AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿಕ್​ ಬಳಿಕ ಮುಂದುವರಿದ ರಕ್ಷಿತಾ-ದರ್ಶನ್​ ಫ್ರೆಂಡ್​ಶಿಪ್​; ಇಲ್ಲಿದೆ ಫೋಟೋ ಸಾಕ್ಷಿ

ವಿವಾದದ ನಂತರ ದರ್ಶನ್​ ಮತ್ತು ರಕ್ಷಿತಾ ಪ್ರೇಮ್​ ನಡುವೆ ಮತ್ತೆ ಸ್ನೇಹ ಚಿಗುರಿದೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ಫೋಟೋವನ್ನು ರಕ್ಷಿತಾ ಹಂಚಿಕೊಂಡಿದ್ದಾರೆ. ಅದರ ಜೊತೆ ಅವರು ನೀಡಿರುವ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ.

ಕಿರಿಕ್​ ಬಳಿಕ ಮುಂದುವರಿದ ರಕ್ಷಿತಾ-ದರ್ಶನ್​ ಫ್ರೆಂಡ್​ಶಿಪ್​; ಇಲ್ಲಿದೆ ಫೋಟೋ ಸಾಕ್ಷಿ
ದರ್ಶನ್​, ರಕ್ಷಿತಾ ಪ್ರೇಮ್​
TV9 Web
| Edited By: |

Updated on: Jul 29, 2021 | 9:31 AM

Share

ಕೆಲವೇ ದಿನಗಳ ಹಿಂದೆ ಸ್ಯಾಂಡಲ್​ವುಡ್​ನಲ್ಲಿ ವಿವಾದ ಭುಗಿಲೆದ್ದಿತ್ತು. ನಟ ದರ್ಶನ್​ (Darshan) ಮತ್ತು ನಿರ್ದೇಶಕ ಇಂದ್ರಜಿತ್​ ಲಂಕೇಶ್ (Indrajit Lankesh)​ ಅವರ ನಡುವೆ ಜಟಾಪಟಿ ಏರ್ಪಟ್ಟಿತ್ತು. ಮೊದಲು 25 ಕೋಟಿ ರೂ. ವಂಚನೆ ಯತ್ನದಿಂದ ಆರಂಭವಾದ ಪ್ರಕರಣ ಎತ್ತೆತ್ತಲೋ ಸಾಗಿತ್ತು. ಮಾತಿನ ಭರದಲ್ಲಿ ನಿರ್ದೇಶಕ ಪ್ರೇಮ್​ (Prem) ಬಗ್ಗೆಯೂ ದರ್ಶನ್ ಹಗುರವಾಗಿ ಮಾತನಾಡಿದ್ದರು. ಇದು ಸಹಜವಾಗಿಯೇ ಪ್ರೇಮ್​ ಅಸಮಾಧಾನಕ್ಕೆ ಕಾರಣವಾಗಿತ್ತು. ಆದರೆ ಈಗ ಪ್ರೇಮ್​ ಪತ್ನಿ, ನಟಿ ರಕ್ಷಿತಾ (Rakshitha Prem) ಅವರ ಸೋಶಿಯಲ್​ ಮೀಡಿಯಾ ಪೋಸ್ಟ್​ ಹೊಸ ಸಂದೇಶ ರವಾನಿಸಿದೆ.

ಪ್ರೇಮ್​ ಬಗ್ಗೆ ದರ್ಶನ್​ ಹಗುರವಾಗಿ ಮಾತನಾಡಿದ್ದರಿಂದ ರಕ್ಷಿತಾಗೂ ಬೇಸರ ಆಗಿತ್ತು. ಆದರೆ ಈಗ ದರ್ಶನ್​ ಮತ್ತು ರಕ್ಷಿತಾ ನಡುವೆ ಮತ್ತೆ ಸ್ನೇಹ ಚಿಗುರಿದೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ಫೋಟೋವನ್ನು ರಕ್ಷಿತಾ ಹಂಚಿಕೊಂಡಿದ್ದಾರೆ. ಅದರ ಜೊತೆ ಅವರು ನೀಡಿರುವ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ.

‘ಕೆಲವು ಸಂಬಂಧಗಳಿಗೆ ಕೊನೆ ಎಂಬುದೇ ಇಲ್ಲ. ದರ್ಶನ್​ ನೀವು ನನಗಾಗಿ ಸದಾ ಇರುತ್ತೀರಿ ಎಂಬುದು ನನಗೆ ಗೊತ್ತು. ನನ್ನ ಬದುಕಿನಲ್ಲಿ ಅಂಥ ವ್ಯಕ್ತಿ ಆಗಿರುವುದಕ್ಕೆ ಧನ್ಯವಾದಗಳು’ ಎಂದು ರಕ್ಷಿತಾ ಪೋಸ್ಟ್​ ಮಾಡಿದ್ದಾರೆ. #friendhipforever ಎಂಬ ಹ್ಯಾಶ್​ಟ್ಯಾಗ್​ ಮೂಲಕ ತಮ್ಮ ಸ್ನೇಹ ಶಾಶ್ವತ ಎಂಬುದನ್ನು ಅವರು ಮತ್ತೊಮ್ಮೆ ಸಾರಿ ಹೇಳಿದ್ದಾರೆ.

ರಕ್ಷಿತಾ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ಈ ಫೋಟೋ ಕಂಡು ಅವರ ಅಭಿಮಾನಿಗಳು ಖುಷಿ ಆಗಿದ್ದಾರೆ. ‘ನಿಮ್ಮ ಸ್ನೇಹ ಚಿರಕಾಲ ಹೀಗೆ ಇರಲಿ. ನಿಮ್ಮನ್ನು ಜೊತೆಯಾಗಿ ನೋಡೋಕೆ ಖುಷಿ ಆಗುತ್ತದೆ. ನೀವಿಬ್ಬರು ಒಂದಾಗಿದ್ದನ್ನು ಕಂಡ ಆನಂದಭಾಷ್ಪ ಬಂತು’ ಎಂದೆಲ್ಲ ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಅಭಿಮಾನಿಗಳ ಮನಗೆದ್ದ ಬೆಸ್ಟ್​ ಜೋಡಿಗಳಲ್ಲಿ ದರ್ಶನ್ ಮತ್ತು ರಕ್ಷಿತಾ ಕೂಡ ಪ್ರಮುಖರು. ‘ಅಯ್ಯ’, ‘ಸುಂಟರಗಾಳಿ’, ‘ಕಲಾಸಿಪಾಳ್ಯ’, ‘ಮಂಡ್ಯ’ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ ಈ ಜೋಡಿಗೆ ಸಿನಿಪ್ರಿಯರು ಫಿದಾ ಆಗಿದ್ದರು. ಆ ಸಿನಿಮಾಗಳೆಲ್ಲ ತೆರೆಕಂಡು ಹಲವು ವರ್ಷಗಳೇ ಕಳೆದಿವೆ. ರಕ್ಷಿತಾ ಅವರ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಹಾಗಿದ್ದರೂ ಕೂಡ ರಕ್ಷಿತಾ​ ಮತ್ತು ದರ್ಶನ್​ ನಡುವಿನ ಸ್ನೇಹ ಮಾಸಿಲ್ಲ.

ಇದನ್ನೂ ಓದಿ:

ಪೋಸ್ಟರ್​ನಲ್ಲಿ ದರ್ಶನ್​​ ಜೊತೆ ಸಪ್ಲೈಯರ್​ ಹುಡುಗನ ಫೋಟೋ; ಅಚ್ಚರಿ ಮೂಡಿಸಿದ ‘ಝೂ’ ಚಿತ್ರ

ದರ್ಶನ್​ ವಿವಾದ: ಫ್ಯಾನ್ಸ್​ ಇಟ್ಟ ಬೇಡಿಕೆಗೆ ಒಂದೇ ಮಾತಲ್ಲಿ ಉತ್ತರಿಸಿದ ಜಗ್ಗೇಶ್​

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?