AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮನಗರ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ; ಏನು ಈ ಚಿತ್ರದ ಕಹಾನಿ?

ಹಳ್ಳಿಯಲ್ಲಿ ವ್ಯವಸಾಯ ಮಾಡಿಕೊಂಡಿರುವ ಯುವಕರ ಸಮಸ್ಯೆಗಳು ಒಂದೆರಡಲ್ಲ. ಅಂಥ ಸಮಸ್ಯೆಗಳನ್ನೇ ಕಥೆಯಾಗಿಸಿ ‘ರಾಮನಗರ’ ಸಿನಿಮಾ ಮಾಡಲಾಗಿದೆ. ಈ ಚಿತ್ರಕ್ಕೆ ವಿಜಯ್ ರಾಜ್ ಅವರು ನಿರ್ದೇಶನ ಮಾಡಿದ್ದಾರೆ. ಪ್ರಭು ಸೂರ್ಯ ಹೀರೋ ಆಗಿ ನಟಿಸಿದ್ದಾರೆ. ಯುಗಾದಿ ಹಬ್ಬದ ಸಮಯದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

‘ರಾಮನಗರ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ; ಏನು ಈ ಚಿತ್ರದ ಕಹಾನಿ?
Ramanagara Movie Team
ಮದನ್​ ಕುಮಾರ್​
|

Updated on: Mar 04, 2025 | 5:23 PM

Share

ರೈತರ ಕುರಿತು ಕಥೆ ಇರುವ ಸಿನಿಮಾಗಳು ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಬಂದಿವೆ. ಅವುಗಳ ಸಾಲಿಗೆ ‘ರಾಮನಗರ’ ಸಿನಿಮಾ ಕೂಡ ಸೇರ್ಪಡೆ ಆಗುತ್ತಿದೆ. ಇದರಲ್ಲಿ ಭಿನ್ನವಾದ ಕಥಾಹಂದರ ಇದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಸಿನಿಮಾದ ಹಾಡುಗಳು ಮತ್ತು ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಯಿತು. ರಾಮನಗರ ಜಿಲ್ಲೆ ಬೇವೂರು ಮಠದ ಪರಮಪೂಜ್ಯರು ಹಾಡುಗಳನ್ನು ರಿಲೀಸ್ ಮಾಡಿ ‘ರಾಮನಗರ’ (Ramanagara) ತಂಡಕ್ಕೆ ಶುಭ ಹಾರೈಸಿದರು. ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದವರು ಮಾತನಾಡಿದರು. ಪ್ರಭುಸೂರ್ಯ, ಶಿವಕುಮಾರ್ ಆರಾಧ್ಯ, ತಮ್ಮಣ್ಣ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಅಷ್ಟಕ್ಕೂ ‘ರಾಮನಗರ’ ಎಂದು ಊರಿನ ಹೆಸರನ್ನೇ ಶೀರ್ಷಿಕೆಯಾಗಿ ಇಟ್ಟಿದ್ದು ಯಾಕೆ? ಈ ಚಿತ್ರತಂಡ ಮಾಹಿತಿ ನೀಡಿದೆ. ‘ಈ ರೀತಿ ಶೀರ್ಷಿಕೆ ಇದ್ದರೂ ಕೂಡ ಇದು ರೈತನ ಕಥೆ ಇರುವ ಸಿನಿಮಾ. ವಿದ್ಯಾವಂತನಾದ ದೇಶಾಭಿಮಾನಿ ರೈತನ ಕಹಾನಿ. ಹಳ್ಳಿಯಲ್ಲಿ ಓದಿದ ಹುಡುಗನೊಬ್ಬ ಕೆಲಸ ಹುಡುಕಿಕೊಂಡ ನಗರಕ್ಕೆ ಬರುವ ಬದಲು ಹಳ್ಳಿಯಲ್ಲೇ ಇದ್ದುಕೊಂಡು ರೈತನಾಗುತ್ತಾನೆ. ಆ ಮೂಲಕ ಇತರ ವಿದ್ಯಾವಂತ ಯುವಕರಿಗೂ ಮಾದರಿ ಆಗುತ್ತಾನೆ. ಇದು ಈ ಸಿನಿಮಾದ ಕತೆ’ ಎಂದು ನಿರ್ದೇಶಕ ವಿಜಯ್ ರಾಜ್ ಹೇಳಿದ್ದಾರೆ.

ಯುಗಾದಿ ವೇಳೆಗೆ ‘ರಾಮನಗರ’ ಸಿನಿಮಾ ಬಿಡುಗಡೆ ಮಾಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಉದ್ಯಮಿ ಆಗಿರುವ ಸಿ.ಕೆ. ಮಂಜುನಾಥ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇದು ಅವರ ಮೊದಲ ಸಿನಿಮಾ. ಕೆವಿನ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. 3 ಹಾಡುಗಳು ಇವೆ. ‘ಸಿರಿ ಮ್ಯೂಸಿಕ್’ ಮೂಲಕ ಹಾಡುಗಳು ಬಿಡುಗಡೆ ಆಗಿದೆ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಇದನ್ನೂ ಓದಿ: ಕರ್ನಾಟಕ ಎಲ್ಲಿದೆ ಅಂತ ಗೊತ್ತಿಲ್ಲ: ರಶ್ಮಿಕಾ ಹೀಗೆ ಹೇಳಿದ್ದು ನಿಜವೇ? ಆಪ್ತರು ಹೇಳೋದು ಏನು?

ಈ ಸಿನಿಮಾದಲ್ಲಿ ಪ್ರಭುಸೂರ್ಯ ಅವರು ನಾಯಕನಾಗಿ ನಟಿಸಿದ್ದಾರೆ. ‘ಹಳ್ಳಿಯ ಯುವಕರು ವಿದ್ಯಾವಂತರಾಗಿ ಕೃಷಿಕನಾಗುತ್ತೇನೆ ಎಂದರೆ ಯಾವೆಲ್ಲ ಸವಾಲುಗಳು ಎದುರಾಗುತ್ತವೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಅಂತಹ ಸಮಸ್ಯೆಗಳನ್ನು ದಾಟಿಕೊಂಡು ಆದರ್ಶ ರೈತನಾಗುವ ಯುವಕನ ಕಥೆ ಈ ಸಿನಿಮಾದಲ್ಲಿ ಇದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ