AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ‘ಅದ್ಭುತ..’- ಕೆಜಿಎಫ್ ಚಾಪ್ಟರ್ 2 ನೋಡಿ ಹಾಡಿಹೊಗಳಿದ ರಾಮ್​ ಚರಣ್; ಪ್ರಭಾಸ್ ಹೇಳಿದ್ದೇನು?

Yash | Ram Charan | Prabhas: ‘ಆರ್​ಆರ್​ಆರ್​’ ನಾಯಕ ನಟರಲ್ಲಿ ಒಬ್ಬರಾದ ರಾಮ್ ಚರಣ್ ಟ್ವೀಟ್ ಮಾಡಿ, ಕೆಜಿಎಫ್ ಚಾಪ್ಟರ್ 2 ಯಶಸ್ಸಿಗೆ ಚಿತ್ರತಂಡಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ನಾಯಕ ನಟ ಯಶ್ ಅವರ ಅಭಿನಯಕ್ಕೆ ಫಿದಾ ಆಗಿರುವ ರಾಮ್ ಚರಣ್, ‘ಅದ್ಭುತ’ ಎಂದು ಉದ್ಗರಿಸಿದ್ದಾರೆ.

KGF Chapter 2: ‘ಅದ್ಭುತ..’- ಕೆಜಿಎಫ್ ಚಾಪ್ಟರ್ 2 ನೋಡಿ ಹಾಡಿಹೊಗಳಿದ ರಾಮ್​ ಚರಣ್; ಪ್ರಭಾಸ್ ಹೇಳಿದ್ದೇನು?
ರಾಮ್ ಚರಣ್, ಯಶ್, ಪ್ರಭಾಸ್
TV9 Web
| Edited By: |

Updated on:Apr 23, 2022 | 4:42 PM

Share

ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ ಚಾಪ್ಟರ್ 2’ (KGF Chapter 2) ಚಿತ್ರಕ್ಕೆ ಎಲ್ಲೆಡೆಯಿಂದ ಅತ್ಯುತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಪರಿಣಾಮವಾಗಿ ಚಿತ್ರದ ಕಲೆಕ್ಷನ್ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಎರಡನೇ ವೀಕೆಂಡ್​ನಲ್ಲಿಯೂ ಚಿತ್ರದ ಗಳಿಕೆ ಜೋರಾಗಿದ್ದು, ಹಲವು ಮೈಲಿಗಲ್ಲುಗಳನ್ನು ಸೃಷ್ಟಿಸುವ ನಿರೀಕ್ಷೆ ಇದೆ. ಯಶ್, ಸಂಜಯ್ ದತ್, ರವೀನಾ ಟಂಡನ್ ಮೊದಲಾದ ತಾರೆಯರ ಪಾತ್ರಪೋಷಣೆಗೆ ಬೇರೆ ಚಿತ್ರರಂಗದ ತಾರೆಯರೂ ಫಿದಾ ಆಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ, ಚಿತ್ರವನ್ನು ವೀಕ್ಷಿಸಿ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಅಲ್ಲು ಅರ್ಜುನ್ ಚಿತ್ರತಂಡಕ್ಕೆ ಶಹಬ್ಬಾಸ್​ಗಿರಿ ನೀಡಿದ್ದರು. ಇದೀಗ ಪ್ರಭಾಸ್ (Prabhas) ಹಾಗೂ ರಾಮ್​ ಚರಣ್ (Ram Charan) ಸರದಿ. ‘ಆರ್​ಆರ್​ಆರ್​’ ನಾಯಕ ನಟರಲ್ಲಿ ಒಬ್ಬರಾದ ರಾಮ್ ಚರಣ್ ಟ್ವೀಟ್ ಮಾಡಿ, ಕೆಜಿಎಫ್ ಚಾಪ್ಟರ್ 2 ಯಶಸ್ಸಿಗೆ ಚಿತ್ರತಂಡಕ್ಕೆ ಅಭಿನಂದನೆಗಳು ಎಂದಿದ್ದಾರೆ. ನಾಯಕ ನಟ ಯಶ್ (Yash) ಅವರ ಅಭಿನಯಕ್ಕೆ ಫಿದಾ ಆಗಿರುವ ರಾಮ್ ಚರಣ್, ‘ಅದ್ಭುತ’ ಎಂದು ಉದ್ಗರಿಸಿದ್ದಾರೆ. ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ, ಅರ್ಚನಾ ಜೋಯಿಸ್ ಸೇರಿದಂತೆ ಕಲಾವಿದರ ನಟನೆಯನ್ನು ಹೊಗಳಿರುವ ರಾಮ್ ಚರಣ್, ರವಿ ಬಸ್ರೂರು ಸಂಗೀತಕ್ಕೂ ಶಹಬ್ಬಾಸ್ ಎಂದಿದ್ದಾರೆ.

ರಾಮ್​ ಚರಣ್ ಹಂಚಿಕೊಂಡ ಟ್ವೀಟ್ ಇಲ್ಲಿದೆ:

‘ಕೆಜಿಎಫ್ ಚಾಪ್ಟರ್ 2’ ನೋಡಿ ಪ್ರಭಾಸ್ ಹೇಳಿದ್ದೇನು?

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಿರ್ದೇಶಕ ಪ್ರಶಾಂತ್ ನೀಲ್ ಜತೆ ‘ಸಲಾರ್’ ಚಿತ್ರವನ್ನು ಮಾಡುತ್ತಿದ್ದಾರೆ. ಈ ಹಿಂದೆಯೇ ‘ಕೆಜಿಎಫ್ 2’ ಬಗ್ಗೆ ನಟ ಮಾತನಾಡಿದ್ದರು. ಇದೀಗ ಪ್ರಭಾಸ್, ಚಿತ್ರ ಸೂಪರ್ ಹಿಟ್ ಆಗಿದ್ದಕ್ಕೆ ಯಶ್, ಪ್ರಶಾಂತ್ ನೀಲ್ ಹಾಗೂ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್​ಗೆ ಅಭಿನಂದನೆ ಹೇಳಿದ್ದಾರೆ.

ಪ್ರಭಾಸ್ ಹಂಚಿಕೊಂಡಿರುವ ಸ್ಟೋರಿ ಇಲ್ಲಿದೆ:

Prabhas on KGF Chapter 2

‘ಕೆಜಿಎಫ್ ಚಾಪ್ಟರ್ 2’ ಬಗ್ಗೆ ಪ್ರಭಾಸ್ ಹೇಳಿದ್ದಿದು

‘ಕೆಜಿಎಫ್ ಚಾಪ್ಟರ್ 2’ ಹೊಗಳಿದ್ದ ಅಲ್ಲು ಅರ್ಜುನ್:

ಈ ಹಿಂದೆ ಅಲ್ಲು ಅರ್ಜುನ್ ಚಿತ್ರತಂಡವನ್ನು ಹೊಗಳಿದ್ದರು. ಅವರು ತಮ್ಮ ಟ್ವೀಟ್​ನಲ್ಲಿ, ‘ಕೆಜಿಎಫ್ 2’ ತಂಡಕ್ಕೆ ಶುಭಾಶಯ. ಯಶ್ ಅವರ ಅಭಿನಯ ಅದ್ಭುತವಾಗಿದೆ. ಸಂಜಯ್ ದತ್,​ ರವೀನಾ ಟಂಡನ್​, ಶ್ರೀನಿಧಿ ಶೆಟ್ಟಿ ಹಾಗೂ ಎಲ್ಲಾ ಕಲಾವಿದರ ನಟನೆ ಉತ್ತಮವಾಗಿದೆ. ರವಿ ಬಸ್ರೂರು ಅವರ ಹಿನ್ನೆಲೆ ಸಂಗೀತ, ಭುವನ್ ಗೌಡ ಅವರ ಛಾಯಾಗ್ರಹಣ ಔಟ್​ಸ್ಟ್ಯಾಂಡಿಂಗ್. ಎಲ್ಲಾ ತಂತ್ರಜ್ಞರಿಗೆ ನನ್ನ ಗೌರವ’ ಎಂದು ಬರೆದುಕೊಂಡಿದ್ದರು.

ನಿರ್ದೇಶಕ ಪ್ರಶಾಂತ್ ನೀಲ್ ಶ್ರಮವನ್ನು ಶ್ಲಾಘಿಸಿದ್ದ ಅಲ್ಲು ಅರ್ಜುನ್, ‘‘ಪ್ರಶಾಂತ್ ನೀಲ್ ಅವರದ್ದು ಅದ್ಭುತ ಪ್ರದರ್ಶನ. ಅವರ ಆಲೋಚನೆಗೆ ನನ್ನದೊಂದು ಗೌರವ. ಭಾರತದ ಚಿತ್ರರಂಗವನ್ನು ಮತ್ತೊಂದು ಎತ್ತರಕ್ಕೆ ಕೊಂಡೊಯ್ದಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು’ ಎಂದಿದ್ದರು.

ಇದನ್ನೂ ಓದಿ: ‘ಕೆಜಿಎಫ್ 2’ ಸಿನಿಮಾ ನೋಡಿ ಭೇಷ್ ಎಂದ ಅಲ್ಲು ಅರ್ಜುನ್; ಯಶ್ ಪರ್ಫಾರ್ಮೆನ್ಸ್​​ಗೆ ಸ್ಟೈಲಿಶ್ ಸ್ಟಾರ್ ಫಿದಾ

ಪ್ರಶಾಂತ್​ ನೀಲ್​ರನ್ನು ‘ನನ್ನ ನಿರ್ದೇಶಕ’ ಎಂದು ಕರೆದ ನಟ ಪ್ರಭಾಸ್

Published On - 4:39 pm, Sat, 23 April 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?