AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiva Rajkumar: ದೆಹಲಿ ಸಂಸತ್ತು ಹತ್ತಲಿದ್ದಾರೆ ಶಿವರಾಜ್​ಕುಮಾರ್; ಸಿಕ್ಕಿತು ಹೊಸ ಸುದ್ದಿ

ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದು, ರಾಮ್​ಚರಣ್ ಜೊತೆಗಿನ "RC16" ಚಿತ್ರದ ಶೂಟ್​ನಲ್ಲಿ ಭಾಗಿ ಆಗಲಿದ್ದಾರೆ. ದೆಹಲಿ ಪಾರ್ಲಿಮೆಂಟ್‌ನಲ್ಲಿನ ಚಿತ್ರದ ಶೂಟ್ ನಡೆಯಲಿದೆ. ಈ ಚಿತ್ರದ ಶೂಟಿಂಗ್‌ಗಾಗಿ ದೆಹಲಿಗೆ ತೆರಳುವುದರ ಜೊತೆಗೆ ಜಮಾ ಮಸೀದಿಯಲ್ಲಿಯೂ ಶೂಟಿಂಗ್ ನಡೆಯಲಿದೆ. ಪವನ್ ಕಲ್ಯಾಣ್ ಅವರ ಮಧ್ಯಸ್ಥಿಕೆಯಿಂದ ಪಾರ್ಲಿಮೆಂಟ್‌ನಲ್ಲಿ ಶೂಟಿಂಗ್‌ಗೆ ಅನುಮತಿ ಪಡೆಯುವ ಪ್ರಯತ್ನ ನಡೆಯುತ್ತಿದೆ.

Shiva Rajkumar: ದೆಹಲಿ ಸಂಸತ್ತು ಹತ್ತಲಿದ್ದಾರೆ ಶಿವರಾಜ್​ಕುಮಾರ್; ಸಿಕ್ಕಿತು ಹೊಸ ಸುದ್ದಿ
ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on:Mar 03, 2025 | 10:06 AM

Share

ಶಿವರಾಜ್​ಕುಮಾರ್ ಅವರು ಈಗಷ್ಟೇ ಕ್ಯಾನ್ಸರ್ ಮುಕ್ತರಾಗಿ ಮರಳಿದ್ದಾರೆ. ಒಂದು ತಿಂಗಳ ಕಾಲ ಅಮೆರಿಕದಲ್ಲಿ ಇದ್ದ ಅವರು ಈಗ ಚೇತರಿಕೆ ಕಂಡಿದ್ದಾರೆ. ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಮಧ್ಯೆ ಅವರು ದೆಹಲಿ ಪಾರ್ಲಿಮೆಂಟ್ ಏರುವ ಸುದ್ದಿಯೊಂದು ಹೊರ ಬಿದ್ದಿದೆ. ಹಾಗಂತ ಅವರು ಅವರು ಚುನಾವಣೆಗೆ ಸ್ಪರ್ಧಿಸಿ ಸಂಸದರಾಗುತ್ತಿಲ್ಲ. ಅವರು ದೆಹಲಿ ಪಾರ್ಲಿಮೆಂಟ್ ಏರುತ್ತಿರುವುದು ಸಿನಿಮಾ ಶೂಟ್​ಗಾಗಿ.

ರಾಮ್ ಚರಣ್ ಹಾಗೂ ಶಿವರಾಜ್​ಕುಮಾರ್ ‘ಆರ್​ಸಿ 16’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಬುಚಿ ಬಾಬು ನಿರ್ದೇಶನ ಇದೆ. ಈ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಚಿತ್ರದ ಕೆಲ ಭಾಗದ ಶೂಟ್ ಕೂಡ ಆಗಿದೆ. ಈ ವಾರ ಶಿವರಾಜ್​ಕುಮಾರ್ ಅವರು ಶೂಟ್​ನಲ್ಲಿ ಭಾಗಿ ಆಗಲಿದ್ದಾರೆ.

ದೆಹಲಿ ಪಾರ್ಲಿಮೆಂಟ್​ನಲ್ಲಿ ಕೆಲವು ದೃಶ್ಯಗಳನ್ನು ಶೂಟ್ ಮಾಡುವ ಆಲೋಚನೆ ತಂಡಕ್ಕೆ ಇದೆ. ಈ ದೃಶ್ಯದಲ್ಲಿ ಶಿವರಾಜ್​ಕುಮಾರ್ ಕೂಡ ಇರುತ್ತಾರೆ ಎಂದು ಹೇಳಲಾಗುತ್ತಿದೆ. ಈಗಿನ ಪರಿಸ್ಥಿತಿಯಲ್ಲಿ ಸಂಸತ್ತಿನಲ್ಲಿ ಶೂಟಿಂಗ್​ಗೆ ಅವಕಾಶ ಸಿಗೋದು ದೊಡ್ಡ ಚಾಲೆಂಜ್. ಇದಕ್ಕೂ ತಂಡ ಪ್ಲ್ಯಾನ್ ಮಾಡಿದೆ ಎನ್ನಲಾಗಿದೆ.

ಇದನ್ನೂ ಓದಿ
Image
ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?
Image
ಶಿವರಾಜ್​ಕುಮಾರ್​ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ DCM ಡಿಕೆ ಶಿವಕುಮಾರ್
Image
ಶಿವಣ್ಣನ ಆರೋಗ್ಯದ ಬಗ್ಗೆ ಬಾಲಿವುಡ್ ನಟ ಅಮಿತಾಭ್​ ಬಚ್ಚನ್​ಗೆ ಕಾಳಜಿ
Image
ಬೆಂಗಳೂರು ಬಿಟ್ಟು ಈ ಊರಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಶಿವಣ್ಣ

ರಾಮ್ ಚರಣ್ ಕುಟುಂಬದ ಪವನ್ ಕಲ್ಯಾಣ್ ಅವರು ಎನ್​ಡಿಎ ಜೊತೆ ಕೈ ಜೋಡಿಸಿದ್ದಾರೆ. ಹೀಗಾಗಿ, ಅವರು ಪ್ರಧಾನಿ ನರೇಂದ್ರ ಮೋದಿ ಬಳಿ ಈ ಬಗ್ಗೆ ಮನವಿ ಮಾಡಿದರೆ ಕೆಲಸ ಮತ್ತಷ್ಟು ಸುಲಭವಾಗಲಿದೆ. ಆಗ ತಂಡ ಅಂದುಕೊಂಡಂತೆ ಪಾರ್ಲಿಮೆಂಟ್​ನಲ್ಲಿ ಶೂಟ್ ಮಾಡಬಹುದು. ಇಲ್ಲವಾದಲ್ಲಿ ಇದೇ ಮಾದರಿಯ ಸೆಟ್ ನಿರ್ಮಾಣ ಮಾಡಬೇಕಾಗುತ್ತದೆ. ಇದಕ್ಕೆ ದೊಡ್ಡ ಮೊತ್ತದ ಖರ್ಚಾಗುತ್ತದೆ.

‘ಆರ್​ಸಿ 16’ ಕಥೆ ದೆಹಲಿಯ ಜಮಾ ಮಸೀದಿಯಲ್ಲೂ ಸಾಗಲಿದೆ. ರಂಜಾನ್ ಪೂರ್ಣಗೊಂಡ ಬಳಿಕ ಈ ಭಾಗದಲ್ಲಿ ಶೂಟ್ ಮಾಡಲು ಅವಕಾಶ ಸಿಗೋ ಸಾಧ್ಯತೆ ಇದೆ. ಈ ಕಾರಣಕ್ಕೆ ಹಲವು ದಿನ ತಂಡ ದೆಹಲಿಯಲ್ಲಿ ಸೆಟಲ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?

‘ಆರ್​ಸಿ 16’ ಶೂಟಿಂಗ್ ಹೈದರಾಬಾದ್​ನಲ್ಲಿ ಸಾಗುತ್ತಿದೆ. ರಾಮ್ ಚರಣ್ ಅವರು ಇತ್ತೀಚೆಗೆ ‘ಗೇಮ್ ಚೇಂಜರ್’ ಸಿನಿಮಾದಲ್ಲಿ ಕಾಣಿಸಿಕೊಂಡರು. ಆದರೆ, ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ವಿಫಲವಾಗಿದೆ.  ಹೀಗಾಗಿ, ‘ಆರ್​ಸಿ 16’ ಚಿತ್ರದಿಂದ ಅವರಿಗೆ ಗೆಲುವು ಕಾಣಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:02 am, Mon, 3 March 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More