AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಅರವಿಂದ್ ಜನ್ಮದಿನದಂದು ಘೋಷಣೆ ಆಯ್ತು ಹೊಸ ಸಿನಿಮಾ; ಚಿತ್ರಕ್ಕೆ ‘ದೈಜಿ’ ಶೀರ್ಷಿಕೆ

‘ದೈಜಿ’ ಸಿನಿಮಾಗೆ ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ಬಂಡವಾಳ ಹೂಡುತ್ತಿದ್ದಾರೆ. ರಮೇಶ್ ಅರವಿಂದ್ ಹಾಗೂ ಆಕಾಶ ಶ್ರೀವತ್ಸ ಅವರ ಹಿಟ್ ಕಾಂಬಿನೇಷನ್ ಮತ್ತೊಮ್ಮೆ ಒಂದಾಗುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಸಿನಿಮಾದ ಮೊದಲ ಪೋಸ್ಟರ್ ಗಮನ ಸೆಳೆಯುತ್ತಿದೆ.

ರಮೇಶ್ ಅರವಿಂದ್ ಜನ್ಮದಿನದಂದು ಘೋಷಣೆ ಆಯ್ತು ಹೊಸ ಸಿನಿಮಾ; ಚಿತ್ರಕ್ಕೆ ‘ದೈಜಿ’ ಶೀರ್ಷಿಕೆ
ರಮೇಶ್ ಅರವಿಂದ್
ರಾಜೇಶ್ ದುಗ್ಗುಮನೆ
|

Updated on:Sep 10, 2023 | 11:53 AM

Share

ರಮೇಶ್ ಅರವಿಂದ್ (Ramesh Aravind) ಅವರಿಗೆ ಇಂದು (ಸೆಪ್ಟೆಂಬರ್ 10) ಜನ್ಮದಿನದ ಸಂಭ್ರಮ. ಅವರಿಗೆ ಅನೇಕ ಸೆಲೆಬ್ರಿಟಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಸೆಲೆಬ್ರಿಟಿಗಳ ಹುಟ್ಟುಹಬ್ಬದ ದಿನ ಹೊಸ ಸಿನಿಮಾ ಘೋಷಣೆ ಆಗುತ್ತವೆ. ಅದೇ ರೀತಿ ರಮೇಶ್ ಅರವಿಂದ್ ಅವರ ಹೊಸ ಸಿನಿಮಾ ಅನೌನ್ಸ್ ಆಗಿದೆ. ಈ ಚಿತ್ರಕ್ಕೆ ‘ದೈಜಿ’ (Daiji Movie) ಎಂದು ಶೀರ್ಷಿಕೆ ಇಡಲಾಗಿದೆ. ‘ಶಿವಾಜಿ ಸುರತ್ಕಲ್ 1’ ಹಾಗೂ ‘ಶಿವಾಜಿ ಸುರತ್ಕಲ್ 2’ ಯಶಸ್ಸಿನ ಬೆನ್ನಲ್ಲೇ ರಮೇಶ್ ಅರವಿಂದ್ ಮತ್ತು ನಿರ್ದೇಶಕ ಆಕಾಶ್ ಶ್ರೀವತ್ಸ ಮತ್ತೊಮ್ಮೆ ಕೈಜೋಡಿಸುತ್ತಿದ್ದಾರೆ ಅನ್ನೋದು ವಿಶೇಷ.

‘ದೈಜಿ’ ಸಿನಿಮಾಗೆ ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ಬಂಡವಾಳ ಹೂಡುತ್ತಿದ್ದಾರೆ. ರಮೇಶ್ ಅರವಿಂದ್ ಹಾಗೂ ಆಕಾಶ ಶ್ರೀವತ್ಸ ಅವರ ಹಿಟ್ ಕಾಂಬಿನೇಷನ್ ಮತ್ತೊಮ್ಮೆ ಒಂದಾಗುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಸಿನಿಮಾದ ಮೊದಲ ಪೋಸ್ಟರ್ ಗಮನ ಸೆಳೆಯುತ್ತಿದೆ. ಅಷ್ಟಕ್ಕೂ ಈ ಶೀರ್ಷಿಕೆಯ ಅರ್ಥವೇನು? ಆಪ್ರಶ್ನೆಗೂ ಉತ್ತರ ಇದೆ.

‘ದೈಜಿ’ ಎಂಬುದಕ್ಕೆ ಬೇರೆ ಬೇರೆ ಭಾಷೆಗಳಲ್ಲಿ ಬೇರೆ ಬೇರೆ ರೀತಿಯ ಅರ್ಥಗಳಿವೆ. ಕೊಂಕಣಿ ಭಾಷೆಯಲ್ಲಿ ದೈಜಿ ಎಂದರೆ ರಕ್ತ ಸಂಬಂಧ. ಜಪಾನ್​ನಲ್ಲಿ ದೈಜಿ ಎಂದರೆ ಬಹಳ ಕಾಳಜಿ ವಹಿಸಬೇಕಾದ ವಿಚಾರ ಎಂಬರ್ಥವಿದೆ. ಶೀರ್ಷಿಕೆ ಒಂದೇ ಆದರೂ ಹಲವು ಅರ್ಥಗಳು ಇವೆ  ಎನ್ನುತ್ತದೆ ಚಿತ್ರತಂಡ. ಪವನ್ ಕುಮಾರ್ ಅವರ ‘ಲೂಸಿಯಾ’, ಧನಂಜಯ್ ನಟನೆಯ ‘ಬದ್ಮಾಶ್’ ಸಿನಿಮಾ ಇದೇ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿದ್ದವು. ಈಗ ‘ದೈಜಿ’ ಹೆಸರಿನ ಭಿನ್ನ ಶೀರ್ಷಿಕೆ ಒಂದಿಗೆ ನಿರ್ಮಾಪಕರು ಬಂದಿದ್ದಾರೆ.

ಇದನ್ನೂ ಓದಿ: ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದ ಯದುವೀರ್ ಒಡೆಯರ್  

‘ದೈಜಿ ಸಿನಿಮಾ ಹಾರರ್, ಮಿಸ್ಟರಿ ಶೈಲಿಯಲ್ಲಿ ಮೂಡಿ ಬರುತ್ತಿದೆ. ರವಿ ಕಶ್ಯಪ್ ವಿವರಿಸಿದ ನೈಜ ಘಟನೆಗಳನ್ನು ಆಧರಿಸಿ ಅಭಿಜಿತ್ ವೈ ಆರ್ ಮತ್ತು ಆಕಾಶ್ ಶ್ರೀವತ್ಸ ಅವರು ಸಿನಿಮಾಗೆ ಚಿತ್ರಕಥೆ ಬರೆದಿದ್ದಾರೆ. ಸಿನಿಮಾಗೆ ನಾಯಕಿಯರ ಹುಡುಕಾಟ ನಡೆಯುತ್ತಿದೆ. ಈ ವರ್ಷ ಡಿಸೆಂಬರ್ ಅಥವಾ 2024ರ ಜನವರಿ ತಿಂಗಳಲ್ಲಿ ಚಿತ್ರದ ಶೂಟಿಂಗ್ ಆರಂಭ ಆಗಲಿದೆ. ಇದರ ಕಥೆ ಅಮೆರಿಕದಲ್ಲೇ ಸಾಗಲಿದೆ. ಇದು ರಮೇಶ್ ಅವರ 106ನೇ ಸಿನಿಮಾ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:51 am, Sun, 10 September 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?