AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದ ಹೆಚ್ಚಿಸಿಕೊಳ್ಳೋಕೆ ರಾಕುಲ್​ ಪ್ರೀತ್​ ಸಿಂಗ್​ ತುಳಿದ್ರು ಸರ್ಜರಿ ಮಾರ್ಗ?; ಇಲ್ಲಿದೆ ಸಾಕ್ಷ್ಯ

ರಾಕುಲ್​ ಸದ್ಯ ಶೂಟಿಂಗ್​ಗಾಗಿ ಲಂಡನ್​ಗೆ ತೆರಳಿದ್ದಾರೆ. ಅಲ್ಲಿಯ ಫೋಟೋಗಳನ್ನು ರಾಕುಲ್​ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡುತ್ತಿದ್ದಾರೆ. ಈ ಮಧ್ಯೆ, ಅವರು ತಮ್ಮ ಸೆಲ್ಫಿಯನ್ನು ಇತ್ತೀಚೆಗೆ ಪೋಸ್ಟ್​ ಮಾಡಿದ್ದಾರೆ.

ಅಂದ ಹೆಚ್ಚಿಸಿಕೊಳ್ಳೋಕೆ ರಾಕುಲ್​ ಪ್ರೀತ್​ ಸಿಂಗ್​ ತುಳಿದ್ರು ಸರ್ಜರಿ ಮಾರ್ಗ?; ಇಲ್ಲಿದೆ ಸಾಕ್ಷ್ಯ
ರಾಕುಲ್ ಪ್ರೀತ್​ ಸಿಂಗ್
TV9 Web
| Edited By: |

Updated on: Sep 26, 2021 | 2:35 PM

Share

ರಾಕುಲ್​ ಪ್ರೀತ್​ ಸಿಂಗ್ ಬಾಲಿವುಡ್​ ಹಾಗೂ ಟಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಅವರು ಬಣ್ಣದ ಬದುಕು ಆರಂಭಿಸಿದ್ದು ಸ್ಯಾಂಡಲ್​ವುಡ್​ ಮೂಲಕವಾದರೂ ನಂತರ ಅವರು ಬ್ಯುಸಿಯಾಗಿದ್ದು ಬೇರೆ ಇಂಡಸ್ಟ್ರಿಗಳಲ್ಲಿ. ರಾಕುಲ್​ ಸಖತ್​ ಬ್ಯೂಟಿಫುಲ್​. ಅವರು ಮಾಡಿಸೋ ಫೋಟೋಶೂಟ್​ ನೋಡೋಕೆ ಅಭಿಮಾನಿಗಳು ಕಾದು ಕೂತಿರುತ್ತಾರೆ. ಈ ಮಧ್ಯೆ ರಾಕುಲ್​ ಪ್ರೀತ್​ ಸಿಂಗ್​ ತಮ್ಮ ಬ್ಯೂಟಿ ಹೆಚ್ಚಿಸಿಕೊಳ್ಳೋಕೆ ಸರ್ಜರಿಯ ಮೊರೆ ಹೋದರಾ ಎನ್ನುವ ಅನುಮಾನ ಹುಟ್ಟಿಕೊಂಡಿದೆ. ಅವರು ಹಂಚಿಕೊಂಡಿರುವ ಫೋಟೋಗಳು ಹೀಗೊಂದು ಅನುಮಾನ ಹುಟ್ಟುಹಾಕಿದೆ.

ರಾಕುಲ್​ ಸದ್ಯ ಶೂಟಿಂಗ್​ಗಾಗಿ ಲಂಡನ್​ಗೆ ತೆರಳಿದ್ದಾರೆ. ಅಲ್ಲಿಯ ಫೋಟೋಗಳನ್ನು ರಾಕುಲ್​ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡುತ್ತಿದ್ದಾರೆ. ಈ ಮಧ್ಯೆ, ಅವರು ತಮ್ಮ ಸೆಲ್ಫಿಯನ್ನು ಇತ್ತೀಚೆಗೆ ಪೋಸ್ಟ್​ ಮಾಡಿದ್ದಾರೆ. ಈ ಫೋಟೋದಲ್ಲಿ ಅವರು ತುಂಬಾನೇ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಜತೆಗೆ ಅವರ ಹಳೆಯ ಫೋಟೋಗಳನ್ನು ಇಟ್ಟು ಹೋಲಿಕೆ ಮಾಡುತ್ತಿದ್ದಾರೆ ಅಭಿಮಾನಿಗಳು.

ರಾಕುಲ್​ ಪ್ರೀತ್​ ಸಿಂಗ್​ ತುಟಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಕೆಲ ವರದಿಗಳ ಪ್ರಕಾರ ಅವರು ಕಾಸ್ಮೆಟಿಕ್​ ಸರ್ಜರಿಗೆ ಒಳಗಾಗಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ. ಈ ಬಗ್ಗೆ ಸಾಕಷ್ಟು ವರದಿಗಳು ಸೋಶಿಯಲ್​ ಮೀಡಿಯಾದಲ್ಲಿ ಬಿತ್ತರವಾಗುತ್ತಿವೆ.

ಈ ರೀತಿ ಮೂಗು, ತುಟಿ, ಕೆನ್ನೆ ಮತ್ತಿತ್ಯಾದಿ ಸರ್ಜರಿಗೆ ಒಳಗಾಗುವುದು ಬಾಲಿವುಡ್​ ನಟಿಯರ ಪಾಲಿಗೆ ಹೊಸದೇನು ಅಲ್ಲ. ಈ ಮೊದಲು ಕೂಡ ಸಾಕಷ್ಟು ಹೀರೋಯಿನ್​ಗಳು ಈ ರೀತಿಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ, ಈ ಬಗ್ಗೆ ಓಪನ್​ ಆಗಿ ಹೇಳಿಕೊಳ್ಳುವುದಿಲ್ಲ. ಈಗ ರಾಕುಲ್​ ಕೂಡ ಈ ವಿಚಾರದಲ್ಲಿ ಮೌನ ತಾಳಿದ್ದಾರೆ. ಸದ್ಯ, ಇದಕ್ಕೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

ರಾಕುಲ್​ ಕೈಯಲ್ಲಿ ಬಾಲಿವುಡ್​ ಸಿನಿಮಾಗಳು ಹೆಚ್ಚಿವೆ. ‘ತಲೈವಿ’ ನಿರ್ದೇಶಕ ಎ.ಎಲ್​. ವಿಜಯ್​ ಅವರ ‘ಅಕ್ಟೋಬರ್​ 31 ಲೇಡಿಸ್​ ನೈಟ್​’ ಸಿನಿಮಾದಲ್ಲಿ ರಾಕುಲ್​ ನಟಿಸುತ್ತಿದ್ದಾರೆ. ಈ ಸಿನಿಮಾ ತೆಲುಗು ಹಾಗೂ ತಮಿಳಲ್ಲಿ ತೆರೆಗೆ ಬರೋಕೆ ರೆಡಿ ಆಗುತ್ತಿದೆ.

ಇದನ್ನೂ ಓದಿ: ಸ್ಯಾಂಡಲ್​ವುಡ್​ ಸಿನಿ ಹಬ್ಬ; ಬಹು ನಿರೀಕ್ಷಿತ ಸ್ಟಾರ್​ ಸಿನಿಮಾಗಳ ರಿಲೀಸ್​ ಡೇಟ್​ ಅನೌನ್ಸ್​

ಟಾಲಿವುಡ್​ ಡ್ರಗ್ಸ್​ ಕೇಸ್​: ಇಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದ ರಾಕುಲ್​ ಪ್ರೀತ್​ ಸಿಂಗ್​

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ