಥ ವ್ಯಕ್ತಿ ಆಗಿರುವುದಕ್ಕೆ ಧನ್ಯವಾದಗಳು’ ಎಂದು ರಕ್ಷಿತಾ ಪೋಸ್ಟ್​ ಮಾಡಿದ್ದಾರೆ. #friendhipforever ಎಂಬ ಹ್ಯಾಶ್​ಟ್ಯಾಗ್​ ಮೂಲಕ ತಮ್ಮ ಸ್ನೇಹ ಶಾಶ್ವತ ಎಂಬುದನ್ನು ಅವರು ಮತ್ತೊಮ್ಮೆ ಸಾರಿ ಹೇಳಿದ್ದಾರೆ.

ರಕ್ಷಿತಾ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ಈ ಫೋಟೋ ಕಂಡು ಅವರ ಅಭಿಮಾನಿಗಳು ಖುಷಿ ಆಗಿದ್ದಾರೆ. ‘ನಿಮ್ಮ ಸ್ನೇಹ ಚಿರಕಾಲ ಹೀಗೆ ಇರಲಿ. ನಿಮ್ಮನ್ನು ಜೊತೆಯಾಗಿ ನೋಡೋಕೆ ಖುಷಿ ಆಗುತ್ತದೆ. ನೀವಿಬ್ಬರು ಒಂದಾಗಿದ್ದನ್ನು ಕಂಡ ಆನಂದಭಾಷ್ಪ ಬಂತು’ ಎಂದೆಲ್ಲ ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಅಭಿಮಾನಿಗಳ ಮನಗೆದ್ದ ಬೆಸ್ಟ್​ ಜೋಡಿಗಳಲ್ಲಿ ದರ್ಶನ್ ಮತ್ತು ರಕ್ಷಿತಾ ಕೂಡ ಪ್ರಮುಖರು. ‘ಅಯ್ಯ’, ‘ಸುಂಟರಗಾಳಿ’, ‘ಕಲಾಸಿಪಾಳ್ಯ’, ‘ಮಂಡ್ಯ’ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ ಈ ಜೋಡಿಗೆ ಸಿನಿಪ್ರಿಯರು ಫಿದಾ ಆಗಿದ್ದರು. ಆ ಸಿನಿಮಾಗಳೆಲ್ಲ ತೆರೆಕಂಡು ಹಲವು ವರ್ಷಗಳೇ ಕಳೆದಿವೆ. ರಕ್ಷಿತಾ ಅವರ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಹಾಗಿದ್ದರೂ ಕೂಡ ರಕ್ಷಿತಾ​ ಮತ್ತು ದರ್ಶನ್​ ನಡುವಿನ ಸ್ನೇಹ ಮಾಸಿಲ್ಲ.

ಇದನ್ನೂ ಓದಿ:

ಪೋಸ್ಟರ್​ನಲ್ಲಿ ದರ್ಶನ್​​ ಜೊತೆ ಸಪ್ಲೈಯರ್​ ಹುಡುಗನ ಫೋಟೋ; ಅಚ್ಚರಿ ಮೂಡಿಸಿದ ‘ಝೂ’ ಚಿತ್ರ

ದರ್ಶನ್​ ವಿವಾದ: ಫ್ಯಾನ್ಸ್​ ಇಟ್ಟ ಬೇಡಿಕೆಗೆ ಒಂದೇ ಮಾತಲ್ಲಿ ಉತ್ತರಿಸಿದ ಜಗ್ಗೇಶ್​

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ