AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮನಗರ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ; ಏನು ಈ ಚಿತ್ರದ ಕಹಾನಿ?

ಹಳ್ಳಿಯಲ್ಲಿ ವ್ಯವಸಾಯ ಮಾಡಿಕೊಂಡಿರುವ ಯುವಕರ ಸಮಸ್ಯೆಗಳು ಒಂದೆರಡಲ್ಲ. ಅಂಥ ಸಮಸ್ಯೆಗಳನ್ನೇ ಕಥೆಯಾಗಿಸಿ ‘ರಾಮನಗರ’ ಸಿನಿಮಾ ಮಾಡಲಾಗಿದೆ. ಈ ಚಿತ್ರಕ್ಕೆ ವಿಜಯ್ ರಾಜ್ ಅವರು ನಿರ್ದೇಶನ ಮಾಡಿದ್ದಾರೆ. ಪ್ರಭು ಸೂರ್ಯ ಹೀರೋ ಆಗಿ ನಟಿಸಿದ್ದಾರೆ. ಯುಗಾದಿ ಹಬ್ಬದ ಸಮಯದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

‘ರಾಮನಗರ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ; ಏನು ಈ ಚಿತ್ರದ ಕಹಾನಿ?
Ramanagara Movie Team
ಮದನ್​ ಕುಮಾರ್​
|

Updated on: Mar 04, 2025 | 5:23 PM

Share

ರೈತರ ಕುರಿತು ಕಥೆ ಇರುವ ಸಿನಿಮಾಗಳು ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಬಂದಿವೆ. ಅವುಗಳ ಸಾಲಿಗೆ ‘ರಾಮನಗರ’ ಸಿನಿಮಾ ಕೂಡ ಸೇರ್ಪಡೆ ಆಗುತ್ತಿದೆ. ಇದರಲ್ಲಿ ಭಿನ್ನವಾದ ಕಥಾಹಂದರ ಇದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಸಿನಿಮಾದ ಹಾಡುಗಳು ಮತ್ತು ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಯಿತು. ರಾಮನಗರ ಜಿಲ್ಲೆ ಬೇವೂರು ಮಠದ ಪರಮಪೂಜ್ಯರು ಹಾಡುಗಳನ್ನು ರಿಲೀಸ್ ಮಾಡಿ ‘ರಾಮನಗರ’ (Ramanagara) ತಂಡಕ್ಕೆ ಶುಭ ಹಾರೈಸಿದರು. ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದವರು ಮಾತನಾಡಿದರು. ಪ್ರಭುಸೂರ್ಯ, ಶಿವಕುಮಾರ್ ಆರಾಧ್ಯ, ತಮ್ಮಣ್ಣ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಅಷ್ಟಕ್ಕೂ ‘ರಾಮನಗರ’ ಎಂದು ಊರಿನ ಹೆಸರನ್ನೇ ಶೀರ್ಷಿಕೆಯಾಗಿ ಇಟ್ಟಿದ್ದು ಯಾಕೆ? ಈ ಚಿತ್ರತಂಡ ಮಾಹಿತಿ ನೀಡಿದೆ. ‘ಈ ರೀತಿ ಶೀರ್ಷಿಕೆ ಇದ್ದರೂ ಕೂಡ ಇದು ರೈತನ ಕಥೆ ಇರುವ ಸಿನಿಮಾ. ವಿದ್ಯಾವಂತನಾದ ದೇಶಾಭಿಮಾನಿ ರೈತನ ಕಹಾನಿ. ಹಳ್ಳಿಯಲ್ಲಿ ಓದಿದ ಹುಡುಗನೊಬ್ಬ ಕೆಲಸ ಹುಡುಕಿಕೊಂಡ ನಗರಕ್ಕೆ ಬರುವ ಬದಲು ಹಳ್ಳಿಯಲ್ಲೇ ಇದ್ದುಕೊಂಡು ರೈತನಾಗುತ್ತಾನೆ. ಆ ಮೂಲಕ ಇತರ ವಿದ್ಯಾವಂತ ಯುವಕರಿಗೂ ಮಾದರಿ ಆಗುತ್ತಾನೆ. ಇದು ಈ ಸಿನಿಮಾದ ಕತೆ’ ಎಂದು ನಿರ್ದೇಶಕ ವಿಜಯ್ ರಾಜ್ ಹೇಳಿದ್ದಾರೆ.

ಯುಗಾದಿ ವೇಳೆಗೆ ‘ರಾಮನಗರ’ ಸಿನಿಮಾ ಬಿಡುಗಡೆ ಮಾಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಉದ್ಯಮಿ ಆಗಿರುವ ಸಿ.ಕೆ. ಮಂಜುನಾಥ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇದು ಅವರ ಮೊದಲ ಸಿನಿಮಾ. ಕೆವಿನ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. 3 ಹಾಡುಗಳು ಇವೆ. ‘ಸಿರಿ ಮ್ಯೂಸಿಕ್’ ಮೂಲಕ ಹಾಡುಗಳು ಬಿಡುಗಡೆ ಆಗಿದೆ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಇದನ್ನೂ ಓದಿ: ಕರ್ನಾಟಕ ಎಲ್ಲಿದೆ ಅಂತ ಗೊತ್ತಿಲ್ಲ: ರಶ್ಮಿಕಾ ಹೀಗೆ ಹೇಳಿದ್ದು ನಿಜವೇ? ಆಪ್ತರು ಹೇಳೋದು ಏನು?

ಈ ಸಿನಿಮಾದಲ್ಲಿ ಪ್ರಭುಸೂರ್ಯ ಅವರು ನಾಯಕನಾಗಿ ನಟಿಸಿದ್ದಾರೆ. ‘ಹಳ್ಳಿಯ ಯುವಕರು ವಿದ್ಯಾವಂತರಾಗಿ ಕೃಷಿಕನಾಗುತ್ತೇನೆ ಎಂದರೆ ಯಾವೆಲ್ಲ ಸವಾಲುಗಳು ಎದುರಾಗುತ್ತವೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಅಂತಹ ಸಮಸ್ಯೆಗಳನ್ನು ದಾಟಿಕೊಂಡು ಆದರ್ಶ ರೈತನಾಗುವ ಯುವಕನ ಕಥೆ ಈ ಸಿನಿಮಾದಲ್ಲಿ ಇದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್