AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ರಾಮಲಿಂಗ ರೆಡ್ಡಿ ಬಿಡುಗಡೆ ಮಾಡಿದ ‘ಹೈಡ್ ಆ್ಯಂಡ್​ ಸೀಕ್’ ಸಿನಿಮಾ ಟ್ರೇಲರ್‌

ಟ್ರೇಲರ್​ ಮೂಲಕ ಗಮನ ಸೆಳೆಯುತ್ತಿರುವ ‘ಹೈಡ್​ ಆ್ಯಂಡ್​ ಸೀಕ್​’ ಸಿನಿಮಾ ಮಾರ್ಚ್ 15ರಂದು ಬಿಡುಗಡೆ ಆಗಲಿದೆ. ಅನೂಪ್​ ರೇವಣ್ಣ ಮತ್ತು ಧನ್ಯಾ ರಾಮ್​ಕುಮಾರ್​ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾಗೆ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯಲು ಚಿತ್ರತಂಡದವರು ಕಾದಿದ್ದಾರೆ. ಗಣ್ಯರ ಸಮ್ಮುಖದಲ್ಲಿ ಟ್ರೇಲರ್​ ರಿಲೀಸ್​ ಮಾಡಲಾಗಿದೆ.

ಸಚಿವ ರಾಮಲಿಂಗ ರೆಡ್ಡಿ ಬಿಡುಗಡೆ ಮಾಡಿದ ‘ಹೈಡ್ ಆ್ಯಂಡ್​ ಸೀಕ್’ ಸಿನಿಮಾ ಟ್ರೇಲರ್‌
ಅನೂಪ್​ ರೇವಣ್ಣ, ಧನ್ಯಾ ರಾಮ್​ಕುಮಾರ್​, ಎಚ್​.ಎಂ.ರೇವಣ್ಣ, ರಾಮಲಿಂಗಾರೆಡ್ಡಿ
ಮದನ್​ ಕುಮಾರ್​
|

Updated on: Feb 28, 2024 | 12:24 PM

Share

ಕನ್ನಡದ ‘ಹೈಡ್​ ಆ್ಯಂಡ್​ ಸೀಕ್​’ (Hide and Seek) ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ (Ramalinga Reddy) ಅವರು ಈ ಟ್ರೇಲರ್​ ರಿಲೀಸ್​ ಮಾಡಿ ಶುಭ ಹಾರೈಸಿದ್ದಾರೆ. ಈ ಸಿನಿಮಾದಲ್ಲಿ ಡಾ. ರಾಜ್​ಕುಮಾರ್​ ಮೊಮ್ಮಗಳು ಧನ್ಯಾ ರಾಮ್​ಕುಮಾರ್​ ಮತ್ತು ಮಾಜಿ ಸಚಿವ ಎಚ್​.ಎಂ. ರೇವಣ್ಣ ಅವರ ಪುತ್ರ ಅನೂಪ್​ ರೇವಣ್ಣ (Anoop Revanna) ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅನೂಪ್ ರೇವಣ್ಣ ನಟನೆಯ 4ನೇ ಚಿತ್ರ ಇದು. ಮಾರ್ಚ್ 15ರಂದು ರಾಜ್ಯಾದ್ಯಂತ ‘ಹೈಡ್​ ಆ್ಯಂಡ್​ ಸೀಕ್​’ ತೆರೆಕಾಣಲಿದೆ. ಟ್ರೇಲರ್​ ಬಿಡುಗಡೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಹಾಜರಿದ್ದರು. ಎಲ್ಲರೂ ಈ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

‘ಸುನೇರಿ ಆರ್ಟ್ ಕ್ರಿಯೇಶನ್ಸ್’ ಮೂಲಕ ಪುನೀತ್ ನಾಗರಾಜು ಮತ್ತು ವಸಂತ್‌ ರಾವ್ ಎಂ. ಕುಲಕರ್ಣಿ ಅವರು ಜೊತೆಯಾಗಿ ‘ಹೈಡ್​ ಆ್ಯಂಡ್​ ಸೀಕ್​’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಪುನೀತ್ ನಾಗರಾಜು ಅವರು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ರಾಮಲಿಂಗಾರೆಡ್ಡಿ, ಎಸ್. ವಿಶ್ವನಾಥ್ ಹಾಗೂ ರೇವಣ್ಣ ಅವರ ಅನೇಕ ಸ್ನೇಹಿತರು ಬಂದು ಟ್ರೇಲರ್​ ಬಿಡುಗಡೆ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

‘ರೇವಣ್ಣ ಅವರ ಪುತ್ರ ಹೀರೋ ಆಗಿ ಅಭಿನಯಿಸಿರುವ ಈ ಸಿನಿಮಾ ಯಶಸ್ವಿ ಆಗಲಿ. ಇದು ಅವರ 4ನೇ ಸಿನಿಮಾ. ಟ್ರೇಲರ್​ನಲ್ಲಿ ಅವರ ನಟನೆ ಚೆನ್ನಾಗಿದೆ. ಸಿನಿಮಾ ಕೂಡ ಚೆನ್ನಾಗಿರುತ್ತದೆ ಎಂಬ ಭರವಸೆ ಇದೆ. ಈ ಚಿತ್ರದಲ್ಲಿ ಕೆಲಸ ಮಾಡಿದ ಎಲ್ಲರಿಗೂ ಒಳ್ಳೆಯ ಹೆಸರು ಸಿಗಲಿದೆ’ ಎಂದು ರಾಮಲಿಂಗ ರೆಡ್ಡಿ ಅವರು ವಿಶ್​ ಮಾಡಿದರು. ಪ್ರೊಫೆಸರ್ ಡಿ.ಕೆ. ರವಿ ಮಾತನಾಡಿ, ‘ಈ ಟ್ರೇಲರ್​ ತುಂಬ ಚೆನ್ನಾಗಿದೆ. ಅನೂಪ್ ಒಳ್ಳೆಯ ಹುಡುಗ. ಆತನಿಗೆ ಉತ್ತಮ ಭವಿಷ್ಯ ಇದೆ’ ಎಂದು ಹೇಳಿದರು.

‘ಹೈಡ್​ ಆ್ಯಂಡ್​ ಸೀಕ್​’ ಸಿನಿಮಾ ಟ್ರೇಲರ್​:

ಟ್ರೇಲರ್​ ಬಿಡುಗಡೆ ಬಳಿಕ ರೇವಣ್ಣ ಮಾತನಾಡಿದರು. ‘ಇಂದು ಚಿತ್ರರಂಗ ತುಂಬ ಚಾಲೆಂಜಿಂಗ್ ಕ್ಷೇತ್ರವಾಗಿದೆ. ಕನ್ನಡ ಚಿತ್ರರಂಗಕ್ಕೆ ಈ ಮೊದಲು ಸೀಮಿತ ಮಾರುಕಟ್ಟೆಯಿತ್ತು. ಆದರೆ ಈಗ ಅದು ವಿಸ್ತಾರ ಆಗಿದೆ. ಈ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ನಾನು ಅಲ್ಲಿಗೆ ಹೋಗಿದ್ದೆ. ಎಲ್ಲರೂ ಫ್ಯಾಮಿಲಿ ರೀತಿ ಸಿನಿಮಾ ಮಾಡಿದ್ದಾರೆ’ ಎಂದು ರೇವಣ್ಣ ಹೇಳಿದರು. ‘ಹೈಡ್​ ಆ್ಯಂಡ್​ ಸೀಕ್​’ ಚಿತ್ರಕ್ಕೆ ಪಿಜೋ ಪಿ. ಜಾನ್​ ಛಾಯಾಗ್ರಹಣ ಮಾಡಿದ್ದಾರೆ. ಮಧು ತುಂಬೆಕೆರೆ ಅವರು ಸಂಕಲನ ಈ ಸಿನಿಮಾಗಿದೆ. ಸ್ಯಾಂಡಿ ಅಡ್ಡಂಕಿ ಸಂಗೀತ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ಅನೂಪ್​ ರೇವಣ್ಣ ಜತೆ ಧನ್ಯಾ ರಾಮ್​ಕುಮಾರ್​ ‘ಹೈಡ್​ ಆ್ಯಂಡ್​ ಸೀಕ್​’; ಇಲ್ಲಿದೆ ಮೋಷನ್​ ಪೋಸ್ಟರ್​

ಅನೂಪ್ ರೇವಣ್ಣ ಅವರು ಈ ಸಿನಿಮಾದಲ್ಲಿ ಒಬ್ಬ ಕಿಡ್ನಾಪರ್ ಪಾತ್ರ ಮಾಡಿದ್ದಾರೆ. ನಾಯಕಿ ಧನ್ಯಾ ರಾಮ್‌ಕುಮಾರ್ ಅವರು ಉದ್ಯಮಿಯ ಮಗಳಾಗಿ ಕಾಣಿಸಿಕೊಂಡಿದ್ದಾರೆ. ಅವರ ಸಹೋದರ ಧೀರೇನ್ ರಾಮ್​ಕುಮಾರ್ ಅವರು ತಂಗಿಯ ಸಿನಿಮಾಗೆ ಶುಭ ಕೋರಿದ್ದಾರೆ. ಅಪಹರಣ ಕೂಡ ಒಂದು ಸಂಘಟನೆಯ ರೀತಿ ನಡೆಯುತ್ತದೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ ಎಂದು ನಿರ್ದೇಶಕ ಪುನೀತ್ ನಾಗರಾಜು ಹೇಳಿದ್ದಾರೆ. ಮಾಗಡಿ, ಚಿಕ್ಕಮಗಳೂರು ಹಾಗೂ ಬೆಂಗಳೂರಿನಲ್ಲಿ 30 ದಿನಗಳ ಶೂಟಿಂಗ್​ ಮಾಡಲಾಗಿದೆ. ಈ ಸಿನಿಮಾದಲ್ಲಿ ಕಥಾನಾಯಕನೇ ಕಿಡ್ನಾಪರ್! ಹೆಚ್ಚು ಮಾತನಾಡದ, ಯಾವುದನ್ನೂ ನೇರವಾಗಿ ಅಭಿವ್ಯಕ್ತಿಸದ ಹುಡುಗನಾಗಿ ಅನೂಪ್ ರೇವಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಮಾರ್ಚ್ 15ರಂದು ‘ಹೈಡ್​ ಆ್ಯಂಡ್​ ಸೀಕ್​’ ಸಿನಿಮಾ ಬಿಡುಗಡೆ ಆಗಲಿದ್ದು, ಪ್ರೇಕ್ಷಕರ ಪ್ರತಿಕ್ರಿಯೆ ತಿಳಿಯಲು ಚಿತ್ರತಂಡ ಕಾದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ