AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದಲ್ಲಿ ರಾಮ್​ ಚರಣ್​ ಪತ್ನಿ ಉಪಾಸನಾ; ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ

ಉಪಾಸನಾ ಅವರು ನಟ ರಾಮ್​ ಚರಣ್​ ಪತ್ನಿ, ಅಪೋಲೋ ಫೌಂಡೇಷನ್​ನ ಉಪಾಧ್ಯಕ್ಷೆ, ಬಿ ಪಾಸಿಟಿವ್​ ಮ್ಯಾಗಜಿನ್​ನ ಎಡಿಟರ್​. ಅವರು ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ.

ವಿವಾದದಲ್ಲಿ ರಾಮ್​ ಚರಣ್​ ಪತ್ನಿ ಉಪಾಸನಾ; ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ
ಉಪಾಸನಾ
TV9 Web
| Edited By: |

Updated on: Jan 27, 2022 | 2:22 PM

Share

ವೈಯಕ್ತಿಕ ಅಭಿಪ್ರಾಯ ಹಂಚಿಕೊಳ್ಳುವಾಗ ತುಂಬಾನೇ ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ ಇತ್ತೀಚಿನ ವರ್ಷಗಳಲ್ಲಿ ಸೋಶಿಯಲ್​ ಮೀಡಿಯಾ ಸಾಕಷ್ಟು ಸ್ಟ್ರಾಂಗ್​ ಆಗಿರುವುದರಿಂದ ಟ್ರೋಲ್​ ಆಗಲು, ಟೀಕೆಗೆ ಒಳಗಾಗಲು ಹೆಚ್ಚು ಸಮಯ ಬೇಡ. ಅದೇ ರೀತಿ ಈಗ ರಾಮ್​ ಚರಣ್ (Ram Charan) ಪತ್ನಿ​ ಉಪಾಸನಾ (Ram Charan wife Upasana ) ಅವರು ವಿವಾದ ಒಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಜನವರಿ 26ರ ಪೋಸ್ಟ್​ ಹಾಕುವ ಭರದಲ್ಲಿ ಅವರು ವಿವಾದವೊಂದನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಸದ್ಯ, ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.  

ಉಪಾಸನಾ ಅವರು ನಟ ರಾಮ್​ ಚರಣ್​ ಪತ್ನಿ, ಅಪೋಲೋ ಫೌಂಡೇಷನ್​ನ ಉಪಾಧ್ಯಕ್ಷೆ, ಬಿ ಪಾಸಿಟಿವ್​ ಮ್ಯಾಗಜಿನ್​ನ ಎಡಿಟರ್​. ಅವರು ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ಸೋಶಿಯಲ್​ ವರ್ಕ್​ಗೆ ಸಾಕಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ. ಆದರೆ, ಈಗ ಸೋಶಿಯಲ್​ ಮೀಡಿಯಾದಲ್ಲಿ ಹಾಕಿದ ಪೋಸ್ಟ್ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ದೇವಸ್ಥಾನದ ಗೋಪುರದ ಫೋಟೋವನ್ನು ಅವರು ಪೋಸ್ಟ್ ಮಾಡಿದ್ದಾರೆ. ಗೋಪುರದ ಮೇಲೆ ದೇವರ ಬದಲು ಜನರಿದ್ದಾರೆ. ಇದು ಎಡಿಟ್​ ಮಾಡಲಾದ ಫೋಟೋ. ಈ ಪೋಸ್ಟ್ ಇಷ್ಟಪಟ್ಟಿರುವ ಅವರು ಅದಕ್ಕೆ ಕ್ಯಾಪ್ಶನ್​ ನೀಡಿದ್ದಾರೆ. ‘ಪ್ರಗತಿಪರ, ಸಹಿಷ್ಣು ರಾಷ್ಟ್ರವನ್ನು ನಿರ್ಮಿಸಲು ಒಟ್ಟಾಗಿ ತೊಡಗೋಣ. ನನ್ನ ತಾಯಿ ಈ ಫೋಟೋ ಕಳಿಸಿದ್ದರು. ನನಗೆ ಇದು ಇಷ್ಟವಾಯಿತು. ಇದನ್ನು ಮಾಡಿದವರಿಗೆ ನಾನು ಮೆಚ್ಚುಗೆ ವ್ಯಕ್ತಪಡಿಸಬೇಕು’ ಎಂದು ಬರೆದುಕೊಂಡಿದ್ದಾರೆ ಅವರು.

ಒಂದು ವರ್ಗದ ಜನರು ಅವರ ಮಾತನ್ನು ಮೆಚ್ಚಿಕೊಂಡಿದ್ದಾರೆ. ಇನ್ನೂ ಕೆಲವರು ಉಪಾಸನಾ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಬರೆದುಕೊಂಡಿದ್ದಾರೆ. ‘ಹಿಂದೂಗಳ ದೇವಸ್ಥಾನಕ್ಕೆ ಈ ರೀತಿ ಮಾಡಿದ್ದರ ಬಗ್ಗೆ ಸಂತಸ ವ್ಯಕ್ತಪಡಿಸಿದ್ದೀರಿ. ಬೇರೆ ಧರ್ಮದವರ ಪುಣ್ಯಕ್ಷೇತ್ರಗಳ ಮೇಲೂ ಇದೇ ರೀತಿ ಮಾಡಿ, ಅದನ್ನು ಪೋಸ್ಟ್ ಮಾಡುವ ಧೈರ್ಯ ಇದೆಯೇ’ ಎಂದು ಕೆಲವರು ಪ್ರಶ್ನಿಸಿದ್ದಾರೆ. ‘ನಮ್ಮ ಸಂಸ್ಕೃತಿ ಬಗ್ಗೆ ಕೊಂಚವಾದರೂ ಗೌರವ ಕೊಡಿ. ಇದನ್ನು ನಾವು ಒಪ್ಪುವುದಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಈ ಬಗ್ಗೆ ಉಪಾಸನಾ ಅವರು ಯಾವುದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿಲ್ಲ. ಅವರಿಂದ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕಳೆದ ವರ್ಷ ಉಪಾಸನಾ ಹೈದರಾಬಾದ್​ನ ಝೂನಿಂದ ಸಿಂಹಗಳನ್ನು ದತ್ತು ಪಡೆದಿದ್ದರು. ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹಗಳನ್ನು ಇವರು ದತ್ತು ಪಡೆದಿದ್ದರು. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ತೆಗೆದುಕೊಂಡಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್​ಅನ್ನು ನೀಡಿದ್ದರು. ಕೊವಿಡ್ ತಂದ ಅನಿಶ್ಚಿತತೆಯಿಂದ ಸಾಕಷ್ಟು ಝೂಗಳು ಸಂಕಷ್ಟಕ್ಕೆ ಸಿಲುಕಿವೆ. ಯಾವುದೇ ಪ್ರವಾಸಿಗರು ಬರದೆ ಝೂನಲ್ಲಿರುವ ಪ್ರಾಣಿಗಳನ್ನು ನೋಡಿಕೊಳ್ಳುವುದು ಕಷ್ಟವಾಗಿದೆ.

ಇದನ್ನೂ ಓದಿ: ‘ನಾನು ದೊಡ್ಡವನಾದ್ಮೇಲೆ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ರೀತಿ ಡ್ಯಾನ್ಸ್​ ಮಾಡ್ತೀನಿ’: ಸಲ್ಮಾನ್​ ಖಾನ್​

‘RRR’ ಚಿತ್ರದ ವೇಳೆ ರಾಮ್​ ಚರಣ್​ಗೆ ಸಿಕ್ಕಿದ್ರಂತೆ ಹೊಸ ಸಹೋದರ; ಯಾರದು?

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!