AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ್ಮದಿನಕ್ಕೆ ವಿಶ್​ ಮಾಡಲು ಫೋನ್​ ನಂಬರ್​ ಕೊಟ್ಟ ರಮೇಶ್​ ಅರವಿಂದ್​; ಇಲ್ಲಿದೆ ಸೂಪರ್​ ಅವಕಾಶ

Ramesh Aravind Birthday: ರಮೇಶ್​ ಅರವಿಂದ್ ​ನೀಡಿದ ಮೊಬೈಲ್​ ಸಂಖ್ಯೆಗೆ ವಾಟ್ಸಪ್​ ಸಂದೇಶ ಕಳಿಸುವ ಮೂಲಕ ​ಹುಟ್ಟುಹಬ್ಬದ ಶುಭಾಶಯ ತಿಳಿಸಬಹುದು. ಅಲ್ಲದೇ,​ ಅವರಿಗೆ ಏನಾದರೂ ಪ್ರಶ್ನೆಗಳನ್ನೂ ಕೇಳಬಹುದು.

ಜನ್ಮದಿನಕ್ಕೆ ವಿಶ್​ ಮಾಡಲು ಫೋನ್​ ನಂಬರ್​ ಕೊಟ್ಟ ರಮೇಶ್​ ಅರವಿಂದ್​; ಇಲ್ಲಿದೆ ಸೂಪರ್​ ಅವಕಾಶ
ರಮೇಶ್ ಅರವಿಂದ್
TV9 Web
| Edited By: |

Updated on: Sep 09, 2022 | 3:01 PM

Share

ನಟ, ನಿರ್ದೇಶಕ, ನಿರೂಪಕ ರಮೇಶ್​ ಅರವಿಂದ್​ (Ramesh Aravind) ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ವಿವಿಧ ಬಗೆಯ ಪಾತ್ರಗಳ ಮೂಲಕ ಜನಮನ ಗೆ​ದ್ದಿರುವ ಅವರು ಇಂದಿಗೂ ಸಖತ್​ ಬೇಡಿಕೆ ಉಳಿಸಿಕೊಂಡಿದ್ದಾರೆ. ಕನ್ನಡದ ಚಿತ್ರರಂಗದಲ್ಲಿ ಅವರು ಎವರ್​ಗ್ರೀನ್ ಹೀರೋ ಆಗಿ ಮಿಂಚುತ್ತಿದ್ದಾರೆ. ಸೆಪ್ಟೆಂಬರ್​ 10ರಂದು ರಮೇಶ್​ ಅರವಿಂದ್​ ಜನ್ಮದಿನ (Ramesh Aravind Birthday) . ಈ ವಿಶೇಷ ದಿನದಂದು ಅವರಿಗೆ ಶುಭಾಶಯ ತಿಳಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ನೇರವಾಗಿ ವಿಶ್​ ಮಾಡುವುದು ಕಷ್ಟ. ಅದಕ್ಕಾಗಿ ಸ್ವತಃ ರಮೇಶ್​ ಅರವಿಂದ್​ ಕಡೆಯಿಂದ ಒಂದು ದೊಡ್ಡ ಆಫರ್​ ನೀಡಲಾಗಿದೆ. ಅಭಿಮಾನಿಗಳಿಗಾಗಿ ಅವರು ಫೋನ್​ ನಂಬರ್​ (Ramesh Aravind Phone Number) ನೀಡಿದ್ದಾರೆ. ಆ ನಂಬರ್​ಗೆ ವಾಟ್ಸಾಪ್​ ಸಂದೇಶ ಕಳಿಸುವ ಮೂಲಕ ನೆಚ್ಚಿನ ನಟನಿಗೆ ನೀವು ವಿಶ್​ ಮಾಡಬಹುದು.

ಕನ್ನಡ ಚಿತ್ರರಂಗದಲ್ಲಿ ರಮೇಶ್​ ಅವರು ವಿಶೇಷ ಛಾಪು ಮೂಡಿಸಿದ್ದಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿದ ಅನುಭವ ಅವರಿಗೆ ಇದೆ. ಅವರ ಪಾಸಿಟಿವ್​ ಮಾತುಗಳಿಗೆ ಎಲ್ಲರೂ ತಲೆದೂಗುತ್ತಾರೆ. ಅನೇಕ ಶಾಲೆ-ಕಾಲೇಜುಗಳಲ್ಲಿ ಅವರು ಮೋಟಿವೇಷನಲ್​ ಸ್ಪೀಚ್​ ನೀಡಿದ್ದಾರೆ. ಹಾಗಾಗಿ ರಮೇಶ್​ ಅರವಿಂದ್​ ಅವರಿಗೆ ಎಲ್ಲ ವಯಸ್ಸಿನ ಅಭಿಮಾನಿಗಳು ಇದ್ದಾರೆ. ಅಂಥ ಎಲ್ಲ ಅಭಿಮಾನಿಗಳು 8951599009 ಮತ್ತು 8951699009 ಮೊಬೈಲ್​ ಸಂಖ್ಯೆಗೆ ವಾಟ್ಸಪ್​ ಸಂದೇಶ ಕಳಿಸುವ ಮೂಲಕ ರಮೇಶ್​ ಅರವಿಂದ್​ ಹುಟ್ಟುಹಬ್ಬಕ್ಕೆ ಶುಭ ಹಾರೈಸಬಹುದು.

ಬರೀ ವಿಶ್​ ಮಾಡುವುದು ಮಾತ್ರವಲ್ಲದೇ ರಮೇಶ್​ ಅರವಿಂದ್​ ಅವರಿಗೆ ಏನಾದರೂ ಪ್ರಶ್ನೆಗಳನ್ನೂ ಕೇಳಬಹುದು. ಹೀಗೆ ಮೆಸೇಜ್ ಮಾಡುವಾಗ ನಿಮ್ಮ ಹೆಸರು, ಊರು ಮತ್ತು ಜಿಲ್ಲೆಯನ್ನು ತಪ್ಪದೇ ನಮೂದಿಸಿರಬೇಕು. ಮೆಸೇಜ್​ ಮಾಡಿದ ಪ್ರತಿಯೊಬ್ಬರಿಗೂ ರಮೇಶ್​ ಅರವಿಂದ್​ ಅವರೇ ಸ್ವತಃ ಪ್ರತಿಕ್ರಿಯೆ ನೀಡಲಿದ್ದಾರೆ. ಎಲ್ಲರಿಗಿಂತ ವಿಭಿನ್ನವಾಗಿ ಶುಭಾಶಯ ತಿಳಿಸಿದವರಿಗೆ ಖುದ್ದಾಗಿ ರಮೇಶ್ ಅರವಿಂದ್ ಕರೆ ಮಾಡಿ ಮಾತನಾಡಲಿದ್ದಾರೆ ಎಂಬುದು ವಿಶೇಷ.

ಇದನ್ನೂ ಓದಿ
Image
ರಮೇಶ್​ ಅರವಿಂದ್​ ಜತೆ ‘ಶಿವಾಜಿ ಸುರತ್ಕಲ್​ 2’ ಚಿತ್ರದಲ್ಲಿ ನಟಿಸಲಿರುವ ಖ್ಯಾತ ನಟ ನಾಸರ್​
Image
2022ರ ಪೂರ್ತಿ ರಮೇಶ್​ ಅರವಿಂದ್​ ವಿಶೇಷ ಮಾತುಗಳು; ಹೊಸ ಪ್ರಯತ್ನಕ್ಕೆ ಕೈ ಹಾಕಿದ ಎವರ್​ಗ್ರೀನ್​ ನಟ
Image
‘100’ ಚಿತ್ರದಲ್ಲಿ ಸೈಬರ್​ ಕ್ರೈಂ ಕಥೆ; ತೆರೆ ಹಿಂದೆಯೂ, ತೆರೆ ಮೇಲೂ ರಮೇಶ್​ ಅರವಿಂದ್​ ಕಸುಬುದಾರಿಕೆ
Image
ಚಿತ್ರರಂಗದ ಸಮಸ್ಯೆಗಳಿಗೆ ಟಿವಿ9 ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಬಳಿ ಪರಿಹಾರ ಕೇಳಿದ ರಮೇಶ್​ ಅರವಿಂದ್​

2020ರಲ್ಲಿ ರಮೇಶ್​ ಅರವಿಂದ್​ ನಟಿಸಿದ ‘ಶಿವಾಜಿ ಸುರತ್ಕಲ್​’ ಸಿನಿಮಾ ಸೂಪರ್​ ಹಿಟ್​ ಆಯಿತು. ಈಗ ಆ ಚಿತ್ರಕ್ಕೆ ಸೀಕ್ವೆಲ್​ ಸಿದ್ಧವಾಗುತ್ತಿದೆ. ಮತ್ತೆ ಡಿಟೆಕ್ಟೀವ್​ ಆಗಿ ಅಭಿಮಾನಿಗಳನ್ನು ಅವರು ರಂಜಿಸಲಿದ್ದಾರೆ. ಇನ್ನೊಂದು ಕೇಸ್​ ಪತ್ತೆ ಹಚ್ಚಲು ಅವರು ಜನರ ಮುಂದೆ ಬರಲಿದ್ದಾರೆ. ‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಆಕಾಶ್​ ಶ್ರೀವಸ್ತ ನಿರ್ದೇಶನ ಮಾಡುತ್ತಿದ್ದಾರೆ. ರೇಖಾ ಕೆಎನ್​ ಮತ್ತು ಅನೂಪ್​ ಗೌಡ ನಿರ್ಮಾಣ ಮಾಡುತ್ತಿ​ದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು