AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮತ್ತೊಂದು ದೊಡ್ಡ ಚಿತ್ರ ಬರ್ತಿದೆ’: ‘ವಿಕ್ರಾಂತ್​ ರೋಣ’ ಬಗ್ಗೆ ಪರಭಾಷೆ ಮಂದಿಗೆ ಮೊದಲೇ ಎಚ್ಚರಿಕೆ ನೀಡಿದ ಆರ್​ಜಿವಿ

Vikrant Rona: ‘ವಿಕ್ರಾಂತ್​ ರೋಣ’ ಚಿತ್ರ 3ಡಿ ವರ್ಷನ್​ನಲ್ಲಿ ಮೂಡಿಬರುತ್ತಿದೆ. ದೊಡ್ಡ ಮಟ್ಟದಲ್ಲಿ ಈ ಚಿತ್ರ ರಿಲೀಸ್​ ಆಗುತ್ತಿರುವುದಕ್ಕೆ ರಾಮ್​ ಗೋಪಾಲ್ ವರ್ಮಾ ಸಂತಸ ವ್ಯಕ್ತಪಡಿಸಿದ್ದಾರೆ.

‘ಮತ್ತೊಂದು ದೊಡ್ಡ ಚಿತ್ರ ಬರ್ತಿದೆ’: ‘ವಿಕ್ರಾಂತ್​ ರೋಣ’ ಬಗ್ಗೆ ಪರಭಾಷೆ ಮಂದಿಗೆ ಮೊದಲೇ ಎಚ್ಚರಿಕೆ ನೀಡಿದ ಆರ್​ಜಿವಿ
ಆರ್​ಜಿವಿ, ಕಿಚ್ಚ ಸುದೀಪ್​
TV9 Web
| Edited By: |

Updated on: May 22, 2022 | 2:51 PM

Share

ಕನ್ನಡದ ಸಿನಿಮಾಗಳು ರಾಷ್ಟ್ರ ಮಟ್ಟದಲ್ಲಿ ಶೈನ್​ ಆಗುತ್ತಿವೆ. ಈಗಾಗಲೇ ‘ಕೆಜಿಎಫ್​: ಚಾಪ್ಟರ್​ 2’ ಮಾಡಿದ ಸಾಧನೆಯ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಮುಂಬರುವ ಎಲ್ಲ ಬಿಗ್​ ಬಜೆಟ್​ ಕನ್ನಡ ಸಿನಿಮಾಗಳ ಬಗ್ಗೆ ಹೈಪ್​ ಸೃಷ್ಟಿ ಆಗಿದೆ. ಆ ಪೈಕಿ ಹೆಚ್ಚು ಸೌಂಡು ಮಾಡುತ್ತಿರುವುದು ‘ವಿಕ್ರಾಂತ್​ ರೋಣ’ (Vikrant Rona) ಚಿತ್ರ. ಅನೂಪ್​ ಭಂಡಾರಿ ನಿರ್ದೇಶನ ಮಾಡಿರುವ ಈ ಸಿನಿಮಾ ಬಿಡುಗಡೆಗೂ ಮೊದಲೇ ಸಖತ್​ ನಿರೀಕ್ಷೆ ಹುಟ್ಟುಹಾಕಿದೆ. ಈವರೆಗೂ ‘ವಿಕ್ರಾಂತ್​ ರೋಣ’ ಚಿತ್ರದಿಂದ ಹೊರಬಂದಿರುವುದು ಕೆಲವು ಪೋಸ್ಟರ್​ ಮತ್ತು ಟೀಸರ್​ ಮಾತ್ರ. ಅಷ್ಟರಲ್ಲಾಗಲೇ ಕಿಚ್ಚ ಸುದೀಪ್​ (Kichcha Sudeep) ಅಭಿಮಾನಿಗಳು ಈ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಳ್ಳುವಂತಾಗಿದೆ. ಜುಲೈ 28ರಂದು ಈ ಸಿನಿಮಾ ರಿಲೀಸ್​ ಆಗಲಿದ್ದು, ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಒಂದಕ್ಕಿಂತ ಒಂದು ಎಗ್ಸೈಟಿಂಗ್​ ನ್ಯೂಸ್​ ಹಂಚಿಕೊಳ್ಳುವ ಮೂಲಕ ಸಿನಿಪ್ರಿಯರ ಕೌತುಕವನ್ನು ಹೆಚ್ಚಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಚಿತ್ರದ ಬಗ್ಗೆ ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ (Ram Gopal Varma) ಅವರು ಕೂಡ ಮೆಚ್ಚುಗೆ ಸೂಚಿಸುತ್ತಿದ್ದಾರೆ.

‘ವಿಕ್ರಾಂತ್​ ರೋಣ’ ಚಿತ್ರ 3ಡಿ ವರ್ಷನ್​ನಲ್ಲಿ ಮೂಡಿಬರುತ್ತಿದೆ. ದೊಡ್ಡ ಮಟ್ಟದಲ್ಲಿ ಈ ಚಿತ್ರ ರಿಲೀಸ್​ ಆಗುತ್ತಿದೆ. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್​ನಲ್ಲಿಯೂ ಈ ಚಿತ್ರ ತೆರೆಕಾಣಲಿದೆ. ಹಿಂದಿಯಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾವನ್ನು ಬಿಡುಗಡೆ ಮಾಡುವ ಹೊಣೆಯನ್ನು ‘ಪಿವಿಆರ್​’ ಸಂಸ್ಥೆ ವಹಿಸಿಕೊಂಡಿದೆ. ಆ ಸುದ್ದಿಗೆ ಪ್ರತಿಕ್ರಿಯೆ ನೀಡಿರುವ ರಾಮ್​ ಗೋಪಾಲ್​ ವರ್ಮಾ ಅವರು ಭಾರಿ ಗೆಲುವಿನ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ
Image
Vikrant Rona: ‘ವಿಕ್ರಾಂತ್​ ರೋಣ’ ಚಿತ್ರದ ಬಿಗ್​ ಅನೌನ್ಸ್​ಮೆಂಟ್​; ಕಾತರದಿಂದ ಕಾಯುತ್ತಿರುವ ಕಿಚ್ಚ ಸುದೀಪ್ ಫ್ಯಾನ್ಸ್​
Image
ರಾಷ್ಟ್ರ ಭಾಷೆ ವಿವಾದದ ಬಳಿಕ ಗಲ್ಲಾ ಪೆಟ್ಟಿಗೆಯಲ್ಲೂ ಕಿಚ್ಚ ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಪೈಪೋಟಿ
Image
‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಕಿಚ್ಚನ ಚಪ್ಪಾಳೆ; ಸುದೀಪ್​ ಬರೆದ ದೀರ್ಘ ಪತ್ರದಲ್ಲಿ ಏನೇನಿದೆ?
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಸಾಥ್​​ ನೀಡಿದ ಪರಭಾಷೆಯ ಸ್ಟಾರ್​ ನಟರು

ಇದನ್ನೂ ಓದಿ: ‘ಕೆಜಿಎಫ್​ 2’, ಉಪೇಂದ್ರ ಮತ್ತು ಸ್ಯಾಂಡಲ್​ವುಡ್​ ಬಗ್ಗೆ ರಾಮ್​ ಗೋಪಾಲ್​ ವರ್ಮಾ ಹೇಳೋದು ಏನು?

‘ಪಿವಿಆರ್​ ಜೊತೆ ವಿಕ್ರಾಂತ್​ ರೋಣ ಸಿನಿಮಾ ಕೈ ಜೋಡಿಸಿರುವ ಸುದ್ದಿಯನ್ನು ಕೇಳಿ ಖುಷಿ ಆಯಿತು. ಈ ಚಿತ್ರದ ಕೆಲವು ದೃಶ್ಯಗಳನ್ನು ನಾನು ನೋಡಿದ್ದೇನೆ. ಇದು ಕನ್ನಡದಿಂದ ಮತ್ತೊಂದು ದೊಡ್ಡ ಸಿನಿಮಾ ಆಗಿ ಹೊರಹೊಮ್ಮಲಿದೆ. ಬ್ಲಾಕ್​ ಬಸ್ಟರ್​ ಸಿನಿಮಾ ‘ರಂಗಿತರಂಗ’ ಖ್ಯಾತಿಯ ಅನೂಪ್​ ಭಂಡಾರಿ ಅವರು ‘ವಿಕ್ರಾಂತ್ ರೋಣ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ. ಈ ಮೂಲಕ ‘ವಿಕ್ರಾಂತ್​ ರೋಣ’ ಚಿತ್ರ ಖಂಡಿತಾ ಸೂಪರ್ ಹಿಟ್​ ಆಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

ಏಪ್ರಿಲ್​ 24ರಂದು ರಾಮ್​ ಗೋಪಾಲ್​ ವರ್ಮಾ ಅವರು ‘ವಿಕ್ರಾಂತ್​ ರೋಣ’ ಚಿತ್ರದ ಟೀಸರ್​ ಶೇರ್​ ಮಾಡಿಕೊಂಡಿದ್ದರು. ಆಗ ಕೂಡ ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದರು. ‘ವಿಕ್ರಾಂತ್​ ರೋಣ’ ಚಿತ್ರದ ಕೆಲವು 3ಡಿ ದೃಶ್ಯಗಳನ್ನು ನೋಡುವ ಅವಕಾಶ ಸಿಕ್ಕಿತು. ಇದು ನೆಕ್ಸ್ಟ್​ ಲೆವೆಲ್​ ಆಗಿದೆ, ಅತ್ಯದ್ಭುತವಾಗಿದೆ. ಜುಲೈ 28ರಂದು ಪೂರ್ತಿ ಸಿನಿಮಾ ನೋಡಲು ಕಾತರ ಮೂಡಿದೆ’ ಎಂದು ರಾಮ್​ ಗೋಪಾಲ್​ ವರ್ಮಾ ಅವರು ಟ್ವೀಟ್​ ಮಾಡಿದ್ದರು.

ವಿದೇಶದಲ್ಲಿ ವಿತರಕರು ‘ವಿಕ್ರಾಂತ್​ ರೋಣ’ ಚಿತ್ರದ ಹಕ್ಕುಗಳನ್ನು ಖರೀದಿಸುವಲ್ಲಿ ಉತ್ಸುಕತೆ ತೋರಿಸಿದ್ದಾರೆ. ಅದರ ಪರಿಣಾಮವಾಗಿ ರಿಲೀಸ್​ಗೂ ಮೊದಲೇ ಈ ಸಿನಿಮಾ ಬರೋಬ್ಬರಿ 10 ಕೋಟಿ ರೂ. ಡೀಲ್​ ನಡೆಸಿದೆ ಎಂಬ ಮಾಹಿತಿ ಕೇಳಿಬಂದಿದೆ. ‘ಒನ್​ ಟ್ವೆಂಟಿ 8 ಮೀಡಿಯಾ’ ಸಂಸ್ಥೆಯು ‘ವಿಕ್ರಾಂತ್​ ರೋಣ’ ಸಿನಿಮಾದ ವಿತರಣೆ ಹಕ್ಕುಗಳನ್ನು ಖರೀದಿಸಿದೆ. ಮೂಲಗಳ ಪ್ರಕಾರ 1.3 ಮಿಲಿಯನ್​ ಡಾಲರ್​, ಅಂದರೆ 10 ಕೋಟಿ ರೂಪಾಯಿಗೆ ಮಾರಾಟ ಆಗಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇಷ್ಟು ದೊಡ್ಡ ಮೊತ್ತಕ್ಕೆ ವಿದೇಶದಲ್ಲಿ ಸಿನಿಮಾ ವಿತರಣೆಯ ಹಕ್ಕು ಮಾರಾಟ ಆಗಿರುವುದು ಇದೇ ಮೊದಲು ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ