AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

I am R Movie: ಉಪೇಂದ್ರ- ಆರ್​ಜಿವಿ ಕಾಂಬಿನೇಷನ್​ನ ಹೊಸ ಚಿತ್ರ ‘ಐ ಆ್ಯಮ್​ ಆರ್’ ಫಸ್ಟ್​​ ಲುಕ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

Ram Gopal Varma | Kichcha Sudeep | Upendra: ‘ಐ ಆ್ಯಮ್ ಆರ್’ ಚಿತ್ರದ ಮೊದಲ ಲುಕ್​ಅನ್ನು ಬಿಡುಗಡೆ ಮಾಡಲಾಗಿದೆ. ಚಿತ್ರಕ್ಕೆ ‘ಡೆಡ್ಲಿಯೆಸ್ಟ್ ಗ್ಯಾಂಗ್​​ಸ್ಟರ್ ಎವರ್’ (I am R- The Deadliest Gangster Ever) ಎಂಬ ಟ್ಯಾಗ್​ಲೈನ್ ನೀಡಲಾಗಿದೆ. ಸ್ಯಾಂಡಲ್​ವುಡ್​ ತಾರೆ ಕಿಚ್ಚ ಸುದೀಪ್ ‘ಆರ್’ ಚಿತ್ರದ ಮೊದಲ ಲುಕ್ ಬಿಡುಗಡೆಗೊಳಿಸಿದ್ದಾರೆ.

I am R Movie: ಉಪೇಂದ್ರ- ಆರ್​ಜಿವಿ ಕಾಂಬಿನೇಷನ್​ನ ಹೊಸ ಚಿತ್ರ ‘ಐ ಆ್ಯಮ್​ ಆರ್’ ಫಸ್ಟ್​​ ಲುಕ್ ರಿಲೀಸ್ ಮಾಡಿದ ಕಿಚ್ಚ ಸುದೀಪ್
‘ಐ ಆ್ಯಮ್ ಆರ್​’ ಟೈಟಲ್​ ಲಾಂಚ್ ಮಾಡಿದ ಕಿಚ್ಚ ಸುದೀಪ್, ಚಿತ್ರದ ಮೊದಲ ಪೋಸ್ಟರ್​
TV9 Web
| Edited By: |

Updated on:Apr 24, 2022 | 10:40 AM

Share

ರಾಮ್ ಗೋಪಾಲ್ ವರ್ಮಾ (Ram Gopal Varma) ಹಾಗೂ ಉಪೇಂದ್ರರಿಗೆ (Upendra) ತಮ್ಮದೇ ಆದ ಅಭಿಮಾನಿ ಬಳಗವಿದೆ. ಅವರ ವಿಶಿಷ್ಟ ಶೈಲಿಯ ಚಿತ್ರಗಳಿಂದಾಗಿ ಈರ್ವರೂ ಭಾಷೆಗಳಾಚೆಗೆ ಪ್ರೇಕ್ಷಕರಿಗೆ ಪರಿಚಯ. ನಿರ್ದೇಶಕ ರಾಮ್​ ಗೋಪಾಲ್ ವರ್ಮಾ ತೆಲುಗು, ಹಿಂದಿ ಚಿತ್ರರಂಗಗಳಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದರೂ, ಕನ್ನಡದಲ್ಲಿ ‘ಕಿಲ್ಲಿಂಗ್ ವೀರಪ್ಪನ್’ ನಿರ್ದೇಶಿಸಿ ಗಮನ ಸೆಳೆದಿದ್ದರು. ಉಪೇಂದ್ರ ಈಗಾಗಲೇ ತಮ್ಮದೇ ಶೈಲಿಯ ಸಿನಿಮಾಗಳಿಂದ ತೆಲುಗು ಸೇರಿದಂತೆ ಇತರ ಭಾಷೆಗಳ ಪ್ರೇಕ್ಷಕರಿಗೆ ಪರಿಚಯ. ಈರ್ವರ ಕಾಂಬಿನೇಷನ್​ನಲ್ಲಿ ಗ್ಯಾಂಗ್​ಸ್ಟರ್ ಕತೆಯೊಂದನ್ನು ಅನೌನ್ಸ್ ಮಾಡಲಾಗಿತ್ತು. ಚಿತ್ರಕ್ಕೆ ‘ಐ ಆ್ಯಮ್​ ಆರ್’ ಎಂದು ಹೆಸರಿಡಲಾಗಿತ್ತು. ಇದೀಗ ಮೊದಲ ಲುಕ್​ಅನ್ನು ಬಿಡುಗಡೆ ಮಾಡಲಾಗಿದೆ. ಚಿತ್ರಕ್ಕೆ ‘ಡೆಡ್ಲಿಯೆಸ್ಟ್ ಗ್ಯಾಂಗ್​​ಸ್ಟರ್ ಎವರ್’ (R- The Deadliest Gangster Ever) ಎಂಬ ಟ್ಯಾಗ್​ಲೈನ್ ನೀಡಲಾಗಿದೆ. ಸ್ಯಾಂಡಲ್​ವುಡ್​ ತಾರೆ ಕಿಚ್ಚ ಸುದೀಪ್ ‘ಐ ಆ್ಯಮ್​ ಆರ್’ ಚಿತ್ರದ ಮೊದಲ ಲುಕ್​ ಅನ್ನು ಬಿಡುಗಡೆಗೊಳಿಸಿದ್ದಾರೆ.

ಕಿಚ್ಚ ಸುದೀಪ್ ಲಾಂಚ್ ಮಾಡಿದ ‘ಈ ಯಾಮ್ ಆರ್’ ಮೊದಲ ಲುಕ್ ಇಲ್ಲಿದೆ:

ಕನ್ನಡ, ತಮಿಳು, ಹಿಂದಿ ಹಾಗೂ ತೆಲುಗಿನಲ್ಲಿ ಚಿತ್ರ ರಿಲೀಸ್ ಆಗಲಿದ್ದು, ‘ಎ ಸ್ಕ್ವಾರ್ ಪ್ರೊಡಕ್ಷನ್ಸ್’ ಬ್ಯಾನರ್​ನಲ್ಲಿ ರಾಜ್ ಯಜಮಾನ್ ನಿರ್ಮಾಣ ಮಾಡಲಿದ್ದಾರೆ. ಉಪೇಂದ್ರ- ರಾಮ್ ಗೋಪಾಲ್ ವರ್ಮಾ ಹೊಸ ಸಾಹಸದ ಮೊದಲ ಲುಕ್ ಬಿಡುಗಡೆ ಕಾರ್ಯಕ್ರಮದಲ್ಲಿ ಕರ್ನಾಟಕದ ಖ್ಯಾತ ರಾಜಕಾರಣಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಉಪೇಂದ್ರ ಹೊಸ ಚಿತ್ರಕ್ಕೆ ರಾಮ್​ ಗೋಪಾಲ್ ವರ್ಮ ನಿರ್ದೇಶನ; ಗ್ಯಾಂಗ್​ಸ್ಟರ್​ ಕಥೆಯಲ್ಲಿ ಉಪ್ಪಿ

Ashika Ranganath: ‘ಅವತಾರ ಪುರುಷ’ ಬೆಡಗಿ ಆಶಿಕಾ ರಂಗನಾಥ್ ಕ್ಯೂಟ್ ಫೋಟೋ ಆಲ್ಬಂ

Published On - 10:39 am, Sun, 24 April 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್