AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiva Rajkumar: ದೆಹಲಿ ಸಂಸತ್ತು ಹತ್ತಲಿದ್ದಾರೆ ಶಿವರಾಜ್​ಕುಮಾರ್; ಸಿಕ್ಕಿತು ಹೊಸ ಸುದ್ದಿ

ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದು, ರಾಮ್​ಚರಣ್ ಜೊತೆಗಿನ "RC16" ಚಿತ್ರದ ಶೂಟ್​ನಲ್ಲಿ ಭಾಗಿ ಆಗಲಿದ್ದಾರೆ. ದೆಹಲಿ ಪಾರ್ಲಿಮೆಂಟ್‌ನಲ್ಲಿನ ಚಿತ್ರದ ಶೂಟ್ ನಡೆಯಲಿದೆ. ಈ ಚಿತ್ರದ ಶೂಟಿಂಗ್‌ಗಾಗಿ ದೆಹಲಿಗೆ ತೆರಳುವುದರ ಜೊತೆಗೆ ಜಮಾ ಮಸೀದಿಯಲ್ಲಿಯೂ ಶೂಟಿಂಗ್ ನಡೆಯಲಿದೆ. ಪವನ್ ಕಲ್ಯಾಣ್ ಅವರ ಮಧ್ಯಸ್ಥಿಕೆಯಿಂದ ಪಾರ್ಲಿಮೆಂಟ್‌ನಲ್ಲಿ ಶೂಟಿಂಗ್‌ಗೆ ಅನುಮತಿ ಪಡೆಯುವ ಪ್ರಯತ್ನ ನಡೆಯುತ್ತಿದೆ.

Shiva Rajkumar: ದೆಹಲಿ ಸಂಸತ್ತು ಹತ್ತಲಿದ್ದಾರೆ ಶಿವರಾಜ್​ಕುಮಾರ್; ಸಿಕ್ಕಿತು ಹೊಸ ಸುದ್ದಿ
ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on:Mar 03, 2025 | 10:06 AM

Share

ಶಿವರಾಜ್​ಕುಮಾರ್ ಅವರು ಈಗಷ್ಟೇ ಕ್ಯಾನ್ಸರ್ ಮುಕ್ತರಾಗಿ ಮರಳಿದ್ದಾರೆ. ಒಂದು ತಿಂಗಳ ಕಾಲ ಅಮೆರಿಕದಲ್ಲಿ ಇದ್ದ ಅವರು ಈಗ ಚೇತರಿಕೆ ಕಂಡಿದ್ದಾರೆ. ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಮಧ್ಯೆ ಅವರು ದೆಹಲಿ ಪಾರ್ಲಿಮೆಂಟ್ ಏರುವ ಸುದ್ದಿಯೊಂದು ಹೊರ ಬಿದ್ದಿದೆ. ಹಾಗಂತ ಅವರು ಅವರು ಚುನಾವಣೆಗೆ ಸ್ಪರ್ಧಿಸಿ ಸಂಸದರಾಗುತ್ತಿಲ್ಲ. ಅವರು ದೆಹಲಿ ಪಾರ್ಲಿಮೆಂಟ್ ಏರುತ್ತಿರುವುದು ಸಿನಿಮಾ ಶೂಟ್​ಗಾಗಿ.

ರಾಮ್ ಚರಣ್ ಹಾಗೂ ಶಿವರಾಜ್​ಕುಮಾರ್ ‘ಆರ್​ಸಿ 16’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಬುಚಿ ಬಾಬು ನಿರ್ದೇಶನ ಇದೆ. ಈ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಚಿತ್ರದ ಕೆಲ ಭಾಗದ ಶೂಟ್ ಕೂಡ ಆಗಿದೆ. ಈ ವಾರ ಶಿವರಾಜ್​ಕುಮಾರ್ ಅವರು ಶೂಟ್​ನಲ್ಲಿ ಭಾಗಿ ಆಗಲಿದ್ದಾರೆ.

ದೆಹಲಿ ಪಾರ್ಲಿಮೆಂಟ್​ನಲ್ಲಿ ಕೆಲವು ದೃಶ್ಯಗಳನ್ನು ಶೂಟ್ ಮಾಡುವ ಆಲೋಚನೆ ತಂಡಕ್ಕೆ ಇದೆ. ಈ ದೃಶ್ಯದಲ್ಲಿ ಶಿವರಾಜ್​ಕುಮಾರ್ ಕೂಡ ಇರುತ್ತಾರೆ ಎಂದು ಹೇಳಲಾಗುತ್ತಿದೆ. ಈಗಿನ ಪರಿಸ್ಥಿತಿಯಲ್ಲಿ ಸಂಸತ್ತಿನಲ್ಲಿ ಶೂಟಿಂಗ್​ಗೆ ಅವಕಾಶ ಸಿಗೋದು ದೊಡ್ಡ ಚಾಲೆಂಜ್. ಇದಕ್ಕೂ ತಂಡ ಪ್ಲ್ಯಾನ್ ಮಾಡಿದೆ ಎನ್ನಲಾಗಿದೆ.

ಇದನ್ನೂ ಓದಿ
Image
ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?
Image
ಶಿವರಾಜ್​ಕುಮಾರ್​ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ DCM ಡಿಕೆ ಶಿವಕುಮಾರ್
Image
ಶಿವಣ್ಣನ ಆರೋಗ್ಯದ ಬಗ್ಗೆ ಬಾಲಿವುಡ್ ನಟ ಅಮಿತಾಭ್​ ಬಚ್ಚನ್​ಗೆ ಕಾಳಜಿ
Image
ಬೆಂಗಳೂರು ಬಿಟ್ಟು ಈ ಊರಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಶಿವಣ್ಣ

ರಾಮ್ ಚರಣ್ ಕುಟುಂಬದ ಪವನ್ ಕಲ್ಯಾಣ್ ಅವರು ಎನ್​ಡಿಎ ಜೊತೆ ಕೈ ಜೋಡಿಸಿದ್ದಾರೆ. ಹೀಗಾಗಿ, ಅವರು ಪ್ರಧಾನಿ ನರೇಂದ್ರ ಮೋದಿ ಬಳಿ ಈ ಬಗ್ಗೆ ಮನವಿ ಮಾಡಿದರೆ ಕೆಲಸ ಮತ್ತಷ್ಟು ಸುಲಭವಾಗಲಿದೆ. ಆಗ ತಂಡ ಅಂದುಕೊಂಡಂತೆ ಪಾರ್ಲಿಮೆಂಟ್​ನಲ್ಲಿ ಶೂಟ್ ಮಾಡಬಹುದು. ಇಲ್ಲವಾದಲ್ಲಿ ಇದೇ ಮಾದರಿಯ ಸೆಟ್ ನಿರ್ಮಾಣ ಮಾಡಬೇಕಾಗುತ್ತದೆ. ಇದಕ್ಕೆ ದೊಡ್ಡ ಮೊತ್ತದ ಖರ್ಚಾಗುತ್ತದೆ.

‘ಆರ್​ಸಿ 16’ ಕಥೆ ದೆಹಲಿಯ ಜಮಾ ಮಸೀದಿಯಲ್ಲೂ ಸಾಗಲಿದೆ. ರಂಜಾನ್ ಪೂರ್ಣಗೊಂಡ ಬಳಿಕ ಈ ಭಾಗದಲ್ಲಿ ಶೂಟ್ ಮಾಡಲು ಅವಕಾಶ ಸಿಗೋ ಸಾಧ್ಯತೆ ಇದೆ. ಈ ಕಾರಣಕ್ಕೆ ಹಲವು ದಿನ ತಂಡ ದೆಹಲಿಯಲ್ಲಿ ಸೆಟಲ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?

‘ಆರ್​ಸಿ 16’ ಶೂಟಿಂಗ್ ಹೈದರಾಬಾದ್​ನಲ್ಲಿ ಸಾಗುತ್ತಿದೆ. ರಾಮ್ ಚರಣ್ ಅವರು ಇತ್ತೀಚೆಗೆ ‘ಗೇಮ್ ಚೇಂಜರ್’ ಸಿನಿಮಾದಲ್ಲಿ ಕಾಣಿಸಿಕೊಂಡರು. ಆದರೆ, ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ವಿಫಲವಾಗಿದೆ.  ಹೀಗಾಗಿ, ‘ಆರ್​ಸಿ 16’ ಚಿತ್ರದಿಂದ ಅವರಿಗೆ ಗೆಲುವು ಕಾಣಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:02 am, Mon, 3 March 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ