AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiva Rajkumar: ದೆಹಲಿ ಸಂಸತ್ತು ಹತ್ತಲಿದ್ದಾರೆ ಶಿವರಾಜ್​ಕುಮಾರ್; ಸಿಕ್ಕಿತು ಹೊಸ ಸುದ್ದಿ

ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದು, ರಾಮ್​ಚರಣ್ ಜೊತೆಗಿನ "RC16" ಚಿತ್ರದ ಶೂಟ್​ನಲ್ಲಿ ಭಾಗಿ ಆಗಲಿದ್ದಾರೆ. ದೆಹಲಿ ಪಾರ್ಲಿಮೆಂಟ್‌ನಲ್ಲಿನ ಚಿತ್ರದ ಶೂಟ್ ನಡೆಯಲಿದೆ. ಈ ಚಿತ್ರದ ಶೂಟಿಂಗ್‌ಗಾಗಿ ದೆಹಲಿಗೆ ತೆರಳುವುದರ ಜೊತೆಗೆ ಜಮಾ ಮಸೀದಿಯಲ್ಲಿಯೂ ಶೂಟಿಂಗ್ ನಡೆಯಲಿದೆ. ಪವನ್ ಕಲ್ಯಾಣ್ ಅವರ ಮಧ್ಯಸ್ಥಿಕೆಯಿಂದ ಪಾರ್ಲಿಮೆಂಟ್‌ನಲ್ಲಿ ಶೂಟಿಂಗ್‌ಗೆ ಅನುಮತಿ ಪಡೆಯುವ ಪ್ರಯತ್ನ ನಡೆಯುತ್ತಿದೆ.

Shiva Rajkumar: ದೆಹಲಿ ಸಂಸತ್ತು ಹತ್ತಲಿದ್ದಾರೆ ಶಿವರಾಜ್​ಕುಮಾರ್; ಸಿಕ್ಕಿತು ಹೊಸ ಸುದ್ದಿ
ಶಿವಣ್ಣ
Follow us
ರಾಜೇಶ್ ದುಗ್ಗುಮನೆ
|

Updated on:Mar 03, 2025 | 10:06 AM

ಶಿವರಾಜ್​ಕುಮಾರ್ ಅವರು ಈಗಷ್ಟೇ ಕ್ಯಾನ್ಸರ್ ಮುಕ್ತರಾಗಿ ಮರಳಿದ್ದಾರೆ. ಒಂದು ತಿಂಗಳ ಕಾಲ ಅಮೆರಿಕದಲ್ಲಿ ಇದ್ದ ಅವರು ಈಗ ಚೇತರಿಕೆ ಕಂಡಿದ್ದಾರೆ. ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಮಧ್ಯೆ ಅವರು ದೆಹಲಿ ಪಾರ್ಲಿಮೆಂಟ್ ಏರುವ ಸುದ್ದಿಯೊಂದು ಹೊರ ಬಿದ್ದಿದೆ. ಹಾಗಂತ ಅವರು ಅವರು ಚುನಾವಣೆಗೆ ಸ್ಪರ್ಧಿಸಿ ಸಂಸದರಾಗುತ್ತಿಲ್ಲ. ಅವರು ದೆಹಲಿ ಪಾರ್ಲಿಮೆಂಟ್ ಏರುತ್ತಿರುವುದು ಸಿನಿಮಾ ಶೂಟ್​ಗಾಗಿ.

ರಾಮ್ ಚರಣ್ ಹಾಗೂ ಶಿವರಾಜ್​ಕುಮಾರ್ ‘ಆರ್​ಸಿ 16’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಬುಚಿ ಬಾಬು ನಿರ್ದೇಶನ ಇದೆ. ಈ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಚಿತ್ರದ ಕೆಲ ಭಾಗದ ಶೂಟ್ ಕೂಡ ಆಗಿದೆ. ಈ ವಾರ ಶಿವರಾಜ್​ಕುಮಾರ್ ಅವರು ಶೂಟ್​ನಲ್ಲಿ ಭಾಗಿ ಆಗಲಿದ್ದಾರೆ.

ದೆಹಲಿ ಪಾರ್ಲಿಮೆಂಟ್​ನಲ್ಲಿ ಕೆಲವು ದೃಶ್ಯಗಳನ್ನು ಶೂಟ್ ಮಾಡುವ ಆಲೋಚನೆ ತಂಡಕ್ಕೆ ಇದೆ. ಈ ದೃಶ್ಯದಲ್ಲಿ ಶಿವರಾಜ್​ಕುಮಾರ್ ಕೂಡ ಇರುತ್ತಾರೆ ಎಂದು ಹೇಳಲಾಗುತ್ತಿದೆ. ಈಗಿನ ಪರಿಸ್ಥಿತಿಯಲ್ಲಿ ಸಂಸತ್ತಿನಲ್ಲಿ ಶೂಟಿಂಗ್​ಗೆ ಅವಕಾಶ ಸಿಗೋದು ದೊಡ್ಡ ಚಾಲೆಂಜ್. ಇದಕ್ಕೂ ತಂಡ ಪ್ಲ್ಯಾನ್ ಮಾಡಿದೆ ಎನ್ನಲಾಗಿದೆ.

ಇದನ್ನೂ ಓದಿ
Image
ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?
Image
ಶಿವರಾಜ್​ಕುಮಾರ್​ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ DCM ಡಿಕೆ ಶಿವಕುಮಾರ್
Image
ಶಿವಣ್ಣನ ಆರೋಗ್ಯದ ಬಗ್ಗೆ ಬಾಲಿವುಡ್ ನಟ ಅಮಿತಾಭ್​ ಬಚ್ಚನ್​ಗೆ ಕಾಳಜಿ
Image
ಬೆಂಗಳೂರು ಬಿಟ್ಟು ಈ ಊರಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಶಿವಣ್ಣ

ರಾಮ್ ಚರಣ್ ಕುಟುಂಬದ ಪವನ್ ಕಲ್ಯಾಣ್ ಅವರು ಎನ್​ಡಿಎ ಜೊತೆ ಕೈ ಜೋಡಿಸಿದ್ದಾರೆ. ಹೀಗಾಗಿ, ಅವರು ಪ್ರಧಾನಿ ನರೇಂದ್ರ ಮೋದಿ ಬಳಿ ಈ ಬಗ್ಗೆ ಮನವಿ ಮಾಡಿದರೆ ಕೆಲಸ ಮತ್ತಷ್ಟು ಸುಲಭವಾಗಲಿದೆ. ಆಗ ತಂಡ ಅಂದುಕೊಂಡಂತೆ ಪಾರ್ಲಿಮೆಂಟ್​ನಲ್ಲಿ ಶೂಟ್ ಮಾಡಬಹುದು. ಇಲ್ಲವಾದಲ್ಲಿ ಇದೇ ಮಾದರಿಯ ಸೆಟ್ ನಿರ್ಮಾಣ ಮಾಡಬೇಕಾಗುತ್ತದೆ. ಇದಕ್ಕೆ ದೊಡ್ಡ ಮೊತ್ತದ ಖರ್ಚಾಗುತ್ತದೆ.

‘ಆರ್​ಸಿ 16’ ಕಥೆ ದೆಹಲಿಯ ಜಮಾ ಮಸೀದಿಯಲ್ಲೂ ಸಾಗಲಿದೆ. ರಂಜಾನ್ ಪೂರ್ಣಗೊಂಡ ಬಳಿಕ ಈ ಭಾಗದಲ್ಲಿ ಶೂಟ್ ಮಾಡಲು ಅವಕಾಶ ಸಿಗೋ ಸಾಧ್ಯತೆ ಇದೆ. ಈ ಕಾರಣಕ್ಕೆ ಹಲವು ದಿನ ತಂಡ ದೆಹಲಿಯಲ್ಲಿ ಸೆಟಲ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?

‘ಆರ್​ಸಿ 16’ ಶೂಟಿಂಗ್ ಹೈದರಾಬಾದ್​ನಲ್ಲಿ ಸಾಗುತ್ತಿದೆ. ರಾಮ್ ಚರಣ್ ಅವರು ಇತ್ತೀಚೆಗೆ ‘ಗೇಮ್ ಚೇಂಜರ್’ ಸಿನಿಮಾದಲ್ಲಿ ಕಾಣಿಸಿಕೊಂಡರು. ಆದರೆ, ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ವಿಫಲವಾಗಿದೆ.  ಹೀಗಾಗಿ, ‘ಆರ್​ಸಿ 16’ ಚಿತ್ರದಿಂದ ಅವರಿಗೆ ಗೆಲುವು ಕಾಣಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:02 am, Mon, 3 March 25

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ