AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಶಾಂತ್​ ನೀಲ್​ ಅವರಿಂದ ಭಾರತೀಯ ಚಿತ್ರರಂಗಕ್ಕೆ ನೂರಾರು ಕೋಟಿ ರೂ. ನಷ್ಟ’: ವಿವರ ನೀಡಿದ ಆರ್​ಜಿವಿ

ರಾಮ್​ ಗೋಪಾಲ್​ ವರ್ಮಾ ಅವರ ಈ ಮಾತುಗಳಿಗೆ ಪ್ರಶಾಂತ್​ ನೀಲ್​ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಅಂತ ಕಾದು ನೋಡಬೇಕಷ್ಟೇ. ಮುಂದಿನ ಸಿನಿಮಾ ಕೆಲಸಗಳತ್ತ ಅವರು ಗಮನ ಹರಿಸಿದ್ದಾರೆ.

‘ಪ್ರಶಾಂತ್​ ನೀಲ್​ ಅವರಿಂದ ಭಾರತೀಯ ಚಿತ್ರರಂಗಕ್ಕೆ ನೂರಾರು ಕೋಟಿ ರೂ. ನಷ್ಟ’: ವಿವರ ನೀಡಿದ ಆರ್​ಜಿವಿ
ಪ್ರಶಾಂತ್​ ನೀಲ್​, ರಾಮ್​ ಗೋಪಾಲ್ ವರ್ಮಾ
TV9 Web
| Edited By: |

Updated on:May 05, 2022 | 9:09 AM

Share

ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಅವರ ಬಗ್ಗೆ ಇಡೀ ಭಾರತೀಯ ಚಿತ್ರರಂಗಕ್ಕೆ ಹೆಮ್ಮೆ ಇದೆ. ಅದರಲ್ಲೂ ಕನ್ನಡಿಗರಿಗೆ ಅವರನ್ನು ಕಂಡರೆ ಹೆಚ್ಚು ಅಭಿಮಾನ. ಕನ್ನಡ ಚಿತ್ರರಂಗದ ಕಡೆಗೆ ಜಾಗತಿಕ ಸಿನಿಮಾರಂಗ ತಿರುಗಿ ನೋಡುವಂತೆ ಮಾಡಿದ ಖ್ಯಾತಿ ಪ್ರಶಾಂತ್​ ನೀಲ್​ ಅವರಿಗೆ ಸಲ್ಲುತ್ತದೆ. ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದಿಂದ ಅವರು ರಾಷ್ಟ್ರಮಟ್ಟದಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಎಷ್ಟೋ ನಿರ್ದೇಶಕರಿಗೆ ಪ್ರಶಾಂತ್​ ನೀಲ್ ಸ್ಫೂರ್ತಿ ಆಗಿದ್ದಾರೆ. ಅವರ ರೀತಿಯೇ ಕೆಲಸ ಮಾಡಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ (Ram Gopal Varma) ಅವರು ಡಿಫರೆಂಟ್​ ಆಗಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಪ್ರಶಾಂತ್ ನೀಲ್​ ಅವರಿಂದ ಭಾರತೀಯ ಚಿತ್ರರಂಗಕ್ಕೆ ನೂರಾರು ಕೋಟಿ ರೂಪಾಯಿ ನಷ್ಟ ಆಗಿದೆ ಎಂದು ಆರ್​ಜಿವಿ ಆರೋಪಿಸಿದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ಅಂದಹಾಗೆ, ರಾಮ್​ ಗೋಪಾಲ್​ ವರ್ಮಾ ಅವರು ಪ್ರಶಾಂತ್​ ನೀಲ್​ ಬಗ್ಗೆ ಕೆಟ್ಟದಾಗಿ ಮಾತನಾಡಿಲ್ಲ. ಬದಲಿಗೆ ಹೊಗಳಿದ್ದಾರೆ. ಅದು ಹೇಗೆ? ಇಲ್ಲಿದೆ ವಿವರ..

ಮೇ 4ರಂದು ‘ನಿರ್ದೇಶಕರ ದಿನ’. ಆ ಪ್ರಯುಕ್ತ ಎಲ್ಲರೂ ತಮ್ಮ ನೆಚ್ಚಿನ ಸಿನಿಮಾ ನಿರ್ದೇಶಕರಿಗೆ ವಿಶ್ ಮಾಡಿದ್ದಾರೆ. ಈ ಪ್ರಯುಕ್ತ ರಾಮ್​ ಗೋಪಾಲ್​ ವರ್ಮಾ ಅವರು ಪ್ರಶಾಂತ್​ ನೀಲ್​ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಆದರೆ ಅದು ಅವರದ್ದೇ ಸ್ಟೈಲ್​ನಲ್ಲಿ ಎಂಬುದು ವಿಶೇಷ. ‘ಬಾಲಿವುಡ್​, ಸ್ಯಾಂಡಲ್​ವುಡ್​, ಕಾಲಿವುಡ್​, ಟಾಲಿವುಡ್​ನ ಎಲ್ಲ ನಿರ್ದೇಶಕರ ತಲೆ ಕೆಡಿಸಿದ್ದಕ್ಕಾಗಿ ಪ್ರಶಾಂತ್​ ನೀಲ್​ ಅವರಿಗೆ ನಾನು ಅನ್​ಹ್ಯಾಪಿ ಡೈರೆಕ್ಟರ್ಸ್​ ಡೇ ಅಂತ ವಿಶ್​ ಮಾಡುತ್ತೇನೆ. ಪ್ರಶಾಂತ್​ ನೀಲ್​ ಅವರೇ.. ನೀವು ಭಾರತೀಯ ಚಿತ್ರರಂಗದ ವೀರಪ್ಪನ್​’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ
Image
ರಾಕಿ ಭಾಯ್​ಗೆ ಈದ್​ ಗಿಫ್ಟ್​; ಹಬ್ಬದ ದಿನವೇ ಹಿಂದಿ ಬಾಕ್ಸ್​ ಆಫೀಸ್​ನಲ್ಲಿ 9.57 ಕೋಟಿ ರೂ. ಬಾಚಿದ ‘ಕೆಜಿಎಫ್​ 2’
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​
Image
KGF 3: ‘ಕೆಜಿಎಫ್ ಚಾಪ್ಟರ್ 2’ ಕೊನೆಯಲ್ಲಿ ಬಿಗ್ ಸರ್ಪ್ರೈಸ್ ನೋಡಿ ಥ್ರಿಲ್ ಆದ ಅಭಿಮಾನಿಗಳು; ಟ್ರೆಂಡ್ ಆಯ್ತು ‘ಕೆಜಿಎಫ್ 3’
Image
‘ಕೆಜಿಎಫ್’ ಚಿತ್ರವನ್ನೇ​ ಮೀರಿಸಲಿದೆ ಪ್ರಭಾಸ್​ ‘ಸಲಾರ್’​? ಟಾಲಿವುಡ್​ ಅಂಗಳದಿಂದ ಬಿಗ್​ ಅಪ್​ಡೇಟ್​

(ರಾಮ್ ಗೋಪಾಲ್ ವರ್ಮಾ ಟ್ವೀಟ್)

‘ಪ್ರಶಾಂತ್​ ನೀಲ್​ ಅವರೇ.. ನೀವು ಕ್ವಿಂಟಾಲ್​ಗಟ್ಟಲೆ ಹಣ ಮಾಡಿದ್ದೀರಿ. ಆದರೆ ಅದರಿಂದ ಭಾರತೀಯ ಚಿತ್ರರಂಗಕ್ಕೆ ನೂರಾರು ಟನ್​ಗಳಷ್ಟು ಹಣ ನಷ್ಟ ಆಗಿದೆ. ಯಾಕೆಂದರೆ ಹೊಸದಾಗಿ ಚಿತ್ರೀಕರಣ ಮಾಡಲು, ಹೊಸದಾಗಿ ಡ್ರಾಫ್ಟ್​ ಮಾಡಲು, ಹೊಸದಾಗಿ ಆಲೋಚನೆ ಮಾಡಲು ಬೇರೆ ಚಿತ್ರತಂಡದವರು ಹಣ ಖರ್ಚು ಮಾಡಲಿದ್ದಾರೆ. ಆದರೆ ‘ಕೆಜಿಎಫ್ 2’ ಯಾಕೆ ಗೆದ್ದಿದೆ ಎಂಬುದು​ ಅವರಿಗೆ ತಿಳಿದಿಲ್ಲ’ ಎಂದು ರಾಮ್​ ಗೋಪಾಲ್​ ವರ್ಮಾ ಬರೆದುಕೊಂಡಿದ್ದಾರೆ.

ಈ ಮಾತುಗಳಿಗೆ ಪ್ರಶಾಂತ್​ ನೀಲ್​ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂದು ಕಾದು ನೋಡಬೇಕಷ್ಟೇ. ಮುಂದಿನ ಸಿನಿಮಾ ಕೆಲಸಗಳತ್ತ ಅವರು ಗಮನ ಹರಿಸಿದ್ದಾರೆ. ಪ್ರಭಾಸ್ ನಟಿಸಲಿರುವ ‘ಸಲಾರ್​’ ಸಿನಿಮಾಗೆ ಪ್ರಶಾಂತ್​ ನೀಲ್​ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಹಾಗೆಯೇ ‘ಕೆಜಿಎಫ್​: ಚಾಪ್ಟರ್​ 3’ ಯಾವಾಗ ಬರಲಿದೆ ಎಂದು ಕೂಡ ಅಭಿಮಾನಿಗಳು ಕಾಯುತ್ತಿದ್ದಾರೆ. ‘ಸಲಾರ್​’ ಬಳಿಕ ಪ್ರಶಾಂತ್​ ನೀಲ್​ ಯಾವ ಸಿನಿಮಾವನ್ನು ಕೈಗೆತ್ತಿಕೊಳ್ಳಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಸೃಷ್ಟಿ ಆಗಿದೆ. ಯಶ್​ ಅವರ ಮುಂದಿನ ಸಿನಿಮಾ ಬಗ್ಗೆಯೂ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:09 am, Thu, 5 May 22

‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ
ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ
ವಾಹನ ಸವಾರರೇ ಎಚ್ಚರ: ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸ್
ವಾಹನ ಸವಾರರೇ ಎಚ್ಚರ: ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸ್