AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್​​​ಗೆ ಹೊಸ ಬಾಡಿಗಾರ್ಡ್?

ರಾಮ್ ಚರಣ್ ಅವರ ಹೊಸ ಬಾಡಿಗಾರ್ಡ್ ಕೆವಿನ್ ಕುಂಟಾ ಸುದ್ದಿ ಆದ ಬೆನ್ನಲ್ಲೇ, ಕಿಚ್ಚ ಸುದೀಪ್ ಜೊತೆ ವಿದೇಶಿ ಅಂಗರಕ್ಷಕರೊಬ್ಬರು ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಹಲವು ವರ್ಷಗಳಿಂದ ಸುದೀಪ್ ಜೊತೆಗಿರುವ ಕಿರಣ್ ಹೊರತಾಗಿ, ಈ ಎತ್ತರದ ವ್ಯಕ್ತಿ ಯಾರು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಇಂದಿಗಷ್ಟೇ ಅವರ ಭದ್ರತೆಗೆ ಬಂದಿದ್ದಾರೋ ಅಥವಾ ಸುದೀಪ್ ಅವರ ಹೊಸ ಅಂಗರಕ್ಷಕರೋ ಎಂಬ ಕುತೂಹಲವಿದೆ.

ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್​​​ಗೆ ಹೊಸ ಬಾಡಿಗಾರ್ಡ್?
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jun 05, 2026 | 12:42 PM

Share

ರಾಮ್ ಚರಣ್ ಅವರು ಇತ್ತೀಚೆಗೆ ತಮ್ಮ ಬಾಡಿಗಾರ್ಡ್ ಕಾರಣಕ್ಕೆ ಸುದ್ದಿ ಆಗಿದ್ದಾರೆ. ‘ಪೆದ್ದಿ’ ಸಿನಿಮಾದ ಪ್ರಚಾರದ ವೇಳೆ ರಾಮ್ ಚರಣ್ ಅವರ ಜೊತೆಗಿರುವ ಬಾಡಿಗಾರ್ಡ್ ಕೆವಿನ್ ಕುಂಟಾ ಕೂಡ ಎಲ್ಲರ ಗಮನ ಸೆಳೆದಿದ್ದಾರೆ. ರಾಮ್ ಚರಣ್ ನೇಮಕ ಮಾಡಿಕೊಂಡ ಹೊಸ ಬಾಡಿಗಾರ್ಡ್ ಇವರು ಎನ್ನಲಾಗುತ್ತಿದೆ. ಹೀಗಿರುವಾಗಲೇ ಕಿಚ್ಚ ಸುದೀಪ್ ಹಿಂಭಾಗದಲ್ಲೂ ಓರ್ವ ಬಾಡಿಗಾರ್ಡ್ ಕಾಣಿಸಿದ್ದಾರೆ. ಇವರು ಕಿಚ್ಚನ (Kichcha) ಹೊಸ ಬಾಡಿಗಾರ್ಡ್ ಇರಬಹುದೇ ಎಂಬ ಪ್ರಶ್ನೆ ಮೂಡಿದೆ.

ಕಿಚ್ಚ ಸುದೀಪ್ ಅವರ ಈಗಿರುವ ವೈಯಕ್ತಿಕ ಬಾಡಿಗಾರ್ಡ್ ಹೆಸರು ಕಿಚ್ಚ ಕಿರಣ್. ಅವರು ಹಲವು ವರ್ಷಗಳಿಂದ ಸುದೀಪ್ ಜೊತೆ ಇದ್ದಾರೆ. ಸಾರ್ವಜನಿಕವಾಗಿ ಸೇರಿದಾಗ ಅಭಿಮಾನಿಗಳಿಂದ ಸುದೀಪ್ ಅವರನ್ನು ರಕ್ಷಣೆ ಮಾಡುವ ಕೆಲಸ ಇವರದ್ದು. ಈಗ ಸುದೀಪ್ ಜೊತೆ ವಿದೇಶಿ ವ್ಯಕ್ತಿಯೋರ್ವ ಕಾಣಿಸಿಕೊಂಡಿದ್ದಾರೆ. ಇದು ಅಚ್ಚರಿ ಮೂಡಿಸಿದೆ.

ಸುದೀಪ್ ಅಳಿಯ ಸಂಜಿತ್ ಸಂಜೀವ್ ನಟನೆಯ ‘ಮ್ಯಾಂಗೋ ಪಚ್ಚ’ ಸಿನಿಮಾ ಇಂದು ರಿಲೀಸ್ ಆಗಿದೆ. ಈ ಸಿನಿಮಾದ ಶೋ ನೋಡಲು ಸುದೀಪ್ ಅವರು ಬೆಂಗಳೂರಿನ ಸಂತೋಷ್ ಥಿಯೇಟರ್​​ಗೆ ಕುಟುಂಬ ಸಮೇತವಾಗಿ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಸುದೀಪ್ ರಕ್ಷಣೆಗೆ ವಿದೇಶಿ ವ್ಯಕ್ತಿಯೊಬ್ಬರು ಕಾಣಿಸಿಕೊಂಡಿದ್ದಾರೆ. ಸುದೀಪ್ ಅವರು 6.1 ಅಡಿ ಎತ್ತರ ಇದ್ದಾರೆ. ಅವರ ಬಾಡಿಗಾರ್ಡ್ ಸುದೀಪ್​ಗೂ ಎತ್ತರ ಇದ್ದಾರೆ ಅನ್ನೋದು ವಿಶೇಷ. ಇವರ ಹೆಸರೇನು? ಇಂದಿಗೆ ಮಾತ್ರ ಸುದೀಪ್ ರಕ್ಷಣೆಗೆ ಅವರು ಬಂದರೇ ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ಇನ್ನಷ್ಟೇ ಸಿಗಬೇಕಿದೆ.

ಇದನ್ನೂ ಓದಿ: ‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚನಿಗೆ ನೀಡಲಾಗಿದೆ ಟ್ರಿಬ್ಯೂಟ್; ಇದು ಪ್ರಿಯಾ ಸುದೀಪ್ ಸರ್ಪ್ರೈಸ್

ಸುದೀಪ್ ಅವರು ‘ಮಾರ್ಕ್’ ಸಿನಿಮಾ ಬಳಿಕ ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಅವರ ನಟನೆಯ ‘ಬಿಲ್ಲ ರಂಗ ಭಾಷ’ ಚಿತ್ರದ ಕೆಲ ಭಾಗದ ಶೂಟ್ ನಡೆದಿದ್ದು, ಈ ಬಗ್ಗೆ ಇನ್ನಷ್ಟೇ ಅಪ್​​​ಡೇಟ್ ಸಿಗಬೇಕಿದೆ. ಶೀಘ್ರವೇ ಬಿಗ್ ಬಾಸ್ ಕೂಡ ಆರಂಭ ಆಗಲಿದೆ. ಇದನ್ನು ಸುದೀಪ್ ಹೋಸ್ಟ್ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ