I am R Movie: ಉಪೇಂದ್ರ- ಆರ್​ಜಿವಿ ಕಾಂಬಿನೇಷನ್​ನ ಹೊಸ ಚಿತ್ರ ‘ಐ ಆ್ಯಮ್​ ಆರ್’ ಫಸ್ಟ್​​ ಲುಕ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

Ram Gopal Varma | Kichcha Sudeep | Upendra: ‘ಐ ಆ್ಯಮ್ ಆರ್’ ಚಿತ್ರದ ಮೊದಲ ಲುಕ್​ಅನ್ನು ಬಿಡುಗಡೆ ಮಾಡಲಾಗಿದೆ. ಚಿತ್ರಕ್ಕೆ ‘ಡೆಡ್ಲಿಯೆಸ್ಟ್ ಗ್ಯಾಂಗ್​​ಸ್ಟರ್ ಎವರ್’ (I am R- The Deadliest Gangster Ever) ಎಂಬ ಟ್ಯಾಗ್​ಲೈನ್ ನೀಡಲಾಗಿದೆ. ಸ್ಯಾಂಡಲ್​ವುಡ್​ ತಾರೆ ಕಿಚ್ಚ ಸುದೀಪ್ ‘ಆರ್’ ಚಿತ್ರದ ಮೊದಲ ಲುಕ್ ಬಿಡುಗಡೆಗೊಳಿಸಿದ್ದಾರೆ.

I am R Movie: ಉಪೇಂದ್ರ- ಆರ್​ಜಿವಿ ಕಾಂಬಿನೇಷನ್​ನ ಹೊಸ ಚಿತ್ರ ‘ಐ ಆ್ಯಮ್​ ಆರ್’ ಫಸ್ಟ್​​ ಲುಕ್ ರಿಲೀಸ್ ಮಾಡಿದ ಕಿಚ್ಚ ಸುದೀಪ್
‘ಐ ಆ್ಯಮ್ ಆರ್​’ ಟೈಟಲ್​ ಲಾಂಚ್ ಮಾಡಿದ ಕಿಚ್ಚ ಸುದೀಪ್, ಚಿತ್ರದ ಮೊದಲ ಪೋಸ್ಟರ್​
Follow us
| Updated By: shivaprasad.hs

Updated on:Apr 24, 2022 | 10:40 AM

ರಾಮ್ ಗೋಪಾಲ್ ವರ್ಮಾ (Ram Gopal Varma) ಹಾಗೂ ಉಪೇಂದ್ರರಿಗೆ (Upendra) ತಮ್ಮದೇ ಆದ ಅಭಿಮಾನಿ ಬಳಗವಿದೆ. ಅವರ ವಿಶಿಷ್ಟ ಶೈಲಿಯ ಚಿತ್ರಗಳಿಂದಾಗಿ ಈರ್ವರೂ ಭಾಷೆಗಳಾಚೆಗೆ ಪ್ರೇಕ್ಷಕರಿಗೆ ಪರಿಚಯ. ನಿರ್ದೇಶಕ ರಾಮ್​ ಗೋಪಾಲ್ ವರ್ಮಾ ತೆಲುಗು, ಹಿಂದಿ ಚಿತ್ರರಂಗಗಳಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದರೂ, ಕನ್ನಡದಲ್ಲಿ ‘ಕಿಲ್ಲಿಂಗ್ ವೀರಪ್ಪನ್’ ನಿರ್ದೇಶಿಸಿ ಗಮನ ಸೆಳೆದಿದ್ದರು. ಉಪೇಂದ್ರ ಈಗಾಗಲೇ ತಮ್ಮದೇ ಶೈಲಿಯ ಸಿನಿಮಾಗಳಿಂದ ತೆಲುಗು ಸೇರಿದಂತೆ ಇತರ ಭಾಷೆಗಳ ಪ್ರೇಕ್ಷಕರಿಗೆ ಪರಿಚಯ. ಈರ್ವರ ಕಾಂಬಿನೇಷನ್​ನಲ್ಲಿ ಗ್ಯಾಂಗ್​ಸ್ಟರ್ ಕತೆಯೊಂದನ್ನು ಅನೌನ್ಸ್ ಮಾಡಲಾಗಿತ್ತು. ಚಿತ್ರಕ್ಕೆ ‘ಐ ಆ್ಯಮ್​ ಆರ್’ ಎಂದು ಹೆಸರಿಡಲಾಗಿತ್ತು. ಇದೀಗ ಮೊದಲ ಲುಕ್​ಅನ್ನು ಬಿಡುಗಡೆ ಮಾಡಲಾಗಿದೆ. ಚಿತ್ರಕ್ಕೆ ‘ಡೆಡ್ಲಿಯೆಸ್ಟ್ ಗ್ಯಾಂಗ್​​ಸ್ಟರ್ ಎವರ್’ (R- The Deadliest Gangster Ever) ಎಂಬ ಟ್ಯಾಗ್​ಲೈನ್ ನೀಡಲಾಗಿದೆ. ಸ್ಯಾಂಡಲ್​ವುಡ್​ ತಾರೆ ಕಿಚ್ಚ ಸುದೀಪ್ ‘ಐ ಆ್ಯಮ್​ ಆರ್’ ಚಿತ್ರದ ಮೊದಲ ಲುಕ್​ ಅನ್ನು ಬಿಡುಗಡೆಗೊಳಿಸಿದ್ದಾರೆ.

ಕಿಚ್ಚ ಸುದೀಪ್ ಲಾಂಚ್ ಮಾಡಿದ ‘ಈ ಯಾಮ್ ಆರ್’ ಮೊದಲ ಲುಕ್ ಇಲ್ಲಿದೆ:

ಕನ್ನಡ, ತಮಿಳು, ಹಿಂದಿ ಹಾಗೂ ತೆಲುಗಿನಲ್ಲಿ ಚಿತ್ರ ರಿಲೀಸ್ ಆಗಲಿದ್ದು, ‘ಎ ಸ್ಕ್ವಾರ್ ಪ್ರೊಡಕ್ಷನ್ಸ್’ ಬ್ಯಾನರ್​ನಲ್ಲಿ ರಾಜ್ ಯಜಮಾನ್ ನಿರ್ಮಾಣ ಮಾಡಲಿದ್ದಾರೆ. ಉಪೇಂದ್ರ- ರಾಮ್ ಗೋಪಾಲ್ ವರ್ಮಾ ಹೊಸ ಸಾಹಸದ ಮೊದಲ ಲುಕ್ ಬಿಡುಗಡೆ ಕಾರ್ಯಕ್ರಮದಲ್ಲಿ ಕರ್ನಾಟಕದ ಖ್ಯಾತ ರಾಜಕಾರಣಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಉಪೇಂದ್ರ ಹೊಸ ಚಿತ್ರಕ್ಕೆ ರಾಮ್​ ಗೋಪಾಲ್ ವರ್ಮ ನಿರ್ದೇಶನ; ಗ್ಯಾಂಗ್​ಸ್ಟರ್​ ಕಥೆಯಲ್ಲಿ ಉಪ್ಪಿ

Ashika Ranganath: ‘ಅವತಾರ ಪುರುಷ’ ಬೆಡಗಿ ಆಶಿಕಾ ರಂಗನಾಥ್ ಕ್ಯೂಟ್ ಫೋಟೋ ಆಲ್ಬಂ

Published On - 10:39 am, Sun, 24 April 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ