AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಲಿವುಡ್​ ಮೇಲೆ ಸ್ಯಾಂಡಲ್​ವುಡ್​ ಎಸೆದ ಅಣುಬಾಂಬ್​ ಇದು’: ಯಶ್​ ಗೆಲುವನ್ನು ಹೀಗೆ ವರ್ಣಿಸಿದ ಆರ್​ಜಿವಿ

Ram Gopal Varma | Yash: ಕನ್ನಡ ಚಿತ್ರರಂಗಕ್ಕೆ ಹೆಮ್ಮೆ ತಂದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಗ್ಗೆ ರಾಮ್​ ಗೋಪಾಲ್​ ವರ್ಮಾ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಯಶ್​ಗೆ ಅವರು ಭರಪೂರ ಮೆಚ್ಚುಗೆ ನೀಡಿದ್ದಾರೆ.

‘ಬಾಲಿವುಡ್​ ಮೇಲೆ ಸ್ಯಾಂಡಲ್​ವುಡ್​ ಎಸೆದ ಅಣುಬಾಂಬ್​ ಇದು’: ಯಶ್​ ಗೆಲುವನ್ನು ಹೀಗೆ ವರ್ಣಿಸಿದ ಆರ್​ಜಿವಿ
ಯಶ್
TV9 Web
| Edited By: |

Updated on: Apr 16, 2022 | 11:32 AM

Share

ಈಗ ಎಲ್ಲ ಕಡೆಯೂ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದ ಸುದ್ದಿಯೇ ಕೇಳಿಬರುತ್ತಿದೆ. ಎಲ್ಲ ಸಿನಿಪ್ರಿಯರ ವಲಯದಲ್ಲೂ ಈ ಚಿತ್ರದ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಕನ್ನಡ ಚಿತ್ರವೊಂದು ಹೀಗೆ ರಾಷ್ಟ್ರಮಟ್ಟದಲ್ಲಿ ಗೆದ್ದು ಬೀಗಿರುವುದಕ್ಕೆ ಪರಭಾಷೆ ಸಿನಿಮಂದಿ ಬೆರಗಾಗಿದ್ದಾರೆ. ಮೊದಲ ದಿನವೇ ಭಾರತೀಯ ಬಾಕ್ಸ್​ ಆಫೀಸ್​ನಲ್ಲಿ ಬರೋಬ್ಬರಿ 134.5 ಕೋಟಿ ರೂಪಾಯಿ ಗಳಿಸಿರುವುದು ಈ ಚಿತ್ರದ ಹೆಚ್ಚುಗಾರಿಕೆ. ನಟ ಯಶ್​ (Yash) ಅವರಿಗೆ ‘ಕೆಜಿಎಫ್​ 2’ ಸಿನಿಮಾದಿಂದ ಬೃಹತ್ ಗೆಲುವು ಸಿಕ್ಕಿದೆ. ಈ ಯಶಸ್ಸಿನ ಬಗ್ಗೆ ಭಾರತೀಯ ಚಿತ್ರರಂಗದ ಅನೇಕರು ಮಾತನಾಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ತಂಡ ಮಾಡಿರುವ ಸಾಧನೆಯನ್ನು ಹಲವು ಸೆಲೆಬ್ರಿಟಿಗಳು ಕೊಂಡಾಡುತ್ತಿದ್ದಾರೆ. ಈಗ ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ (Ram Gopal Varma) ಕೂಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಬಾಲಿವುಡ್​ ಎದುರು ಕನ್ನಡ ಚಿತ್ರರಂಗ ಹೇಗೆ ಬೆಳೆದು ನಿಂತಿದೆ ಎಂಬುದನ್ನು ಅವರು ತಮ್ಮದೇ ಶೈಲಿಯಲ್ಲಿ ವಿವರಿಸಿದ್ದಾರೆ.

‘ಕೆಜಿಎಫ್​’ ಸಿನಿಮಾದಲ್ಲಿ ರಾಕಿ ಮುಂಬೈಗೆ ಹೋಗಿ ತನ್ನ ಪ್ರಾಬಲ್ಯ ಮೆರೆಯುತ್ತಾನೆ. ರಿಯಲ್​ ಲೈಫ್​ನಲ್ಲಿಯೂ ಹಾಗೆಯೇ ಆಗಿದೆ ಎಂಬುದು ರಾಮ್​ ಗೋಪಾಲ್​ ವರ್ಮಾ ಅವರ ಅಭಿಪ್ರಾಯ. ‘ವಿಲನ್​ಗಳಿಗೆ ಗುಂಡಿಕ್ಕಲು ರಾಕಿ ಭಾಯ್​ ಹೇಗೆ ಮುಂಬೈಗೆ ಬರುತ್ತಾನೋ ಅದೇ ರೀತಿಯಲ್ಲಿ ಬಾಲಿವುಡ್​ ಸ್ಟಾರ್​ ನಟರ ಓಪನಿಂಗ್​ ಕಲೆಕ್ಷನ್​ಗೆ ಯಶ್​ ಗುಂಡಿಕ್ಕುತ್ತಿದ್ದಾರೆ. ಈ ಚಿತ್ರದ ಟೋಟಲ್​ ಗಳಿಕೆಯು ಬಾಲಿವುಡ್​ ಮೇಲೆ ಕನ್ನಡ ಚಿತ್ರರಂಗ ಎಸೆಯುವ ಅಣುಬಾಂಬ್​ ಆಗಿರಲಿದೆ’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ.

‘ಪ್ರಶಾಂತ್​ ನೀಲ್ ನಿರ್ದೇಶನ ಮಾಡಿರುವ ‘ಕೆಜಿಎಫ್​ 2’ ಒಂದು ಗ್ಯಾಂಗ್​ಸ್ಟರ್​ ಸಿನಿಮಾ ಮಾತ್ರವಲ್ಲ, ಬಾಲಿವುಡ್​ ಚಿತ್ರರಂಗದವರಿಗೆ ಇದು ಒಂದು ಹಾರರ್​ ಸಿನಿಮಾ. ಈ ಚಿತ್ರದ ಗೆಲುವು ಬಾಲಿವುಡ್​ನವರಿಗೆ ಹಲವು ವರ್ಷಗಳ ಕಾಲ ದುಸ್ವಪ್ನವಾಗಿ ಕಾಡಲಿದೆ’ ಎಂದು ರಾಮ್​ ಗೋಪಾಲ್​ ವರ್ಮಾ ಪೋಸ್ಟ್​ ಮಾಡಿದ್ದಾರೆ. ‘ಹಿಂದಿ ಚಿತ್ರರಂಗದ ವಿಚಾರ ಬಿಟ್ಟುಬಿಡಿ. ತಮಿಳು ಮತ್ತು ತೆಲುಗು ಚಿತ್ರರಂಗದವರು ಕೂಡ ಕೆಜಿಎಫ್​ ಸಿನಿಮಾ ಬರುವವರೆಗೆ ಕನ್ನಡ ಫಿಲ್ಮ್​ ಇಂಡಸ್ಟ್ರಿಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ’ ಎಂದು ಆರ್​ಜಿವಿ ಹೇಳಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಗೆಲುವಿನಿಂದಾಗಿ ಇಡೀ ಕನ್ನಡ ಚಿತ್ರರಂಗವೇ ಹೆಮ್ಮೆ ಪಡುವಂತೆ ಆಗಿದೆ. ಯಶ್​ ಅವರ ಮಾರುಕಟ್ಟೆ ವಿಸ್ತಾರ ಆಗಿದೆ. ಈ ಚಿತ್ರದಲ್ಲಿ ಸಂಜಯ್​ ದತ್​, ರವೀನಾ ಟಂಡನ್​, ಪ್ರಕಾಶ್​ ರಾಜ್​, ರಾವ್​ ರಮೇಶ್​ ಮುಂತಾದ ಸ್ಟಾರ್​ ಕಲಾವಿದರು ನಟಿಸಿದ್ದಾರೆ. ಯಶ್​ಗೆ ಜೋಡಿಯಾಗಿ ಶ್ರೀನಿಧಿ ಶೆಟ್ಟಿ ಅಭಿನಯಿಸಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರ ಧೂಳೆಬ್ಬಿಸುತ್ತಿರುವುದರಿಂದ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಗೆ ಭಾರೀ ಪ್ರಮಾಣದ ಲಾಭ ಆಗುತ್ತಿದೆ. ಹಿಂದಿ ಅವತರಣಿಕೆಯಲ್ಲಿ ‘ಕೆಜಿಎಫ್​ 2’ ಸಿನಿಮಾ ಅತಿ ಹೆಚ್ಚು ಕಲೆಕ್ಷನ್​ ಮಾಡುತ್ತಿದೆ. ದಕ್ಷಿಣ ಭಾರತದಲ್ಲೂ ಇದರ ನಾಗಾಲೋಟ ಮುಂದುವರಿದಿದೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಎದುರು ‘ಬೀಸ್ಟ್​’ ಸಿನಿಮಾ ಬಿಡುಗಡೆ ಆಗಿತ್ತು. ಆದರೆ ಆ ಚಿತ್ರಕ್ಕಿಂತಲೂ ‘ಕೆಜಿಎಫ್​ 2’ ಚೆನ್ನಾಗಿದೆ ಎಂದು ಸ್ವತಃ ತಮಿಳುನಾಡಿನ ಸಿನಿಪ್ರಿಯರೇ ಹೇಳುತ್ತಿದ್ದಾರೆ. ಹಾಗಾಗಿ ಅಲ್ಲಿಯೂ ಈ ಚಿತ್ರ ಸೂಪರ್​ ಹಿಟ್​ ಆಗಿದೆ. ಚಿತ್ರದ ಟೋಟಲ್​ ಕಲೆಕ್ಷನ್​ ತಿಳಿಯಲು ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ:

‘ಕೆಜಿಎಫ್​ 2’ ಬ್ಲಾಕ್​ ಬಸ್ಟರ್​ ಗೆಲುವು ಕಂಡ ಬಳಿಕ ‘ಪುಷ್ಪ 2’ ಚಿತ್ರತಂಡಕ್ಕೆ ಚಿಂತೆ ಶುರು; ಏನಿದು ಟಾಕ್​?

‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು