AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರದ 3ಡಿ ದೃಶ್ಯ ನೋಡಿ ವಿಮರ್ಶೆ ನೀಡಿದ ಆರ್​ಜಿವಿ

Ram Gopal Varma | Vikrant Rona: ‘ವಿಕ್ರಾಂತ್​ ರೋಣ’ ಚಿತ್ರದ ತುಣುಕುಗಳನ್ನು ರಾಮ್​ ಗೋಪಾಲ್​ ವರ್ಮಾ ಅವರಿಗೆ ತೋರಿಸಲಾಗಿದೆ. 3ಡಿ ದೃಶ್ಯಗಳ ಬಗ್ಗೆ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರದ 3ಡಿ ದೃಶ್ಯ ನೋಡಿ ವಿಮರ್ಶೆ ನೀಡಿದ ಆರ್​ಜಿವಿ
ಕಿಚ್ಚ ಸುದೀಪ್​, ರಾಮ್​ ಗೋಪಾಲ್​ ವರ್ಮಾ
Follow us
TV9 Web
| Updated By: ಮದನ್​ ಕುಮಾರ್​

Updated on: Apr 24, 2022 | 3:54 PM

ಕನ್ನಡದ ಸಿನಿಮಾಗಳು ದೇಶವ್ಯಾಪಿ ಸದ್ದು ಮಾಡುತ್ತಿವೆ. ಮೊದಲು ಕನ್ನಡ ಚಿತ್ರರಂಗದ ಮಾರುಕಟ್ಟೆ ಸಣ್ಣದು ಎನ್ನುತ್ತಿದ್ದವರು ಈಗ ತಮ್ಮ ಅಭಿಪ್ರಾಯ ಬದಲಾಯಿಸಿಕೊಂಡಿದ್ದಾರೆ. ಈಗಾಗಲೇ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಧೂಳೆಬ್ಬಿಸಿದೆ. ಇನ್ನೂ ಕೆಲವು ಚಿತ್ರಗಳು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿವೆ. ಆ ಪೈಕಿ ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿದೆ. ಅನೂಪ್​ ಭಂಡಾರಿ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಹಲವು ವಿಶೇಷತೆಗಳು ಇರಲಿವೆ. ಅದರಲ್ಲೂ 3ಡಿ ವರ್ಷನ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿರುವುದರಿಂದ ಸಿನಿಪ್ರಿಯರು ಹೆಚ್ಚು ಕಾತರ ಇಟ್ಟುಕೊಂಡಿದ್ದಾರೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿದ್ದ ಟ್ರೇಲರ್​ ನೋಡಿ ಕಿಚ್ಚ ಸುದೀಪ್​ (Kichcha Sudeep) ಅಭಿಮಾನಿಗಳು ವಾವ್​ ಎಂದಿದ್ದಾರೆ. ಇನ್ನೇನಿದ್ದರೂ ಸಿನಿಮಾ ಕಣ್ತುಂಬಿಕೊಳ್ಳುವುದೊಂದೇ ಬಾಕಿ. ಅಷ್ಟರಲ್ಲಿ ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ (Ram Gopal Varma) ಅವರು ಈ ಸಿನಿಮಾ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಕೆಲವು 3ಡಿ ದೃಶ್ಯಗಳನ್ನು ನೋಡಿರುವ ಅವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ಈ ಕುರಿತು ಅವರು ಟ್ವೀಟ್​ ಮಾಡಿದ್ದಾರೆ.

ರಾಮ್​ ಗೋಪಾಲ್​ ವರ್ಮಾ ಮತ್ತು ಉಪೇಂದ್ರ ಅವರು ಜೊತೆಯಾಗಿ ‘ಐ ಆ್ಯಮ್​ ಆರ್​’ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಫಸ್ಟ್​ಲುಕ್​ ಲಾಂಚ್​ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಅದಕ್ಕೆ ಕಿಚ್ಚ ಸುದೀಪ್​ ಅತಿಥಿಯಾಗಿ ಆಗಿದ್ದರು. ಅಷ್ಟೇ ಅಲ್ಲ, ಸುದೀಪ್​ ಮತ್ತು ರಾಮ್​ ಗೋಪಾಲ್​ ವರ್ಮಾ ನಡುವೆ ಮೊದಲಿನಿಂದಲೂ ಒಡನಾಟ ಇದೆ. ಇಬ್ಬರೂ ಜೊತೆಯಾಗಿ ಸಿನಿಮಾ ಕೂಡ ಮಾಡಿದ್ದರು. ಈ ಆತ್ಮೀಯತೆಯ ಕಾರಣದಿಂದಲೇ ಅವರಿಗೆ ‘ವಿಕ್ರಾಂತ್​ ರೋಣ’ ಚಿತ್ರದ ತುಣುಕುಗಳನ್ನು ತೋರಿಸಲಾಗಿದೆ.

‘ವಿಕ್ರಾಂತ್​ ರೋಣ’ ಸಿನಿಮಾದ ಟೀಸರ್​ ಅನ್ನು ರಾಮ್​ ಗೋಪಾಲ್​ ವರ್ಮಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ‘ಅನೂಪ್​ ಭಂಡಾರಿ ನಿರ್ದೇಶನ ಮಾಡಿದ, ಕಿಚ್ಚ ಸುದೀಪ್​ ಅಭಿನಯಿಸಿರುವ ‘ವಿಕ್ರಾಂತ್​ ರೋಣ’ ಚಿತ್ರದ ಕೆಲವು 3ಡಿ ದೃಶ್ಯಗಳನ್ನು ನೋಡುವ ಅವಕಾಶ ಸಿಕ್ಕಿತು. ಇದು ನೆಕ್ಸ್ಟ್​ ಲೆವೆಲ್​ ಆಗಿದೆ, ಅತ್ಯದ್ಭುತವಾಗಿದೆ. ಜು.28ರಂದು ಪೂರ್ತಿ ಸಿನಿಮಾ ನೋಡಲು ಕಾತರ ಮೂಡಿದೆ’ ಎಂದು ರಾಮ್​ ಗೋಪಾಲ್​ ವರ್ಮಾ ಅವರು ಟ್ವೀಟ್​ ಮಾಡಿದ್ದಾರೆ.

ಆರ್​ಜಿವಿ ನೀಡಿದ ವಿಮರ್ಶೆಗೆ ನಿರ್ದೇಶಕ ಅನೂಪ್​ ಭಂಡಾರಿ ಪ್ರತಿಕ್ರಿಯೆ ನೀಡಿದ್ದಾರೆ. ‘ಧನ್ಯವಾದಗಳು ಸರ್​, ನಿಮ್ಮ ಮಾತುಗಳಿಂದಾಗಿ 3ಡಿ ಕ್ವಾಲಿಟಿ ಮೇಲೆ ನಮಗೆ ಇರುವ ನಂಬಿಕೆ 10 ಪಟ್ಟು ಹೆಚ್ಚಾಗಿದೆ’ ಎಂದು ಅನೂಪ್​ ಭಂಡಾರಿ ಬರೆದುಕೊಂಡಿದ್ದಾರೆ. ಆರ್​ಜಿವಿ ಮಾತಿಗೆ ಕಿಚ್ಚ ಸುದೀಪ್​ ಕೂಡ ಧನ್ಯವಾದ ಅರ್ಪಿಸಿದ್ದಾರೆ.

ಅಭಿಮಾನಿಗಳಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಇದೆ. ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್​ ಪಾಂಡಿಯನ್​ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮುಖ್ಯಪಾತ್ರದಲ್ಲಿ ಕಿಚ್ಚ ಸುದೀಪ್​, ನೀತಾ ಅಶೋಕ್​, ನಿರೂಪ್​ ಭಂಡಾರಿ, ಜಾಕ್ವೆಲಿನ್​ ಫರ್ನಾಂಡಿಸ್​ ಮುಂತಾದವರು ನಟಿಸಿದ್ದಾರೆ. ಬೃಹತ್​ ಸೆಟ್​ಗಳನ್ನು ನಿರ್ಮಿಸಿ ‘ವಿಕ್ರಾಂತ್​ ರೋಣ’ ಚಿತ್ರೀಕರಣ ಮಾಡಲಾಗಿದೆ. ಸುದೀಪ್​ ಕೂಡ ಈ ಸಿನಿಮಾ ಬಗ್ಗೆ ವಿಶೇಷ ಆಸಕ್ತಿ ವಹಿಸುತ್ತಿದ್ದಾರೆ. ಈಗಾಗಲೇ ಪೋಸ್ಟರ್​ಗಳು ಗಮನ ಸೆಳೆದಿವೆ. ಬುರ್ಜ್​ ಖಲೀಫಾ ಕಟ್ಟಡದ ಮೇಲೆ ಟೈಟಲ್​ ಲಾಂಚ್​ ಮಾಡಿದ್ದು ಸಖತ್​ ಸುದ್ದಿಯಾಗಿತ್ತು. ಜು. 28ರಂದು ಈ ಸಿನಿಮಾ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ:

ಸುದೀಪ್​ ಜೀವನದಲ್ಲಿ ಬದಲಾವಣೆಗೆ ಕಾರಣವಾದ ಇಬ್ಬರು ಡೈರೆಕ್ಟರ್​ ಇವರು; ವೇದಿಕೆಯಲ್ಲಿ ವಿವರಿಸಿದ ಕಿಚ್ಚ

I am R Movie: ಉಪೇಂದ್ರ- ಆರ್​ಜಿವಿ ಕಾಂಬಿನೇಷನ್​ನ ಹೊಸ ಚಿತ್ರ ‘ಐ ಆ್ಯಮ್​ ಆರ್’ ಫಸ್ಟ್​​ ಲುಕ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ