AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ವಾನದ ಮೇಲೆ ಆನೆ ದಾಳಿ ಮಾಡಿದಂತೆ’; ದರ್ಶನ್ ಪ್ರಕರಣದಲ್ಲಿ ಅಭಿಪ್ರಾಯ ಹಂಚಿಕೊಂಡ ಖ್ಯಾತ ನಿರ್ದೇಶಕ

ರಾಮ್ ಗೋಪಾಲ್ ವರ್ಮಾ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅನೇಕ ಪ್ರಕರಣಗಳ ಬಗ್ಗೆ ಅವರು ಮಾತನಾಡುತ್ತಾರೆ. ಇತ್ತೀಚೆಗೆ ಅವರು ದರ್ಶನ್ ವಿರುದ್ಧ ಧ್ವನಿ ಎತ್ತಿದ್ದರು. ಇದು ಸರಿ ಅಲ್ಲ ಎಂದಿದ್ದರು. ಈಗ ಅವರು ಮತ್ತೊಮ್ಮೆ ಇದೇ ವಿಚಾರದ ಬಗ್ಗೆ ಮಾತನಾಡಿದ್ದಾರೆ.

‘ಶ್ವಾನದ ಮೇಲೆ ಆನೆ ದಾಳಿ ಮಾಡಿದಂತೆ’; ದರ್ಶನ್ ಪ್ರಕರಣದಲ್ಲಿ ಅಭಿಪ್ರಾಯ ಹಂಚಿಕೊಂಡ ಖ್ಯಾತ ನಿರ್ದೇಶಕ
‘ಶ್ವಾನದ ಮೇಲೆ ಆನೆ ದಾಳಿ ಮಾಡಿದಂತೆ’; ದರ್ಶನ್ ಪ್ರಕರಣದಲ್ಲಿ ಅಭಿಪ್ರಾಯ ಹಂಚಿಕೊಂಡ ಖ್ಯಾತ ನಿರ್ದೇಶಕ
ರಾಜೇಶ್ ದುಗ್ಗುಮನೆ
|

Updated on:Jun 22, 2024 | 11:29 AM

Share

ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್ (Darshan) ಹಾಗೂ ಪವಿತ್ರಾ ಗೌಡ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತದೆ. ದರ್ಶನ್ ಬಗ್ಗೆ ಅನೇಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕೆಲವರು ಅವರ ವಿರುದ್ಧ ಮಾತನಾಡಿದರೆ ಇನ್ನೂ ಕೆಲವರು ಅವರ ಪರ ವಹಿಸಿದ್ದಾರೆ. ಈಗ ತೆಲುಗಿನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಮತ್ತೆ ದರ್ಶನ್ ವಿರುದ್ಧ ಧ್ವನಿ ಎತ್ತಿದ್ದಾರೆ.

ರಾಮ್ ಗೋಪಾಲ್ ವರ್ಮಾ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅನೇಕ ಪ್ರಕರಣಗಳ ಬಗ್ಗೆ ಅವರು ಮಾತನಾಡುತ್ತಾರೆ. ಇತ್ತೀಚೆಗೆ ಅವರು ದರ್ಶನ್ ವಿರುದ್ಧ ಧ್ವನಿ ಎತ್ತಿದ್ದರು. ಇದು ಸರಿ ಅಲ್ಲ ಎಂದಿದ್ದರು. ಈಗ ಅವರು ಮತ್ತೊಮ್ಮೆ ಇದೇ ವಿಚಾರದ ಬಗ್ಗೆ ಮಾತನಾಡಿದ್ದಾರೆ. ದರ್ಶನ್ ಅವರನ್ನು ಆನೆ ಎಂದು ಕರೆದಿದ್ದು, ರೇಣುಕಾ ಸ್ವಾಮಿಯನ್ನು ಶ್ವಾನ (ಗಾತ್ರದಲ್ಲಿ) ಎಂದು ಕರೆದಿದ್ದಾರೆ.

‘ದರ್ಶನ್ ಅವರು ರೇಣುಕಾ ಸ್ವಾಮಿಯ ಮೇಲೆ ದಾಳಿ ಮಾಡಿದ್ದು ಯಾವ ರೀತಿ ಇದೆ ಎಂದರೆ ಆನೆಯು ಶ್ವಾನದ ಮೇಲೆ ದಾಳಿ ಮಾಡಿದಂತೆ. ಶ್ವಾನ ಅನ್ನೋದು ಅವಹೇಳನಕಾರಿಯಾಗಿ ಅಲ್ಲ, ಗಾತ್ರದಲ್ಲಿ. ನಾಯಿ ಬೊಗಳಿತು ಎಂದು ಆನೆ ಹೋಗಿ ದಾಳಿ ಮಾಡಿದರೆ ಏನಾಗಬಹುದು? ಖಂಡಿತವಾಗಿಯೂ ಸಾವೇ’ ಎಂದಿದ್ದಾರೆ ರಾಮ್ ಗೋಪಾಲ್ ವರ್ಮಾ.

ಇದನ್ನೂ ಓದಿ: ದರ್ಶನ್​ಗೆ ಕೌನ್ಸಲಿಂಗ್ ಅಗತ್ಯವಿದೆ ಎಂದು ನಾನು ಜನವರಿಯಲ್ಲೇ ಹೇಳಿದ್ದೆ; ಮನೋ ವೈದ್ಯೆ

ದರ್ಶನ್ ಅವರ ಬಂಧನ ಆಗಿ ಎರಡು ವಾರ ಆಗುತ್ತಾ ಬಂದಿದೆ. ಇಂದು (ಜೂನ್ 22) ಮತ್ತೆ ದರ್ಶನ್ ಅವರನ್ನು ಕೋರ್ಟ್ ಎದುರು ಹಾಜರುಪಡಿಸಲಾಗುತ್ತಿದೆ. ದರ್ಶನ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:26 am, Sat, 22 June 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ