AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್​​​ಗೆ ಹೊಸ ಬಾಡಿಗಾರ್ಡ್?

ರಾಮ್ ಚರಣ್ ಅವರ ಹೊಸ ಬಾಡಿಗಾರ್ಡ್ ಕೆವಿನ್ ಕುಂಟಾ ಸುದ್ದಿ ಆದ ಬೆನ್ನಲ್ಲೇ, ಕಿಚ್ಚ ಸುದೀಪ್ ಜೊತೆ ವಿದೇಶಿ ಅಂಗರಕ್ಷಕರೊಬ್ಬರು ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಹಲವು ವರ್ಷಗಳಿಂದ ಸುದೀಪ್ ಜೊತೆಗಿರುವ ಕಿರಣ್ ಹೊರತಾಗಿ, ಈ ಎತ್ತರದ ವ್ಯಕ್ತಿ ಯಾರು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಇಂದಿಗಷ್ಟೇ ಅವರ ಭದ್ರತೆಗೆ ಬಂದಿದ್ದಾರೋ ಅಥವಾ ಸುದೀಪ್ ಅವರ ಹೊಸ ಅಂಗರಕ್ಷಕರೋ ಎಂಬ ಕುತೂಹಲವಿದೆ.

ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್​​​ಗೆ ಹೊಸ ಬಾಡಿಗಾರ್ಡ್?
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jun 05, 2026 | 12:42 PM

Share

ರಾಮ್ ಚರಣ್ ಅವರು ಇತ್ತೀಚೆಗೆ ತಮ್ಮ ಬಾಡಿಗಾರ್ಡ್ ಕಾರಣಕ್ಕೆ ಸುದ್ದಿ ಆಗಿದ್ದಾರೆ. ‘ಪೆದ್ದಿ’ ಸಿನಿಮಾದ ಪ್ರಚಾರದ ವೇಳೆ ರಾಮ್ ಚರಣ್ ಅವರ ಜೊತೆಗಿರುವ ಬಾಡಿಗಾರ್ಡ್ ಕೆವಿನ್ ಕುಂಟಾ ಕೂಡ ಎಲ್ಲರ ಗಮನ ಸೆಳೆದಿದ್ದಾರೆ. ರಾಮ್ ಚರಣ್ ನೇಮಕ ಮಾಡಿಕೊಂಡ ಹೊಸ ಬಾಡಿಗಾರ್ಡ್ ಇವರು ಎನ್ನಲಾಗುತ್ತಿದೆ. ಹೀಗಿರುವಾಗಲೇ ಕಿಚ್ಚ ಸುದೀಪ್ ಹಿಂಭಾಗದಲ್ಲೂ ಓರ್ವ ಬಾಡಿಗಾರ್ಡ್ ಕಾಣಿಸಿದ್ದಾರೆ. ಇವರು ಕಿಚ್ಚನ (Kichcha) ಹೊಸ ಬಾಡಿಗಾರ್ಡ್ ಇರಬಹುದೇ ಎಂಬ ಪ್ರಶ್ನೆ ಮೂಡಿದೆ.

ಕಿಚ್ಚ ಸುದೀಪ್ ಅವರ ಈಗಿರುವ ವೈಯಕ್ತಿಕ ಬಾಡಿಗಾರ್ಡ್ ಹೆಸರು ಕಿಚ್ಚ ಕಿರಣ್. ಅವರು ಹಲವು ವರ್ಷಗಳಿಂದ ಸುದೀಪ್ ಜೊತೆ ಇದ್ದಾರೆ. ಸಾರ್ವಜನಿಕವಾಗಿ ಸೇರಿದಾಗ ಅಭಿಮಾನಿಗಳಿಂದ ಸುದೀಪ್ ಅವರನ್ನು ರಕ್ಷಣೆ ಮಾಡುವ ಕೆಲಸ ಇವರದ್ದು. ಈಗ ಸುದೀಪ್ ಜೊತೆ ವಿದೇಶಿ ವ್ಯಕ್ತಿಯೋರ್ವ ಕಾಣಿಸಿಕೊಂಡಿದ್ದಾರೆ. ಇದು ಅಚ್ಚರಿ ಮೂಡಿಸಿದೆ.

ಸುದೀಪ್ ಅಳಿಯ ಸಂಜಿತ್ ಸಂಜೀವ್ ನಟನೆಯ ‘ಮ್ಯಾಂಗೋ ಪಚ್ಚ’ ಸಿನಿಮಾ ಇಂದು ರಿಲೀಸ್ ಆಗಿದೆ. ಈ ಸಿನಿಮಾದ ಶೋ ನೋಡಲು ಸುದೀಪ್ ಅವರು ಬೆಂಗಳೂರಿನ ಸಂತೋಷ್ ಥಿಯೇಟರ್​​ಗೆ ಕುಟುಂಬ ಸಮೇತವಾಗಿ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಸುದೀಪ್ ರಕ್ಷಣೆಗೆ ವಿದೇಶಿ ವ್ಯಕ್ತಿಯೊಬ್ಬರು ಕಾಣಿಸಿಕೊಂಡಿದ್ದಾರೆ. ಸುದೀಪ್ ಅವರು 6.1 ಅಡಿ ಎತ್ತರ ಇದ್ದಾರೆ. ಅವರ ಬಾಡಿಗಾರ್ಡ್ ಸುದೀಪ್​ಗೂ ಎತ್ತರ ಇದ್ದಾರೆ ಅನ್ನೋದು ವಿಶೇಷ. ಇವರ ಹೆಸರೇನು? ಇಂದಿಗೆ ಮಾತ್ರ ಸುದೀಪ್ ರಕ್ಷಣೆಗೆ ಅವರು ಬಂದರೇ ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ಇನ್ನಷ್ಟೇ ಸಿಗಬೇಕಿದೆ.

ಇದನ್ನೂ ಓದಿ: ‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚನಿಗೆ ನೀಡಲಾಗಿದೆ ಟ್ರಿಬ್ಯೂಟ್; ಇದು ಪ್ರಿಯಾ ಸುದೀಪ್ ಸರ್ಪ್ರೈಸ್

ಸುದೀಪ್ ಅವರು ‘ಮಾರ್ಕ್’ ಸಿನಿಮಾ ಬಳಿಕ ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಅವರ ನಟನೆಯ ‘ಬಿಲ್ಲ ರಂಗ ಭಾಷ’ ಚಿತ್ರದ ಕೆಲ ಭಾಗದ ಶೂಟ್ ನಡೆದಿದ್ದು, ಈ ಬಗ್ಗೆ ಇನ್ನಷ್ಟೇ ಅಪ್​​​ಡೇಟ್ ಸಿಗಬೇಕಿದೆ. ಶೀಘ್ರವೇ ಬಿಗ್ ಬಾಸ್ ಕೂಡ ಆರಂಭ ಆಗಲಿದೆ. ಇದನ್ನು ಸುದೀಪ್ ಹೋಸ್ಟ್ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ