AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramesh Aravind Birthday: ಕೈಕೋಳ ತೊಟ್ಟು ಬಂದ ಶಿವಾಜಿ ಸುರತ್ಕಲ್​; ಸೂಪರ್​ ಹಿಟ್​ ಚಿತ್ರದ ಸೀಕ್ವೆಲ್​ಗೆ ಸಿದ್ಧತೆ

Shivaji Surathkal 2: ರಮೇಶ್ ಅರವಿಂದ್​ ಜನ್ಮದಿನದ ಪ್ರಯುಕ್ತ ‘ಶಿವಾಜಿ ಸುರತ್ಕಲ್​ 2’ ಚಿತ್ರದ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಅದನ್ನು ಕಂಡು ಅವರ ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ರಮೇಶ್​ಗೆ ಹುಟ್ಟುಹಬ್ಬದ ಶುಭಕೋರಲಾಗುತ್ತಿದೆ.

Ramesh Aravind Birthday: ಕೈಕೋಳ ತೊಟ್ಟು ಬಂದ ಶಿವಾಜಿ ಸುರತ್ಕಲ್​; ಸೂಪರ್​ ಹಿಟ್​ ಚಿತ್ರದ ಸೀಕ್ವೆಲ್​ಗೆ ಸಿದ್ಧತೆ
ರಮೇಶ್ ಅರವಿಂದ್
TV9 Web
| Edited By: |

Updated on: Sep 10, 2021 | 1:20 PM

Share

ನಟ ರಮೇಶ್​ ಅರವಿಂದ್​ ಪಾಲಿಗೆ ಇಂದು (ಸೆ.10) ಎರಡೆರಡು ಸಂಭ್ರಮ. ಅವರ ಹುಟ್ಟುಹಬ್ಬದ ದಿನವೇ ಗೌರಿ-ಗಣೇಶ್​ ಹಬ್ಬ ಕೂಡ ಬಂದಿದೆ. ಈ ಖುಷಿಯನ್ನು ದುಪ್ಪಟ್ಟು ಮಾಡಲು ‘ಶಿವಾಜಿ ಸುರತ್ಕಲ್​ 2’ ಚಿತ್ರದ ಹೊಸ ಪೋಸ್ಟರ್​ ರಿಲೀಸ್​ ಆಗಿದೆ. ‘ಶಿವಾಜಿ ಸುರತ್ಕಲ್​’ ಸಿನಿಮಾ ಮಾಡಿದ್ದ ತಂಡವೇ ಸೇರಿಕೊಂಡು ಈಗ ಅದರ ಎರಡನೇ ಪಾರ್ಟ್​ ತಯಾರಿಸುತ್ತಿದೆ. ಆಕಾಶ್​ ಶ್ರೀವತ್ಸ ನಿರ್ದೇಶನ ಮಾಡುತ್ತಿದ್ದು, ರೇಖಾ ಕೆ.ಎನ್​. ಹಾಗೂ ಅನೂಪ್​ ಗೌಡ ನಿರ್ಮಾಣದ ಹೊಣೆ ಹೊತ್ತಿದ್ದಾರೆ.

2020ರ ಆರಂಭದಲ್ಲಿ ಲಾಕ್​ಡೌನ್​ ಶುರು ಆಗುವುದಕ್ಕೂ ಮುನ್ನ ‘ಶಿವಾಜಿ ಸುರತ್ಕಲ್​’ ಸಿನಿಮಾ ತೆರೆಕಂಡು ಯಶಸ್ವಿಯಾಗಿತ್ತು. ಸಸ್ಪೆನ್ಸ್​-ಥ್ರಿಲ್ಲರ್​ ಕಥೆಯುಳ್ಳ ಚಿತ್ರ ಎಲ್ಲೆಡೆ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿರುವಾಗಲೇ ಲಾಕ್​ಡೌನ್​ ಜಾರಿ ಆಗಿದ್ದರಿಂದ ಪ್ರದರ್ಶನ ನಿಲ್ಲಿಸುವುದು ಅನಿವಾರ್ಯ ಆಯಿತು. ಬಳಿಕ ಓಟಿಟಿ ಮೂಲಕವೂ ಈ ಸಿನಿಮಾ ಹೆಚ್ಚಿನ ಜನರನ್ನು ತಲುಪಿತ್ತು. ಮೊದಲ ಪಾರ್ಟ್​ನಲ್ಲಿ ಇದ್ದ ಶಿವಾಜಿ ಸುರತ್ಕಲ್​ ಪಾತ್ರ ಎರಡನೇ ಪಾರ್ಟ್​​ನಲ್ಲೂ ಮುಂದುವರಿಯುತ್ತಿದೆ. ಪತ್ತೆದಾರಿ ಆಗಿರುವ ಆತ ಈಗ ಹೊಸ ಕೇಸ್​ ಭೇದಿಸಲು ಸಜ್ಜಾಗುತ್ತಿದ್ದಾನೆ.

ಮೊದಲ ಪಾರ್ಟ್​ಗೆ ‘ದಿ ಕೇಸ್​ ಆಫ್​ ರಣಗಿರಿ ರಹಸ್ಯ’ ಎಂಬ ಟ್ಯಾಗ್​ಲೈನ್​ ಇತ್ತು. ಈಗ ಎರಡನೇ ಪಾರ್ಟ್​ಗೆ ‘ದಿ ಮಿಸ್ಟೀರಿಯಸ್​ ಕೇಸ್​ ಆಫ್​ ಮಾಯಾವಿ’ ಎಂಬ ಟ್ಯಾಗ್​ಲೈನ್​ ಇದೆ. ಇದರ ಪೋಸ್ಟರ್​ ಗಮನ ಸೆಳೆಯುತ್ತಿದೆ. ಪತ್ತೇದಾರಿ ಆಗಿರುವ ಶಿವಾಜಿಯ ಕೈಗೆ ಕೋಳ ತೊಡಿಸಲಾಗಿದೆ. ಹಾಗಾದರೆ ಈ ಕೇಸ್​ನಲ್ಲಿ ಆತನೇ ಆರೋಪಿ ಆಗಲಿದ್ದಾನಾ? ಆ ಮಾಯಾವಿ ಯಾರು ಎಂಬ ಪ್ರಶ್ನೆ ಸಿನಿಪ್ರಿಯರ ಮನದಲ್ಲಿ ಮೂಡುವಂತಾಗಿದೆ.

ಅಕ್ಟೋಬರ್​ನಿಂದ ಈ ಚಿತ್ರಕ್ಕೆ ಶೂಟಿಂಗ್​ ಶುರುವಾಗಲಿದೆ. ಹಲವು ಗೆಟಪ್​ಗಳಲ್ಲಿ ರಮೇಶ್​ ಅರವಿಂದ್​ ಕಾಣಿಸಿಕೊಳ್ಳಲಿದ್ದಾರೆ. ಕರ್ನಾಟಕದ ಅನೇಕ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ. ರಾಧಿಕಾ ನಾರಾಯಣ್​ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಟೀಮ್​ ಜೊತೆ ಕೆಲಸ ಮಾಡಲು ರಮೇಶ್​ ಉತ್ಸುಕರಾಗಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಅವರು ಈ ಪೋಸ್ಟರ್​ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಚಿತ್ರರಂಗದ ಸಮಸ್ಯೆಗಳಿಗೆ ಟಿವಿ9 ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಬಳಿ ಪರಿಹಾರ ಕೇಳಿದ ರಮೇಶ್​ ಅರವಿಂದ್​

ಹೇಗಿತ್ತು ಗೊತ್ತಾ ರಮೇಶ್​ ಅರವಿಂದ್ ಮಗಳ ಮದುವೆ?: ಇಲ್ಲಿದೆ ಚಿತ್ರನೋಟ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!