AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮರಸ’ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್; ಭಿನ್ನ ಪಾತ್ರದಲ್ಲಿ ನಟ

Ramarasa movie: ಕನ್ನಡ ನಟ ಪ್ರಜ್ವಲ್ ದೇವರಾಜ್ 'ರಾಮರಸ' ಸಿನಿಮಾದಲ್ಲಿ ಗುರುಸಿದ್ಧನ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ರಾಮನವಮಿಯಂದು ವಿನಯ್ ಗುರೂಜಿ ಅನಾವರಣಗೊಳಿಸಿದ ಅವರ ಲುಕ್ ಪೋಸ್ಟರ್ ವೈರಲ್ ಆಗಿದೆ. ಪೋಸ್ಟರ್‌ನಲ್ಲಿ ಪ್ರಜ್ವಲ್ ಉದ್ದನೆಯ ಕೂದಲು, ರುದ್ರಾಕ್ಷಿ ಮಾಲೆ ಮತ್ತು ಕೋಪಭರಿತ ನೋಟದಿಂದ ಮಿಂಚಿದ್ದಾರೆ.

‘ರಾಮರಸ’ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್; ಭಿನ್ನ ಪಾತ್ರದಲ್ಲಿ ನಟ
ರಾಮರಸ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on:Mar 27, 2026 | 3:07 PM

Share

ಕನ್ನಡದ ನಟ ಪ್ರಜ್ವಲ್ ದೇವರಾಜ್ ಅವರು ಹಲವು ಸಿನಿಮಾಗಳಲ್ಲಿ ನಟಿಸಿದವರು. ಅವರು ಈಗ ಕಾರ್ತಿಕ್ ಮಹೇಶ್ ನಟನೆಯ ‘ರಾಮರಸ’ ಸಿನಿಮಾದ ಭಾಗ ಆಗುತ್ತಿದ್ದಾರೆ. ಸಾಕಷ್ಟು ಭಿನ್ನ ಶೈಲಿಯಲ್ಲಿ ಮೂಡಿ ಬರುತ್ತಿರುವ ಈ ಚಿತ್ರದಲ್ಲಿ ಪ್ರಜ್ವಲ್ ಅವರು ಗುರುಸಿದ್ಧನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಗಮನ ಸೆಳೆದಿದೆ.

ರಾಮನವಮಿ ಪ್ರಯುಕ್ತ ‘ರಾಮರಸ’ ಚಿತ್ರದಲ್ಲಿನ ಪ್ರಜ್ವಲ್ ದೇವರಾಜ್ ಲುಕ್ ಅನಾವರಣಗೊಂಡಿದೆ. ವಿನಯ್ ಗುರೂಜಿ ಅವರು ಈ ಲುಕ್ ಅನಾವರಣ ಮಾಡಿದರು. ಪೋಸ್ಟರ್​ ಅಲ್ಲಿ ಉದ್ದನೆಯ ಕೂದಲು ಬಿಟ್ಟು, ಕತ್ತಲ್ಲಿ ರುದ್ರಾಕ್ಷಿ ಮಾಲೆ ಧರಿಸಿದ್ದಾರೆ ಪ್ರಜ್ವಲ್. ಮುಖದಲ್ಲಿ ಕೋಪ ಮನೆ ಮಾಡಿದೆ. ಹಿಂಭಾಗದಲ್ಲಿ ನಾನಾ ರೀತಿಯ ಕಟ್ಟಡಗಳನ್ನು ಕಾಣಬಹುದು. ಅವರ ಪಾತ್ರದ ಪೋಸ್ಟರ್​​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಸಿನಿಮಾದಲ್ಲಿ ಈ ಪಾತ್ರ ತುಂಬಾನೇ ಪ್ರಾಮುಖ್ಯತೆ ಪಡೆಯಲಿದೆಯಂತೆ.

‘ದೈವಿಕ ಕಥೆಗೆ ಅದ್ಭುತ ಸೇರ್ಪಡೆ. ಸಿನಿಪಯಣದ ಈ ಅದ್ಧೂರಿ ಪಥದಲ್ಲಿ, ಈಗ ಪ್ರಜ್ವಲ್ ದೇವರಾಜ್ ಅವರ ಸಾಟಿಯಿಲ್ಲದ ಪ್ರತಿಭೆ ನಮಗೆ ಜೊತೆಯಾಗಿದೆ. ರಾಮರಸದ ಈ ಮಹಾನ್ ಕಥಾ ಲೋಕಕ್ಕೆ ಗುರು ಸಿದ್ಧರಿಗೆ ಆತ್ಮೀಯ ಸ್ವಾಗತ. ಇದು ಬರೀ ಸಿನಿಮಾ ಅಲ್ಲ, ಒಂದು ಅದ್ಭುತ ಅನುಭವ’ ಎಂದು ಪೋಸ್ಟರ್ ಕ್ಯಾಪ್ಶನ್ ಅಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: ‘ರಾಮರಸ’ ಚಿತ್ರದಲ್ಲಿ ಮಿಂಚಲು ಬಂದ ‘ಅಧ್ಯಕ್ಷ’ ಸುಂದರಿ ಹೆಬಾ ಪಟೇಲ್

‘ರಾಮರಸ’ ಸಿನಿಮಾದಲ್ಲಿ ಮಾಟ ಮಂತ್ರದ ವಿಷಯಗಳು ಹೈಲೈಟ್ ಆಗಿವೆ. ಕಾರ್ತಿಕ್ ಮಹೇಶ್, ಪ್ರಜ್ವಲ್ ದೇವರಾಜ್ ಜೊತೆಗೆ ಶರಣ್ ಕೂಡ ನಟಿಸಿದ್ದಾರೆ. ಇನ್ನೂ ಅನೇಕ ಕಲಾವಿದರು ಸಿನಿಮಾದ ಭಾಗ ಆಗಲಿದ್ದು, ಅದನ್ನು ಗುಟ್ಟಾಗಿಯೇ ಇಡಲಾಗಿದೆ. ಮುಂದಿನ ದಿನಗಳಲ್ಲಿ ಅದನ್ನು ರಿವೀಲ್ ಮಾಡುವ ಸಾಧ್ಯತೆ ಇದೆ.

ಎಂಬಿ ಗಿರಿರಾಜ್ ಅವರು ‘ರಾಮರಸ’ ಚಿತ್ರಕ್ಕೆ ಕಥೆ ಬರೆದು, ನಿರ್ದೇಶನ ಮಾಡಿದ್ದಾರೆ. ಗುರು ದೇಶಪಾಂಡೆ ಅವರು ಕ್ರಿಯೇಟಿವ್ ಹೆಡ್ ಆಗಿದ್ದಾರೆ. ಗುರು ದೇಶಪಾಂಡೆ ಹಾಗೂ ವಿಕ್ರಂ ಆರ್ಯ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸುಗುಣ ಜಯಪಾಲ್ ಚಿತ್ರದ ಸಹ ನಿರ್ಮಾಪಕರು. ಈ ಸಿನಿಮಾದಲ್ಲಿ ಕಾರ್ತಿಕ್ ಮಹೇಶ್ ಪಾತ್ರ ಕೂಡ ಗಮನ ಸೆಳೆಯುವ ರೀತಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:01 pm, Fri, 27 March 26

Follow Us
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ